<p><strong>ಚಿಕ್ಕಮಗಳೂರು</strong>: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನೇಮಕಗೊಂಡಿರುವ ಅರ್ಚಕರಿಗೆ ನಿಯಮಾನುಸಾರ ಪರಿಶೀಲಿಸಿ ವೇತನ ನಿಗದಿಗೆ ಜಿಲ್ಲಾಧಿಕಾರಿ ಸೂಚನೆ ನೀಡುವುದಾಗಿ ಮುಜರಾಯಿ ಸಚಿವರು ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ.</p>.<p>ವಿಧಾನ ಪರಿಷತ್ತಿನ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿ ಗಮನ ಸೆಳೆದಾಗ, ಸಚಿವ ರಾಮಲಿಂಗ ರೆಡ್ಡಿ ಅವರು ಈ ಕುರಿತು ಲಿಖಿತ ಉತ್ತರ ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಗುರುವಾರ ಮಾಹಿತಿ ನೀಡಿದ್ದಾರೆ.</p>.<p>ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಯು ಧಾರ್ಮಿಕ ದತ್ತಿ ಇಲಾಖೆಯ ‘ಎ’ ವರ್ಗದ ಸಂಯುಕ್ತ ಧಾರ್ಮಿಕ ಸಂಸ್ಥೆಯಾಗಿದ್ದು, ಹಲವು ಹೋರಾಟಗಳ ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ 2023ರ ಏಪ್ರಿಲ್ 1ರಂದು ದೇವಾಲಯಕ್ಕೆ ಅರ್ಚಕರ ನೇಮಕ ಮಾಡಲಾಗಿದೆ. ಆದರೆ,ಈವರೆಗೆ ಅರ್ಚಕರಿಗೆ ವೇತನ ನಿಗದಿ ಮಾಡಿಲ್ಲ’ ಎಂದು ಹೇಳಿದ್ದಾರೆ.</p>.<p>ಅರ್ಚಕರು ಆರತಿ ತಟ್ಟೆಯಲ್ಲಿ ಸಂಗ್ರಹವಾಗುತ್ತಿರುವ ಹಣವನ್ನು ಪಡೆಯುತ್ತಿದ್ದು, ಅದರ ಜೊತೆಗೆ ವೇತನ ನೀಡಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆದರೆ, ಈ ಹಿಂದೆ ನೇಮಕವಾಗಿರುವ ಮುಜಾವರ್ಗಳು ತಟ್ಟೆ ಕಾಸು ಪಡೆಯುತ್ತಿದ್ದರೂ ಅವರಿಗೆ ವೇತನ ನಿಗದಿ ಮಾಡಲಾಗಿದೆ. ಆದರೆ, ಅರ್ಚಕರಿಗೆ ಮಾತ್ರ ವೇತನ ನೀಡದಿರುವುದು ಸರಿಯಲ್ಲ ಎಂದು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಇಬ್ಬರು ಅರ್ಚಕರಿಗೆ ತಲಾ ಮಾಸಿಕ ₹9 ಸಾವಿರ ವೇತನ ನಿಗದಿ ಮಾಡಲಾಗಿದ್ದು, ವ್ಯವಸ್ಥಾಪನಾ ಸಮಿತಿ ನಿಧಿಯಿಂದ ಪಾವತಿಸಲು ಅನುಮತಿ ನೀಡಲಾಗಿದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನೇಮಕಗೊಂಡಿರುವ ಅರ್ಚಕರಿಗೆ ನಿಯಮಾನುಸಾರ ಪರಿಶೀಲಿಸಿ ವೇತನ ನಿಗದಿಗೆ ಜಿಲ್ಲಾಧಿಕಾರಿ ಸೂಚನೆ ನೀಡುವುದಾಗಿ ಮುಜರಾಯಿ ಸಚಿವರು ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ.</p>.<p>ವಿಧಾನ ಪರಿಷತ್ತಿನ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿ ಗಮನ ಸೆಳೆದಾಗ, ಸಚಿವ ರಾಮಲಿಂಗ ರೆಡ್ಡಿ ಅವರು ಈ ಕುರಿತು ಲಿಖಿತ ಉತ್ತರ ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಗುರುವಾರ ಮಾಹಿತಿ ನೀಡಿದ್ದಾರೆ.</p>.<p>ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಯು ಧಾರ್ಮಿಕ ದತ್ತಿ ಇಲಾಖೆಯ ‘ಎ’ ವರ್ಗದ ಸಂಯುಕ್ತ ಧಾರ್ಮಿಕ ಸಂಸ್ಥೆಯಾಗಿದ್ದು, ಹಲವು ಹೋರಾಟಗಳ ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ 2023ರ ಏಪ್ರಿಲ್ 1ರಂದು ದೇವಾಲಯಕ್ಕೆ ಅರ್ಚಕರ ನೇಮಕ ಮಾಡಲಾಗಿದೆ. ಆದರೆ,ಈವರೆಗೆ ಅರ್ಚಕರಿಗೆ ವೇತನ ನಿಗದಿ ಮಾಡಿಲ್ಲ’ ಎಂದು ಹೇಳಿದ್ದಾರೆ.</p>.<p>ಅರ್ಚಕರು ಆರತಿ ತಟ್ಟೆಯಲ್ಲಿ ಸಂಗ್ರಹವಾಗುತ್ತಿರುವ ಹಣವನ್ನು ಪಡೆಯುತ್ತಿದ್ದು, ಅದರ ಜೊತೆಗೆ ವೇತನ ನೀಡಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆದರೆ, ಈ ಹಿಂದೆ ನೇಮಕವಾಗಿರುವ ಮುಜಾವರ್ಗಳು ತಟ್ಟೆ ಕಾಸು ಪಡೆಯುತ್ತಿದ್ದರೂ ಅವರಿಗೆ ವೇತನ ನಿಗದಿ ಮಾಡಲಾಗಿದೆ. ಆದರೆ, ಅರ್ಚಕರಿಗೆ ಮಾತ್ರ ವೇತನ ನೀಡದಿರುವುದು ಸರಿಯಲ್ಲ ಎಂದು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಇಬ್ಬರು ಅರ್ಚಕರಿಗೆ ತಲಾ ಮಾಸಿಕ ₹9 ಸಾವಿರ ವೇತನ ನಿಗದಿ ಮಾಡಲಾಗಿದ್ದು, ವ್ಯವಸ್ಥಾಪನಾ ಸಮಿತಿ ನಿಧಿಯಿಂದ ಪಾವತಿಸಲು ಅನುಮತಿ ನೀಡಲಾಗಿದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>