<p><strong>ಹಿರಿಯೂರು:</strong> ನಗರದ ಬೈಪಾಸ್ ರಸ್ತೆಯಲ್ಲಿರುವ ವಿಎಂಪಿ ಮಹಲ್ ಹೋಟೆಲ್ ಆವರಣದಲ್ಲಿ ಜ. 16ರಂದು ಹೊಳಲ್ಕೆರೆಯ ಅರುಣ್ ಕುಮಾರ್ ಅವರ ಮೇಲೆ ಆಸಿಡ್ ದಾಳಿ ಮಾಡಿದ್ದ ಆರೋಪಿಗಳನ್ನು ಮಂಗಳವಾರ ಡಿವೈಎಸ್ಪಿ ಚೈತ್ರಾ ನೇತೃತ್ವದ ತಂಡ ಬಂಧಿಸಿದೆ.</p>.<p>ಬೆಂಗಳೂರಿನ ವಿಪ್ರೊ ಕಂಪನಿಯಲ್ಲಿ ಉತ್ಪಾದನಾ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿರುವ ಟಿ.ಎಸ್.ಪ್ರಜ್ವಲ್, ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಮುಗ್ಗೊಂಡನಹಳ್ಳಿಯ ಪ್ಲಂಬರ್ ಕೆಲಸದ ನಿತಿನ್ ಕುಮಾರ್ ಹಾಗೂ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದ ಬೈಕ್ ಮೆಕ್ಯಾನಿಕ್ ಆರ್. ಗಿರೀಶ್ ಬಂಧಿತ ಆರೋಪಿಗಳು.</p>.<p>ಜ. 16ರಂದು ಬೆಂಗಳೂರಿಗೆ ಬಸ್ನಲ್ಲಿ ಹೊರಟಿದ್ದ ಅರುಣ್ ಕುಮಾರ್ ಮೇಲೆ ಬೈಕ್ನಲ್ಲಿ ಬಂದಿದ್ದ ಇಬ್ಬರು ಯುವಕರು ಮುಖಕ್ಕೆ ಆಸಿಡ್ ಎರಚಿ ಪರಾರಿಯಾಗಿದ್ದರು. ಈ ಕುರಿತು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಡಿವೈಎಸ್ಪಿ ಚೈತ್ರಾ ನೇತೃತ್ವದಲ್ಲಿ ನಗರಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಖಾಂಡಿಕೆ, ಎಸ್ಐಗಳಾದ ಮಂಜುನಾಥ್ ಮತ್ತು ಲಕ್ಷ್ಮೀನಾರಾಯಣ ನೇತೃತ್ವದ ತಂಡವನ್ನು ರಚಿಸಿದ್ದರು.</p>.<p>ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ನಗರದ ಬೈಪಾಸ್ ರಸ್ತೆಯಲ್ಲಿರುವ ವಿಎಂಪಿ ಮಹಲ್ ಹೋಟೆಲ್ ಆವರಣದಲ್ಲಿ ಜ. 16ರಂದು ಹೊಳಲ್ಕೆರೆಯ ಅರುಣ್ ಕುಮಾರ್ ಅವರ ಮೇಲೆ ಆಸಿಡ್ ದಾಳಿ ಮಾಡಿದ್ದ ಆರೋಪಿಗಳನ್ನು ಮಂಗಳವಾರ ಡಿವೈಎಸ್ಪಿ ಚೈತ್ರಾ ನೇತೃತ್ವದ ತಂಡ ಬಂಧಿಸಿದೆ.</p>.<p>ಬೆಂಗಳೂರಿನ ವಿಪ್ರೊ ಕಂಪನಿಯಲ್ಲಿ ಉತ್ಪಾದನಾ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿರುವ ಟಿ.ಎಸ್.ಪ್ರಜ್ವಲ್, ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಮುಗ್ಗೊಂಡನಹಳ್ಳಿಯ ಪ್ಲಂಬರ್ ಕೆಲಸದ ನಿತಿನ್ ಕುಮಾರ್ ಹಾಗೂ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದ ಬೈಕ್ ಮೆಕ್ಯಾನಿಕ್ ಆರ್. ಗಿರೀಶ್ ಬಂಧಿತ ಆರೋಪಿಗಳು.</p>.<p>ಜ. 16ರಂದು ಬೆಂಗಳೂರಿಗೆ ಬಸ್ನಲ್ಲಿ ಹೊರಟಿದ್ದ ಅರುಣ್ ಕುಮಾರ್ ಮೇಲೆ ಬೈಕ್ನಲ್ಲಿ ಬಂದಿದ್ದ ಇಬ್ಬರು ಯುವಕರು ಮುಖಕ್ಕೆ ಆಸಿಡ್ ಎರಚಿ ಪರಾರಿಯಾಗಿದ್ದರು. ಈ ಕುರಿತು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಡಿವೈಎಸ್ಪಿ ಚೈತ್ರಾ ನೇತೃತ್ವದಲ್ಲಿ ನಗರಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಖಾಂಡಿಕೆ, ಎಸ್ಐಗಳಾದ ಮಂಜುನಾಥ್ ಮತ್ತು ಲಕ್ಷ್ಮೀನಾರಾಯಣ ನೇತೃತ್ವದ ತಂಡವನ್ನು ರಚಿಸಿದ್ದರು.</p>.<p>ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>