<p>ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾನುವಾರ ಬಕ್ರೀದ್ ಆಚರಿಸಲಾಯಿತು. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.ಬಹಳಷ್ಟು ಮಂದಿ ಹೊಸ ಉಡುಗೆಗಳನ್ನು ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಪ್ರಾರ್ಥನೆ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.<br /><br />‘ಮಳೆ ಇದ್ದಿದ್ದರಿಂದ ಮೈದಾನದಲ್ಲಿ ಪ್ರಾರ್ಥನೆಗೆ ಹೋಗಿಲ್ಲ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದೆವು’ ಎಂದು ಜಾಮಿಯಾ ಮಸೀದಿ ಕಾರ್ಯದರ್ಶಿ ಮುದಾಸೀರ್ ಪಾಷಾ ‘ಪ್ರಜಾವಾಣಿ’ಗೆ ತಿಳಿಸಿದರು.<br /><br />ನಗರದ ಜಾಮಿಯಾ ಮಸೀದಿಯ ಗುರು ರಾಹಿ ಖಾಸ್ಮಿ ಅವರು ಪ್ರವಚನ ನೀಡಿದರು. ಪ್ರಾರ್ಥನೆ ಮುಗಿಸಿ ಹಲವರು ದಾನ ಮಾಡಿದರು.<br /><br />ಸ್ನೇಹಿತರು, ಸಂಬಂಧಿಕರ ಮನೆಗಳಿಗೆ ಭೇಟಿ ನೀಡಿದರು. ಮನೆಗಳಲ್ಲಿ ಬಿರಿಯಾನಿ, ಶಾವಿಗೆ ಪಾಯಸ ಮೊದಲಾದ ಹಬ್ಬದೂಟ ಸವಿದರು.<br /><br />‘ಮಾನವೀಯ ಮೌಲ್ಯ, ಸೋದರತೆ, ಸಹಬಾಳ್ವೆ ಎತ್ತಿಹಿಡಿಯುವುದು, ದೇವನಿಗಾಗಿ ಎಂಥ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬವು ಸಾರುತ್ತದೆ’ ಎಂದು ಉಪ್ಪಳ್ಳಿಯ ಇಬ್ರಾಹಿಂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾನುವಾರ ಬಕ್ರೀದ್ ಆಚರಿಸಲಾಯಿತು. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.ಬಹಳಷ್ಟು ಮಂದಿ ಹೊಸ ಉಡುಗೆಗಳನ್ನು ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಪ್ರಾರ್ಥನೆ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.<br /><br />‘ಮಳೆ ಇದ್ದಿದ್ದರಿಂದ ಮೈದಾನದಲ್ಲಿ ಪ್ರಾರ್ಥನೆಗೆ ಹೋಗಿಲ್ಲ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದೆವು’ ಎಂದು ಜಾಮಿಯಾ ಮಸೀದಿ ಕಾರ್ಯದರ್ಶಿ ಮುದಾಸೀರ್ ಪಾಷಾ ‘ಪ್ರಜಾವಾಣಿ’ಗೆ ತಿಳಿಸಿದರು.<br /><br />ನಗರದ ಜಾಮಿಯಾ ಮಸೀದಿಯ ಗುರು ರಾಹಿ ಖಾಸ್ಮಿ ಅವರು ಪ್ರವಚನ ನೀಡಿದರು. ಪ್ರಾರ್ಥನೆ ಮುಗಿಸಿ ಹಲವರು ದಾನ ಮಾಡಿದರು.<br /><br />ಸ್ನೇಹಿತರು, ಸಂಬಂಧಿಕರ ಮನೆಗಳಿಗೆ ಭೇಟಿ ನೀಡಿದರು. ಮನೆಗಳಲ್ಲಿ ಬಿರಿಯಾನಿ, ಶಾವಿಗೆ ಪಾಯಸ ಮೊದಲಾದ ಹಬ್ಬದೂಟ ಸವಿದರು.<br /><br />‘ಮಾನವೀಯ ಮೌಲ್ಯ, ಸೋದರತೆ, ಸಹಬಾಳ್ವೆ ಎತ್ತಿಹಿಡಿಯುವುದು, ದೇವನಿಗಾಗಿ ಎಂಥ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬವು ಸಾರುತ್ತದೆ’ ಎಂದು ಉಪ್ಪಳ್ಳಿಯ ಇಬ್ರಾಹಿಂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>