<p><strong>ಧರ್ಮಪುರ (ಚಿತ್ರದುರ್ಗ)</strong>: ಮದುವೆ ಮಾಡಲಿಲ್ಲ ಎಂದು ಕೋಪಗೊಂಡು ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಘಟನೆ ಸಮೀಪದ ಕುಂದಲಗುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.</p>.<p>ಗ್ರಾಮದ ರಂಗಸ್ವಾಮಿ (50) ಕೊಲೆಯಾದವರು. ಅವರ ಮಗ ದೇವರಾಜನ (30) ವಿರುದ್ಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಶನಿವಾರ ರಾತ್ರಿ ಊಟದ ವೇಳೆ ತನಗೆ ಮೊಟ್ಟೆ ಕೊಡಲಿಲ್ಲ ಎಂದು ದೇವರಾಜ, ತಂದೆ ಜೊತೆ ಜಗಳವಾಡಿದ್ದ. ಆಗ ಪರಸ್ಪರರ ನಡುವೆ ಮಾತಿಗೆ ಮಾತು ಬೆಳೆದಿತ್ತು. ಈ ವೇಳೆ ಕುಪಿತಗೊಂಡ ಆರೋಪಿ, ‘ಎಲ್ಲ ವಿಚಾರದಲ್ಲೂ ನನ್ನನ್ನು ಕಡೆಗಣಿಸುತ್ತಿದ್ದೀಯಾ. ಮದುವೆಯನ್ನೂ ಮಾಡಿಸುತ್ತಿಲ್ಲಾ’ ಎಂದು ಹೇಳಿ ಹಲ್ಲೆ ನಡೆಸಿದ್ದಾನೆ. </p>.<p>‘ಆರೋಪಿಯು ಸಿಟ್ಟಿನಲ್ಲಿ ತಂದೆಯ ಎದೆ ಮತ್ತು ಕುತ್ತಿಗೆಯ ಮೇಲೆ ಕಾಲಿಟ್ಟು, ಬಲವಾಗಿ ತುಳಿದು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ (ಚಿತ್ರದುರ್ಗ)</strong>: ಮದುವೆ ಮಾಡಲಿಲ್ಲ ಎಂದು ಕೋಪಗೊಂಡು ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಘಟನೆ ಸಮೀಪದ ಕುಂದಲಗುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.</p>.<p>ಗ್ರಾಮದ ರಂಗಸ್ವಾಮಿ (50) ಕೊಲೆಯಾದವರು. ಅವರ ಮಗ ದೇವರಾಜನ (30) ವಿರುದ್ಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಶನಿವಾರ ರಾತ್ರಿ ಊಟದ ವೇಳೆ ತನಗೆ ಮೊಟ್ಟೆ ಕೊಡಲಿಲ್ಲ ಎಂದು ದೇವರಾಜ, ತಂದೆ ಜೊತೆ ಜಗಳವಾಡಿದ್ದ. ಆಗ ಪರಸ್ಪರರ ನಡುವೆ ಮಾತಿಗೆ ಮಾತು ಬೆಳೆದಿತ್ತು. ಈ ವೇಳೆ ಕುಪಿತಗೊಂಡ ಆರೋಪಿ, ‘ಎಲ್ಲ ವಿಚಾರದಲ್ಲೂ ನನ್ನನ್ನು ಕಡೆಗಣಿಸುತ್ತಿದ್ದೀಯಾ. ಮದುವೆಯನ್ನೂ ಮಾಡಿಸುತ್ತಿಲ್ಲಾ’ ಎಂದು ಹೇಳಿ ಹಲ್ಲೆ ನಡೆಸಿದ್ದಾನೆ. </p>.<p>‘ಆರೋಪಿಯು ಸಿಟ್ಟಿನಲ್ಲಿ ತಂದೆಯ ಎದೆ ಮತ್ತು ಕುತ್ತಿಗೆಯ ಮೇಲೆ ಕಾಲಿಟ್ಟು, ಬಲವಾಗಿ ತುಳಿದು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>