<p><strong>ಚಿಕ್ಕಮಗಳೂರು</strong>: ತಾಲ್ಲೂಕಿನಲ್ಲಿ ತೀವ್ರ ಮಳೆಯಿಂದಾಗಿ ಹಾನಿಯಾದ ಗ್ರಾಮಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಳವಾಸೆ, ಶಿರವಾಸೆ, ಹಡ್ಲುಗದ್ದೆ, ಸುಗುಡವಾನಿ, ಗಾಳಿಗುಡ್ಡೆ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಹೋದ ಅವರು ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತ್ವರಿತ ಪರಿಹಾರ ನೀಡಬೇಕು. ಗುಡ್ಡ ಕುಸಿಯುವ ಆತಂಕದಲ್ಲಿರುವ ಮನೆಗಳ ಬದಲಿ ಜಾಗಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಬದಿಯಲ್ಲಿ ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.</p>.<p>ಶಿರವಾಸೆ ಮಾರ್ಗಮಧ್ಯೆ ರಸ್ತೆ ಕುಸಿದಿದೆ. ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಉರುಳಿ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಶಿರವಾಸೆ ಸುತ್ತಮುತ್ತ ರಸ್ತೆ, ಸೇತುವೆ, ವಿದ್ಯುತ್ ಕಂಬ ಸೇರಿದಂತೆ ಅಂದಾಜು ₹50 ಲಕ್ಷ ಮೌಲ್ಯದಷ್ಟು ಹಾನಿಯಾಗಿದೆ. ಈ ಬಗ್ಗೆ ವರದಿ ಸಲ್ಲಿಸುವಂತೆ ತಿಳಿಸಿದರು. ಈ ವೇಳೆ ಸಂಪೂರ್ಣ ಮನೆ ಕಳೆದುಕೊಂಡ ಇಬ್ಬರಿಗೆ ತಲಾ ₹1.20 ಲಕ್ಷ ಪರಿಹಾರದ ಹಣ ಖಾತೆಗೆ ಜಮೆಯಾದ ಪತ್ರವನ್ನು ನೀಡಿದರು.</p>.<p>ತಹಶೀಲ್ದಾರ್ ಸುಮಂತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಾರಾನಾಥ್, ಶಿರವಾಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘುನಾಥ್, ಉಪಾಧ್ಯಕ್ಷೆ ರಾಧಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ತಾಲ್ಲೂಕಿನಲ್ಲಿ ತೀವ್ರ ಮಳೆಯಿಂದಾಗಿ ಹಾನಿಯಾದ ಗ್ರಾಮಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಳವಾಸೆ, ಶಿರವಾಸೆ, ಹಡ್ಲುಗದ್ದೆ, ಸುಗುಡವಾನಿ, ಗಾಳಿಗುಡ್ಡೆ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಹೋದ ಅವರು ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತ್ವರಿತ ಪರಿಹಾರ ನೀಡಬೇಕು. ಗುಡ್ಡ ಕುಸಿಯುವ ಆತಂಕದಲ್ಲಿರುವ ಮನೆಗಳ ಬದಲಿ ಜಾಗಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಬದಿಯಲ್ಲಿ ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.</p>.<p>ಶಿರವಾಸೆ ಮಾರ್ಗಮಧ್ಯೆ ರಸ್ತೆ ಕುಸಿದಿದೆ. ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಉರುಳಿ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಶಿರವಾಸೆ ಸುತ್ತಮುತ್ತ ರಸ್ತೆ, ಸೇತುವೆ, ವಿದ್ಯುತ್ ಕಂಬ ಸೇರಿದಂತೆ ಅಂದಾಜು ₹50 ಲಕ್ಷ ಮೌಲ್ಯದಷ್ಟು ಹಾನಿಯಾಗಿದೆ. ಈ ಬಗ್ಗೆ ವರದಿ ಸಲ್ಲಿಸುವಂತೆ ತಿಳಿಸಿದರು. ಈ ವೇಳೆ ಸಂಪೂರ್ಣ ಮನೆ ಕಳೆದುಕೊಂಡ ಇಬ್ಬರಿಗೆ ತಲಾ ₹1.20 ಲಕ್ಷ ಪರಿಹಾರದ ಹಣ ಖಾತೆಗೆ ಜಮೆಯಾದ ಪತ್ರವನ್ನು ನೀಡಿದರು.</p>.<p>ತಹಶೀಲ್ದಾರ್ ಸುಮಂತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಾರಾನಾಥ್, ಶಿರವಾಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘುನಾಥ್, ಉಪಾಧ್ಯಕ್ಷೆ ರಾಧಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>