<p><strong>ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ): </strong>ಅತಿಯಾದ ಮಳೆ, ತಾಲ್ಲೂಕಿನ ಈರುಳ್ಳಿ ಬೆಳೆಗೆ ಮಾರಕವಾಗಿ ಪರಿಣಮಿಸಿದೆ.</p>.<p>ಈರುಳ್ಳಿಯು ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆ. ರೈತರ ಆರ್ಥಿಕ ಮೂಲವೂ ಹೌದು.</p>.<p>‘ತಾಲ್ಲೂಕಿನ ಮುಕ್ಕಾಲು ಭಾಗ ಕಪ್ಪು ಭೂಮಿ ಇದ್ದು, ಈರುಳ್ಳಿ ಬೆಳೆಗೆ ಹೇಳಿ ಮಾಡಿಸಿದಂತಿದೆ. ಸಾಧಾರಣ ಮಳೆಯಾದರೆ, ಉತ್ತಮ ಇಳುವರಿ ಬರುತ್ತದೆ. ಹಾಗಾಗಿಯೇ ಶೇ 90 ಕ್ಕಿಂತ ಹೆಚ್ಚಿನ ರೈತರು ಈರುಳ್ಳಿ ಬೆಳೆಯುತ್ತಾರೆ’ ಎನ್ನುತ್ತಾರೆ ಗೌರಾಪುರದ ಈರುಳ್ಳಿ ಬೆಳೆಗಾರ ರವಿ.</p>.<p>‘ಈ ಸಲದ ಮಳೆ ವಾಡಿಕೆಗಿಂತ ದುಪ್ಪಟ್ಟಾಯಿತು. ಆರಂಭದಲ್ಲಿಯೇ ಹೆಚ್ಚಾದ ಮಳೆ, ಈರುಳ್ಳಿ ಬೆಳವಣಿಗೆಯನ್ನು ಕುಂಠಿತಗೊಳಿಸಿತು. ಬಳಿಕ ಗಡ್ಡೆ ಹಿಗ್ಗದಂತೆ ಮಾಡಿತು. ಕಡೆಗೆ ಬಂದ ಅಲ್ಪ-ಸ್ವಲ್ಪ ಈರುಳ್ಳಿಯನ್ನು ಹೊಲದಿಂದ ಹೊರತೆಗೆಯಲು, ಸ್ವಚ್ಛಗೊಳಿಸಲು, ಮಾರುಕಟ್ಟೆಗೆ ಕೊಂಡೊಯ್ಯಲು ಅಡ್ಡಿ ಮಾಡಿತು. ಇಂದಿಗೂ ಬೆಳೆದ ಈರುಳ್ಳಿಯನ್ನು ಹೊಲದಲ್ಲಿಯೇ ಬಿಟ್ಟಿದ್ದೇವೆ‘ ಎಂದು ಕೃಷಿಕ ಬಸವರಾಜಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಈರುಳ್ಳಿ ಬೆಳೆ ಹಾಳಾಗಿದ್ದರಿಂದ ಸಾಲದ ಬಡ್ಡಿ ಕಟ್ಟಲೂ ಹಣವಿಲ್ಲದೇ ಪರದಾಡುತ್ತಿದ್ದೇವೆ’ ಎಂದು ಈರುಳ್ಳಿ ಬೆಳೆಗಾರ ಹೆಬ್ಬೂರು ಶಿವಣ್ಣ ಅಳಲು ತೋಡಿಕೊಂಡರು.</p>.<p>‘ಈರುಳ್ಳಿ ಹೊಲದಲ್ಲಿದೆ. ಮಳೆಯಿಂದ ಗಡ್ಡೆ ಕೊಳೆಯುವ ಹಂತ ತಲುಪಿವೆ. ಮಾರುಕಟ್ಟೆಯಲ್ಲಿ ಬೆಲೆ ಇಲ್ಲ. ಹೊಲದಲ್ಲಿಯೇ ಬಿಟ್ಟರೂ ಅದರಿಂದ ಮುಂದಿನ ಬೆಳೆಗೆ ಹಾನಿಯಾಗುತ್ತದೆ. ಕೃಷಿ ಕಾರ್ಮಿಕರನ್ನು ಕರೆಸಿ, ಗಡ್ಡೆ ಕಿತ್ತು ಹೊರಕ್ಕೆ ಹಾಕಿಸಲು ಸಾಕಷ್ಟು ಖರ್ಚು ಮಾಡಬೇಕಿದೆ’ ಎಂದು ನಾರಣಾಪುರದ ಪವನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ): </strong>ಅತಿಯಾದ ಮಳೆ, ತಾಲ್ಲೂಕಿನ ಈರುಳ್ಳಿ ಬೆಳೆಗೆ ಮಾರಕವಾಗಿ ಪರಿಣಮಿಸಿದೆ.