<p><strong>ತರೀಕೆರೆ</strong>: ಪಟ್ಟಣದ ಹಳಿಯೂರು ಗ್ರಾಮದಲ್ಲಿ ವಾಂತಿ-ಭೇದಿಯಿಂದ 28 ಜನರು ಅಸ್ವಸ್ಥಗೊಂಡಿದ್ದಾರೆ. ಘಟನೆಗೆ ಕಲುಷಿತ ನೀರು ಸೇವನೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. </p>.<p>ಸೋಮವಾರ ಬೆಳಿಗ್ಗೆ ಕೊಳವೆಬಾವಿಯಿಂದ ಪೂರೈಸಲಾದ ನೀರನ್ನು ಗ್ರಾಮಸ್ಥರು ಕುಡಿಯಲು ಮತ್ತು ಅಡುಗೆಗೆ ಬಳಸಿದ್ದಾರೆ. ಸ್ವಲ್ಪದರಲ್ಲೇ ವಾಂತಿ-ಭೇದಿ ಕಾಣಿಸಿಕೊಂಡು ಒಬ್ಬೊಬ್ಬರೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಖಲಾದವರೆಲ್ಲ ಒಂದೇ ಗ್ರಾಮದವರಾದ ಕಾರಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಕೂಡಲೇ ಚಿಕಿತ್ಸೆಗೆ ಕ್ರಮ ವಹಿಸಿ, ಗ್ರಾಮದಲ್ಲೇ ತಾತ್ಕಾಲಿಕ ಶೆಡ್ ತೆರೆದು, ಚಿಕಿತ್ಸೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿದ್ದಾರೆ.</p>.<p>‘ಕೊಳವೆಬಾವಿ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ’ ಎಂದು ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹಳಿಯೂರು ಗ್ರಾಮದಲ್ಲಿ ಕೊಳವೆಬಾವಿ ನೀರನ್ನು ಮಿನಿ ಟ್ಯಾಂಕ್ ಮೂಲಕ ಸಾರ್ವಜನಿಕರಿಗೆ ಪೂರೈಕೆ ಮಾಡಲಾಗುತ್ತಿದೆ. ನಮಗೂ ಭದ್ರಾ ನದಿ ನೀರನ್ನು ಸರಬರಾಜು ಮಾಡಿದರೆ ಇಂತಹ ಸಮಸ್ಯೆಗಳು ಇರುವುದಿಲ್’ಲ ಎಂದು ಗ್ರಾಮದ ಕೆಲವರು ಹೇಳಿದರು. </p>.<p> ಶಾಸಕ ಜಿ.ಎಚ್. ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ಪಟ್ಟಣದ ಹಳಿಯೂರು ಗ್ರಾಮದಲ್ಲಿ ವಾಂತಿ-ಭೇದಿಯಿಂದ 28 ಜನರು ಅಸ್ವಸ್ಥಗೊಂಡಿದ್ದಾರೆ. ಘಟನೆಗೆ ಕಲುಷಿತ ನೀರು ಸೇವನೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. </p>.<p>ಸೋಮವಾರ ಬೆಳಿಗ್ಗೆ ಕೊಳವೆಬಾವಿಯಿಂದ ಪೂರೈಸಲಾದ ನೀರನ್ನು ಗ್ರಾಮಸ್ಥರು ಕುಡಿಯಲು ಮತ್ತು ಅಡುಗೆಗೆ ಬಳಸಿದ್ದಾರೆ. ಸ್ವಲ್ಪದರಲ್ಲೇ ವಾಂತಿ-ಭೇದಿ ಕಾಣಿಸಿಕೊಂಡು ಒಬ್ಬೊಬ್ಬರೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಖಲಾದವರೆಲ್ಲ ಒಂದೇ ಗ್ರಾಮದವರಾದ ಕಾರಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಕೂಡಲೇ ಚಿಕಿತ್ಸೆಗೆ ಕ್ರಮ ವಹಿಸಿ, ಗ್ರಾಮದಲ್ಲೇ ತಾತ್ಕಾಲಿಕ ಶೆಡ್ ತೆರೆದು, ಚಿಕಿತ್ಸೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿದ್ದಾರೆ.</p>.<p>‘ಕೊಳವೆಬಾವಿ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ’ ಎಂದು ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹಳಿಯೂರು ಗ್ರಾಮದಲ್ಲಿ ಕೊಳವೆಬಾವಿ ನೀರನ್ನು ಮಿನಿ ಟ್ಯಾಂಕ್ ಮೂಲಕ ಸಾರ್ವಜನಿಕರಿಗೆ ಪೂರೈಕೆ ಮಾಡಲಾಗುತ್ತಿದೆ. ನಮಗೂ ಭದ್ರಾ ನದಿ ನೀರನ್ನು ಸರಬರಾಜು ಮಾಡಿದರೆ ಇಂತಹ ಸಮಸ್ಯೆಗಳು ಇರುವುದಿಲ್’ಲ ಎಂದು ಗ್ರಾಮದ ಕೆಲವರು ಹೇಳಿದರು. </p>.<p> ಶಾಸಕ ಜಿ.ಎಚ್. ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>