<p><strong>ಚಿಕ್ಕಮಗಳೂರು</strong>: ಜಿಲ್ಲೆಯ ಎಲ್ಲ ರಸ್ತೆಗಳಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಈಗಾಗಲೇ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್ಗಳನ್ನು ಸರಿಪಡಿಸಿ ವಾಹನ ಸವಾರರಿಗೆ ಗೊತ್ತಾಗುವಂತೆ ರಸ್ತೆ ಸುರಕ್ಷಾ ಫಲಕ ಅಳವಡಿಸಬೇಕು. ಇತ್ತೀಚೆಗೆ ಅಪಘಾತಗಳು ಹೆಚ್ಚಾಗಿ ಸಾವು– ನೋವುಗಳು ಕೂಡ ಹೆಚ್ಚಾಗುತ್ತಿದ್ದು, ಇವುಗಳನ್ನು ತಪ್ಪಿಸಲು ವೈಜ್ಞಾನಿಕ ವಿಧಾನಗಳನ್ನು ಅನುಸರಿಸಬೇಕು ಎಂದರು.</p>.<p>ವಾಹನ ನಿಲುಗಡೆ ನಿಷೇಧಿಸಬೇಕಾದ ಸ್ಥಳಗಳನ್ನು ಗುರುತಿಸಿ ಅಲ್ಲಿ ಫಲಕ ಅಳವಡಿಸಬೇಕು. ಅಪಘಾತಗಳನ್ನು ತಪ್ಪಿಸಲು ಸಿಗ್ನಲ್ ಅಳವಡಿಸಲಾಗಿದೆ. ನಗರದಲ್ಲಿ ಸಮರ್ಪಕವಾಗಿ ಬೀದಿದೀಪ ಅಳವಡಿಸಲು ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವ್ಯಾಪ್ತಿಯಲ್ಲಿ ಬರುವ ರಸ್ತೆಗಳು, ರಾಷ್ಟ್ರೀಯ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳು ಸೇರುವ ಜಂಕ್ಷನ್ಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.</p>.<p>ನಗರದ ಕೆಲ ಸ್ಥಳಗಳಲ್ಲಿ ಪಾದಚಾರಿ ಮೇಲ್ಸೇತುವೆ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳು ಗುಡ್ಡಗಾಡು ಪ್ರದೇಶದಲ್ಲಿ ಹಾದು ಹೋಗಿದ್ದು, ರಸ್ತೆಗಳ ಬಹುತೇಕ ಭಾಗ ತಿರುವುಗಳಿಂದ ಕೂಡಿವೆ. ಇದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಅಂತಹ ಸ್ಥಳಗಳಲ್ಲೂ ರಸ್ತೆಗಳ ವಿಸ್ತರಣೆ, ತಿರುವು ನೇರಗೊಳಿಸಿ ತಡೆಗೋಡೆ ನಿರ್ಮಿಸಬೇಕು. ಕ್ರಾಶ್ ಬ್ಯಾರಿಯರ್ಗಳನ್ನು ಅಳವಡಿಸಿ ಸೂಚನಾ ಫಲಕ ಅಳವಡಿಸಲು ಕ್ರಮ ವಹಿಸಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಡಿ.ಎನ್. ಶ್ರೀಧರ್, ಪಿಆರ್ಇಡಿ ಅಧಿಕಾರಿ ನಾರಾಯಣಮೂರ್ತಿ, ನಗರಸಭೆ ಆಯುಕ್ತ ಬಿ.ಸಿ. ಬಸವರಾಜ ಹಾಜರಿದ್ದರು.</p>.<p>Cut-off box - ‘ಬ್ಲಾಕ್ ಸ್ಪಾಟ್ ಕಾಮಗಾರಿ ತ್ವರಿತಗೊಳಿಸಿ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರು ಮಾತನಾಡಿ ‘ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಈಗಾಗಲೇ ಗುರುತಿಸಿರುವ ಬ್ಲಾಕ್ ಸ್ಪಾಟ್ಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು. ಅಪಘಾತ ಕಡಿಮೆ ಮಾಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು. ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲೆಯ ಎಲ್ಲ ರಸ್ತೆಗಳಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಈಗಾಗಲೇ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್ಗಳನ್ನು ಸರಿಪಡಿಸಿ ವಾಹನ ಸವಾರರಿಗೆ ಗೊತ್ತಾಗುವಂತೆ ರಸ್ತೆ ಸುರಕ್ಷಾ ಫಲಕ ಅಳವಡಿಸಬೇಕು. ಇತ್ತೀಚೆಗೆ ಅಪಘಾತಗಳು ಹೆಚ್ಚಾಗಿ ಸಾವು– ನೋವುಗಳು ಕೂಡ ಹೆಚ್ಚಾಗುತ್ತಿದ್ದು, ಇವುಗಳನ್ನು ತಪ್ಪಿಸಲು ವೈಜ್ಞಾನಿಕ ವಿಧಾನಗಳನ್ನು ಅನುಸರಿಸಬೇಕು ಎಂದರು.</p>.<p>ವಾಹನ ನಿಲುಗಡೆ ನಿಷೇಧಿಸಬೇಕಾದ ಸ್ಥಳಗಳನ್ನು ಗುರುತಿಸಿ ಅಲ್ಲಿ ಫಲಕ ಅಳವಡಿಸಬೇಕು. ಅಪಘಾತಗಳನ್ನು ತಪ್ಪಿಸಲು ಸಿಗ್ನಲ್ ಅಳವಡಿಸಲಾಗಿದೆ. ನಗರದಲ್ಲಿ ಸಮರ್ಪಕವಾಗಿ ಬೀದಿದೀಪ ಅಳವಡಿಸಲು ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವ್ಯಾಪ್ತಿಯಲ್ಲಿ ಬರುವ ರಸ್ತೆಗಳು, ರಾಷ್ಟ್ರೀಯ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳು ಸೇರುವ ಜಂಕ್ಷನ್ಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.</p>.<p>ನಗರದ ಕೆಲ ಸ್ಥಳಗಳಲ್ಲಿ ಪಾದಚಾರಿ ಮೇಲ್ಸೇತುವೆ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳು ಗುಡ್ಡಗಾಡು ಪ್ರದೇಶದಲ್ಲಿ ಹಾದು ಹೋಗಿದ್ದು, ರಸ್ತೆಗಳ ಬಹುತೇಕ ಭಾಗ ತಿರುವುಗಳಿಂದ ಕೂಡಿವೆ. ಇದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಅಂತಹ ಸ್ಥಳಗಳಲ್ಲೂ ರಸ್ತೆಗಳ ವಿಸ್ತರಣೆ, ತಿರುವು ನೇರಗೊಳಿಸಿ ತಡೆಗೋಡೆ ನಿರ್ಮಿಸಬೇಕು. ಕ್ರಾಶ್ ಬ್ಯಾರಿಯರ್ಗಳನ್ನು ಅಳವಡಿಸಿ ಸೂಚನಾ ಫಲಕ ಅಳವಡಿಸಲು ಕ್ರಮ ವಹಿಸಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಡಿ.ಎನ್. ಶ್ರೀಧರ್, ಪಿಆರ್ಇಡಿ ಅಧಿಕಾರಿ ನಾರಾಯಣಮೂರ್ತಿ, ನಗರಸಭೆ ಆಯುಕ್ತ ಬಿ.ಸಿ. ಬಸವರಾಜ ಹಾಜರಿದ್ದರು.</p>.<p>Cut-off box - ‘ಬ್ಲಾಕ್ ಸ್ಪಾಟ್ ಕಾಮಗಾರಿ ತ್ವರಿತಗೊಳಿಸಿ’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರು ಮಾತನಾಡಿ ‘ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಈಗಾಗಲೇ ಗುರುತಿಸಿರುವ ಬ್ಲಾಕ್ ಸ್ಪಾಟ್ಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು. ಅಪಘಾತ ಕಡಿಮೆ ಮಾಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು. ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>