</p>.<p>ಈರುಳ್ಳಿಯು ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆ. ರೈತರ ಆರ್ಥಿಕ ಮೂಲವೂ ಹೌದು.</p>.<p>‘ತಾಲ್ಲೂಕಿನ ಮುಕ್ಕಾಲು ಭಾಗ ಕಪ್ಪು ಭೂಮಿ ಇದ್ದು, ಈರುಳ್ಳಿ ಬೆಳೆಗೆ ಹೇಳಿ ಮಾಡಿಸಿದಂತಿದೆ. ಸಾಧಾರಣ ಮಳೆಯಾದರೆ, ಉತ್ತಮ ಇಳುವರಿ ಬರುತ್ತದೆ. ಹಾಗಾಗಿಯೇ ಶೇ 90 ಕ್ಕಿಂತ ಹೆಚ್ಚಿನ ರೈತರು ಈರುಳ್ಳಿ ಬೆಳೆಯುತ್ತಾರೆ’ ಎನ್ನುತ್ತಾರೆ ಗೌರಾಪುರದ ಈರುಳ್ಳಿ ಬೆಳೆಗಾರ ರವಿ.</p>.<p>‘ಈ ಸಲದ ಮಳೆ ವಾಡಿಕೆಗಿಂತ ದುಪ್ಪಟ್ಟಾಯಿತು. ಆರಂಭದಲ್ಲಿಯೇ ಹೆಚ್ಚಾದ ಮಳೆ, ಈರುಳ್ಳಿ ಬೆಳವಣಿಗೆಯನ್ನು ಕುಂಠಿತಗೊಳಿಸಿತು. ಬಳಿಕ ಗಡ್ಡೆ ಹಿಗ್ಗದಂತೆ ಮಾಡಿತು. ಕಡೆಗೆ ಬಂದ ಅಲ್ಪ-ಸ್ವಲ್ಪ ಈರುಳ್ಳಿಯನ್ನು ಹೊಲದಿಂದ ಹೊರತೆಗೆಯಲು, ಸ್ವಚ್ಛಗೊಳಿಸಲು, ಮಾರುಕಟ್ಟೆಗೆ ಕೊಂಡೊಯ್ಯಲು ಅಡ್ಡಿ ಮಾಡಿತು. ಇಂದಿಗೂ ಬೆಳೆದ ಈರುಳ್ಳಿಯನ್ನು ಹೊಲದಲ್ಲಿಯೇ ಬಿಟ್ಟಿದ್ದೇವೆ‘ ಎಂದು ಕೃಷಿಕ ಬಸವರಾಜಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಈರುಳ್ಳಿ ಬೆಳೆ ಹಾಳಾಗಿದ್ದರಿಂದ ಸಾಲದ ಬಡ್ಡಿ ಕಟ್ಟಲೂ ಹಣವಿಲ್ಲದೇ ಪರದಾಡುತ್ತಿದ್ದೇವೆ’ ಎಂದು ಈರುಳ್ಳಿ ಬೆಳೆಗಾರ ಹೆಬ್ಬೂರು ಶಿವಣ್ಣ ಅಳಲು ತೋಡಿಕೊಂಡರು.</p>.<p>‘ಈರುಳ್ಳಿ ಹೊಲದಲ್ಲಿದೆ. ಮಳೆಯಿಂದ ಗಡ್ಡೆ ಕೊಳೆಯುವ ಹಂತ ತಲುಪಿವೆ. ಮಾರುಕಟ್ಟೆಯಲ್ಲಿ ಬೆಲೆ ಇಲ್ಲ. ಹೊಲದಲ್ಲಿಯೇ ಬಿಟ್ಟರೂ ಅದರಿಂದ ಮುಂದಿನ ಬೆಳೆಗೆ ಹಾನಿಯಾಗುತ್ತದೆ. ಕೃಷಿ ಕಾರ್ಮಿಕರನ್ನು ಕರೆಸಿ, ಗಡ್ಡೆ ಕಿತ್ತು ಹೊರಕ್ಕೆ ಹಾಕಿಸಲು ಸಾಕಷ್ಟು ಖರ್ಚು ಮಾಡಬೇಕಿದೆ’ ಎಂದು ನಾರಣಾಪುರದ ಪವನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>