ವೇದಿಕೆ ಹಂಚಿಕೊಂಡ ದತ್ತ – ಬೆಳ್ಳಿಪ್ರಕಾಶ್
ಕೇವಲ ಹತ್ತು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯಲ್ಲಿ ಜಿದ್ದಾ ಜಿದ್ದಿಯ ಹೋರಾಟ ನಡೆಸಿದ್ದ ಮಾಜಿ ಶಾಸಕರಾದ ವೈ.ಎಸ್.ವಿ ದತ್ತ ಮತ್ತು ಬೆಳ್ಳಿಪ್ರಕಾಶ್ ಇಬ್ಬರೂ ಪ್ರಥಮ ಬಾರಿ ವೇದಿಕೆ ಹಂಚಿಕೊಂಡರು. ಕೋಮುವಾದಿ ಪಕ್ಷ ಎಂದೇ ಸದಾ ಹೇಳುತ್ತಿದ್ದ ದತ್ತ ಬಿಜೆಪಿಯ ಶಾಲು ಧರಿಸಿದರೆ ಬೆಳ್ಳಿಪ್ರಕಾಶ್ ಜೆಡಿಎಸ್ ಶಾಲು ಧರಿಸಿ ಗಮನ ಸೆಳೆದರು. ಮಾತಿನ ಮಧ್ಯೆ ದತ್ತ ಅವರು ಬೆಳ್ಳಿ ನನ್ನ ಶಿಷ್ಯ. ಆತನ ನೇತೃತ್ವದಲ್ಲೇ ಕಾರ್ಯಕರ್ತರು ಪ್ರಜ್ವಲ್ ಅವರನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಕರೆ ನೀಡಿದರು. ಬೆಳ್ಳಿಪ್ರಕಾಶ್ ಸಹ ನನ್ನ ಗುರುಗಳಾದ ದತ್ತ ಎಂದು ಹೇಳಿ ಒಗ್ಗಟ್ಟು ಪ್ರದರ್ಶಿಸಿದರು.