<p><strong>ಬೀರೂರು</strong>: ‘ಪತ್ರಕರ್ತರು ಗುಂಪುಗಾರಿಕೆ ತೊರೆದು ಕೆಲಸ ಮಾಡಿದರೆ ಸಾಮಾಜಿಕವಾಗಿ ಗೌರವ ಲಭಿಸುತ್ತದೆ’ ಎಂದು ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಸಿ.ಎಚ್.ಮೂರ್ತಿ ಅಭಿಪ್ರಾಯಪಟ್ಟರು.</p>.<p>ಕಡೂರಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ತಾಲ್ಲೂಕು ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಕಡೂರು ತಾಲ್ಲೂಕು ಸಂಘದ ಅಧ್ಯಕ್ಷ ಟಿ.ಜಿ.ಲೋಕೇಶಪ್ಪ ಮಾತನಾಡಿ, ‘ ಪತ್ರಕರ್ತರ ಗುರುತಿನ ಚೀಟಿ ಪಡೆಯಲು ಮಾತ್ರ ಸಂಘಕ್ಕೆ ಸೇರುವವರಿಗೆ ಮುಂದಿನ ದಿನಗಳಲ್ಲಿ ಗುರುತಿನ ಚೀಟಿ ನೀಡಲಾಗುವುದಿಲ್ಲ. ಸಂಘದ ಪದಾಧಿಕಾರಿಗಳು ಎಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯನಿರತರಾಗಿ ಒಗ್ಗಟ್ಟನ್ನು ತೋರಬೇಕು’ ಎಂದರು.</p>.<p>ಪತ್ರಕರ್ತರ ಗುರುತಿನ ಚೀಟಿಯನ್ನು ತಾಲ್ಲೂಕು ಸಂಘದ ಗೌರವ ಅಧ್ಯಕ್ಷ ಕೆ.ವಿ.ವಾಸು ವಿತರಿಸಿದರು. ಪತ್ರಕರ್ತ ಎಚ್.ಮುರುಗೇಶಪ್ಪ, ಟಿ.ಪ್ರಕಾಶ್, ಪಿ.ಸಿ.ಲೋಕೇಶ್, ಎಂ.ಎಸ್.ರಾಜು, ಲೋಕೇಶಪ್ಪ, ರಮೇಶ್, ರಾಜು.ಎಂ, ಗಿರೀಶ್.ಜಿ, ಬಿ.ಎನ್.ಆನಂದ್, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀರೂರು</strong>: ‘ಪತ್ರಕರ್ತರು ಗುಂಪುಗಾರಿಕೆ ತೊರೆದು ಕೆಲಸ ಮಾಡಿದರೆ ಸಾಮಾಜಿಕವಾಗಿ ಗೌರವ ಲಭಿಸುತ್ತದೆ’ ಎಂದು ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಸಿ.ಎಚ್.ಮೂರ್ತಿ ಅಭಿಪ್ರಾಯಪಟ್ಟರು.</p>.<p>ಕಡೂರಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ತಾಲ್ಲೂಕು ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಕಡೂರು ತಾಲ್ಲೂಕು ಸಂಘದ ಅಧ್ಯಕ್ಷ ಟಿ.ಜಿ.ಲೋಕೇಶಪ್ಪ ಮಾತನಾಡಿ, ‘ ಪತ್ರಕರ್ತರ ಗುರುತಿನ ಚೀಟಿ ಪಡೆಯಲು ಮಾತ್ರ ಸಂಘಕ್ಕೆ ಸೇರುವವರಿಗೆ ಮುಂದಿನ ದಿನಗಳಲ್ಲಿ ಗುರುತಿನ ಚೀಟಿ ನೀಡಲಾಗುವುದಿಲ್ಲ. ಸಂಘದ ಪದಾಧಿಕಾರಿಗಳು ಎಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯನಿರತರಾಗಿ ಒಗ್ಗಟ್ಟನ್ನು ತೋರಬೇಕು’ ಎಂದರು.</p>.<p>ಪತ್ರಕರ್ತರ ಗುರುತಿನ ಚೀಟಿಯನ್ನು ತಾಲ್ಲೂಕು ಸಂಘದ ಗೌರವ ಅಧ್ಯಕ್ಷ ಕೆ.ವಿ.ವಾಸು ವಿತರಿಸಿದರು. ಪತ್ರಕರ್ತ ಎಚ್.ಮುರುಗೇಶಪ್ಪ, ಟಿ.ಪ್ರಕಾಶ್, ಪಿ.ಸಿ.ಲೋಕೇಶ್, ಎಂ.ಎಸ್.ರಾಜು, ಲೋಕೇಶಪ್ಪ, ರಮೇಶ್, ರಾಜು.ಎಂ, ಗಿರೀಶ್.ಜಿ, ಬಿ.ಎನ್.ಆನಂದ್, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>