ಮಳೆ ಜೋರಾಗಿದ್ದರಿಂದ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲು ಪರದಾಡಿದರೆ, ನಿತ್ಯದ ಕೆಲಸಗಳಿಗೆ ತೆರಳುವ ಸಾರ್ವಜನಿಕರು ಮಳೆಯ ನಡುವೆ ಸಾಗಲು ತೊಂದರೆಯಾಯಿತು. ಬೆಳಿಗ್ಗೆ ನಾಲ್ಕು ಗಂಟೆಗೂ ಅಧಿಕ ಕಾಲ ಎಡಬಿಡದೇ ಮಳೆ ಸುರಿದಿದ್ದರಿಂದ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕಿದರು. ಪರಿಣಾಮ ಕಾಫಿ ತೋಟ, ಭತ್ತದ ಗದ್ದೆಗಳಿಗೆ ಬಹುತೇಕ ಕಾರ್ಮಿಕರಿಲ್ಲದೆ ಜರೆ ಘೋಷಿಸುವಂತಾಯಿತು.