<p><strong>ಚಿಕ್ಕಮಗಳೂರು</strong>: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಚಿಕ್ಕಮಗಳೂರು ಹಾಗೂ ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಜಾನುವಾರುಗಳಿಗೆ ತಗುಲುವ ಕಾಲುಬಾಯಿ ರೋಗಕ್ಕೆ ಅ. 21ರಿಂದ ನ. 20ರವರೆಗೆ ಜಿಲ್ಲೆಯಾದ್ಯಂತ ದನ, ಎಮ್ಮೆಗಳಿಗೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎರಡನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಲಸಿಕೆದಾರರು ಪ್ರತಿ ದಿನ ಬೆಳಿಗ್ಗೆ ತಮ್ಮ ಗ್ರಾಮಗಳಿಗೆ ಭೇಟಿ ನೀಡಿದಾಗ, ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಬೇಕಾಗಿ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ ವತಿಯಿಂದ ಮನವಿ ಮಾಡಲಾಗಿದೆ.</p>.<p>ಲಸಿಕಾ ಕಾರ್ಯಕ್ರಮವನ್ನು ಪ್ರತಿದಿನ ಯಾವ ಯಾವ ಗ್ರಾಮಗಳಲ್ಲಿ ಹಾಕಲಾಗುತ್ತದೆ ಎಂಬ ಮಾಹಿತಿಯನ್ನು ಸದರಿ ಗ್ರಾಮಕ್ಕೆ ಮೂರು ದಿನ ಮುಂಚಿತವಾಗಿ ತಿಳಿಯ ಪಡಿಸಲಾಗುವುದು.</p>.<p>ವಿಜ್ಞಾನ ವಸ್ತು ಪ್ರದರ್ಶನ ಚಿಕ್ಕಮಗಳೂರು: ಎ.ಪಿ.ಜೆ ಅಬ್ದುಲ್ ಕಲಾಂ ಜನ್ಮದಿನ ಹಿನ್ನೆಲೆ ನಗರದ ಶ್ರೀಸಾಯಿ ಏಂಜಲ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಯೋಜನಾ ವಿಜ್ಞಾನಿ ಎಸ್. ಸುನಯಾನ ಉದ್ಘಾಟಿಸಿದರು. ಶಾಲೆಯ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಪ್ರಾಯೋಗಿಕ ಮಾದರಿಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪ್ರದರ್ಶನ ಮಾಡಿದರು. ಶ್ರೀಸಾಯಿ ಏಂಜಲ್ಸ್ ಶಾಲೆಯ ಸಂಸ್ಥಾಪಕರಾದ ವಿಜಯ ನಾಗೇಶ್ ನಾಗೇಶ್ ಪ್ರಾಂಶುಪಾಲ ಯಾಮಿನಿ ಸವೂರ್ ಹಾಗೂ ಜಂಟಿ ಕಾರ್ಯದರ್ಶಿಗಳಾದ ಎಂ.ಜೆ.ಕಾರ್ತಿಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಚಿಕ್ಕಮಗಳೂರು ಹಾಗೂ ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಜಾನುವಾರುಗಳಿಗೆ ತಗುಲುವ ಕಾಲುಬಾಯಿ ರೋಗಕ್ಕೆ ಅ. 21ರಿಂದ ನ. 20ರವರೆಗೆ ಜಿಲ್ಲೆಯಾದ್ಯಂತ ದನ, ಎಮ್ಮೆಗಳಿಗೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎರಡನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಲಸಿಕೆದಾರರು ಪ್ರತಿ ದಿನ ಬೆಳಿಗ್ಗೆ ತಮ್ಮ ಗ್ರಾಮಗಳಿಗೆ ಭೇಟಿ ನೀಡಿದಾಗ, ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಬೇಕಾಗಿ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ ವತಿಯಿಂದ ಮನವಿ ಮಾಡಲಾಗಿದೆ.</p>.<p>ಲಸಿಕಾ ಕಾರ್ಯಕ್ರಮವನ್ನು ಪ್ರತಿದಿನ ಯಾವ ಯಾವ ಗ್ರಾಮಗಳಲ್ಲಿ ಹಾಕಲಾಗುತ್ತದೆ ಎಂಬ ಮಾಹಿತಿಯನ್ನು ಸದರಿ ಗ್ರಾಮಕ್ಕೆ ಮೂರು ದಿನ ಮುಂಚಿತವಾಗಿ ತಿಳಿಯ ಪಡಿಸಲಾಗುವುದು.</p>.<p>ವಿಜ್ಞಾನ ವಸ್ತು ಪ್ರದರ್ಶನ ಚಿಕ್ಕಮಗಳೂರು: ಎ.ಪಿ.ಜೆ ಅಬ್ದುಲ್ ಕಲಾಂ ಜನ್ಮದಿನ ಹಿನ್ನೆಲೆ ನಗರದ ಶ್ರೀಸಾಯಿ ಏಂಜಲ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಯೋಜನಾ ವಿಜ್ಞಾನಿ ಎಸ್. ಸುನಯಾನ ಉದ್ಘಾಟಿಸಿದರು. ಶಾಲೆಯ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಪ್ರಾಯೋಗಿಕ ಮಾದರಿಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪ್ರದರ್ಶನ ಮಾಡಿದರು. ಶ್ರೀಸಾಯಿ ಏಂಜಲ್ಸ್ ಶಾಲೆಯ ಸಂಸ್ಥಾಪಕರಾದ ವಿಜಯ ನಾಗೇಶ್ ನಾಗೇಶ್ ಪ್ರಾಂಶುಪಾಲ ಯಾಮಿನಿ ಸವೂರ್ ಹಾಗೂ ಜಂಟಿ ಕಾರ್ಯದರ್ಶಿಗಳಾದ ಎಂ.ಜೆ.ಕಾರ್ತಿಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>