<p><strong>ನರಸಿಂಹರಾಜಪುರ</strong>: ಭಾರಿ ಗಾಳಿ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದ್ದು, ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಶುಕ್ರವಾರ ಮಳೆ ಹಾನಿ ಸಂಭವಿಸಿದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ದಿನನಿತ್ಯ ದುಡಿದು ಜೀವನ ಸಾಗಿಸುವ ಕುಟುಂಬಗಳಿಗೆ ಹೊಸ ಮನೆಯನ್ನು ನಿರ್ಮಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಕ್ಕು ಪತ್ರ ಇಲ್ಲದ ಮನೆಗಳಿಗೆ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿಸಿ ಹಕ್ಕು ಪತ್ರ ವಿತರಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚಿಸಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ ಮಾತನಾಡಿ,ಪ ‘ಟ್ಟಣದ 1ನೇ ವಾರ್ಡ್ನ ಹಿಳುವಳ್ಳಿಯಲ್ಲಿ 58 ಮನೆಗಳಿಗೆ ಹಕ್ಕು ಪತ್ರವಿಲ್ಲ. ಮಳೆಗಾಲದಲ್ಲಿ ಮನೆ ಹಾನಿಯಾದರೆ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಹಕ್ಕು ಪತ್ರವಿಲ್ಲ ಇಲ್ಲದ ಕಾರಣ ಪರಿಹಾರ ವಿತರಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ ಅನೇಕ ಬಾರಿ ಪಟ್ಟಣ ಪಂಚಾಯಿತಿಯಿಂದ ಈ ಮನೆಗಳಿಗೆ ಹಕ್ಕು ಪತ್ರ ನೀಡುವಂತೆ ಅಕ್ರಮ ಸಕ್ರಮದಡಿ ಜಿಲ್ಲಾಧಿಕಾರಿ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು ನಿಯೋಗ ತೆರಳಿ ಹಕ್ಕು ಪತ್ರ ವಿತರಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.</p>.<p>ಪಟ್ಟಣದ 1ನೇ ವಾರ್ಡಿನ ನಾಗರತ್ನ ಎಂಬುವರ ಮನೆ ಧರೆಗುರುಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ</strong>: ಭಾರಿ ಗಾಳಿ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದ್ದು, ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಶುಕ್ರವಾರ ಮಳೆ ಹಾನಿ ಸಂಭವಿಸಿದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ದಿನನಿತ್ಯ ದುಡಿದು ಜೀವನ ಸಾಗಿಸುವ ಕುಟುಂಬಗಳಿಗೆ ಹೊಸ ಮನೆಯನ್ನು ನಿರ್ಮಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಕ್ಕು ಪತ್ರ ಇಲ್ಲದ ಮನೆಗಳಿಗೆ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿಸಿ ಹಕ್ಕು ಪತ್ರ ವಿತರಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚಿಸಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ ಮಾತನಾಡಿ,ಪ ‘ಟ್ಟಣದ 1ನೇ ವಾರ್ಡ್ನ ಹಿಳುವಳ್ಳಿಯಲ್ಲಿ 58 ಮನೆಗಳಿಗೆ ಹಕ್ಕು ಪತ್ರವಿಲ್ಲ. ಮಳೆಗಾಲದಲ್ಲಿ ಮನೆ ಹಾನಿಯಾದರೆ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಹಕ್ಕು ಪತ್ರವಿಲ್ಲ ಇಲ್ಲದ ಕಾರಣ ಪರಿಹಾರ ವಿತರಿಸಲು ಸಾಧ್ಯವಾಗುವುದಿಲ್ಲ. ಈ ಹಿಂದೆ ಅನೇಕ ಬಾರಿ ಪಟ್ಟಣ ಪಂಚಾಯಿತಿಯಿಂದ ಈ ಮನೆಗಳಿಗೆ ಹಕ್ಕು ಪತ್ರ ನೀಡುವಂತೆ ಅಕ್ರಮ ಸಕ್ರಮದಡಿ ಜಿಲ್ಲಾಧಿಕಾರಿ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು ನಿಯೋಗ ತೆರಳಿ ಹಕ್ಕು ಪತ್ರ ವಿತರಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.</p>.<p>ಪಟ್ಟಣದ 1ನೇ ವಾರ್ಡಿನ ನಾಗರತ್ನ ಎಂಬುವರ ಮನೆ ಧರೆಗುರುಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>