ಅಪಘಾತದಲ್ಲಿ ಸತ್ತ ಕುರಿಗಳು ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಅಮೃತಾಪುರ ಗ್ರಾಮದ ಶಿವಣ್ಣ ಎಂಬುವರಿಗೆ ಸೇರಿವೆ. ಕುರಿಗಳನ್ನು ಮೇಯಿಸಿಕೊಂಡು ಜಾನುಕೊಂಡದ ಬಳಿ ಇರುವ ರೊಪ್ಪಕ್ಕೆ ತೆರಳುತ್ತಿದ್ದಾಗ ಘ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ನಮಸ್ತೆ ಹೋಟೆಲ್ ಬಳಿ ಘಟನೆ ನಡೆದಿದೆ. ಚಿತ್ರದುರ್ಗದ ಕಡೆಯಿಂದ ವೇಗವಾಗಿ ಬಂದ ಲಾರಿ ಕುರಿ ಮಂದೆ ಮೇಲೆ ಏಕಾ ಏಕಿಯಾಗಿ ನುಗ್ಗಿದೆ.