<p><strong>ಚಿತ್ರದುರ್ಗ</strong>: ‘ಮಠದ ಸುತ್ತ ನಿಮ್ಮ ಸಾಮರ್ಥ್ಯ ಇರುವಷ್ಟು ಜಾಗಕ್ಕೆ ಬೇಲಿ ಹಾಕಿಕೊಳ್ಳಿ. ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿ ಯಾರೊಬ್ಬರೂ ಬರುವುದಿಲ್ಲ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಬಹಿರಂಗ ಸಭೆಯಲ್ಲಿ ಹೇಳಿದ್ದೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ನೆನಪಿಸಿಕೊಂಡರು.</p>.<p>ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಗೊಲ್ಲಗಿರಿಯ ಮಠದ ಆವರಣದಲ್ಲಿ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರಿಗೆ ಶನಿವಾರ ಹಮ್ಮಿಕೊಂಡಿದ್ದ ಗುರುವಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ಮತ್ತು ಮಠ ಬೇರೆಯಲ್ಲ. ಸರ್ಕಾರ ಮಾಡಲಾಗದ ಕಾರ್ಯಗಳನ್ನು ಮಠಗಳು ಮಾಡುತ್ತಿವೆ. ಸಮಾಜ ಕಟ್ಟುವ, ಶಿಕ್ಷಣ ನೀಡುವ ಹಾಗೂ ಸದ್ಭಾವನೆಯ ಸಮಾಜ ನಿರ್ಮಾಣ ಕಾರ್ಯವನ್ನು ಮಠಗಳು ಮಾಡುತ್ತಿವೆ. ಈ ವಿಶಾಲ ಜಾಗಕ್ಕೆ ಬೇಲಿ ಹಾಕಿಕೊಳ್ಳಿ ಎಂದು ಹೇಳಿದ್ದೆ ಅಲ್ಲವೇ’ ಎಂದು ವೇದಿಕೆಯಲ್ಲಿದ್ದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರಿಗೆ ನೆನಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಮಠದ ಸುತ್ತ ನಿಮ್ಮ ಸಾಮರ್ಥ್ಯ ಇರುವಷ್ಟು ಜಾಗಕ್ಕೆ ಬೇಲಿ ಹಾಕಿಕೊಳ್ಳಿ. ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿ ಯಾರೊಬ್ಬರೂ ಬರುವುದಿಲ್ಲ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಬಹಿರಂಗ ಸಭೆಯಲ್ಲಿ ಹೇಳಿದ್ದೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ನೆನಪಿಸಿಕೊಂಡರು.</p>.<p>ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಗೊಲ್ಲಗಿರಿಯ ಮಠದ ಆವರಣದಲ್ಲಿ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರಿಗೆ ಶನಿವಾರ ಹಮ್ಮಿಕೊಂಡಿದ್ದ ಗುರುವಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ಮತ್ತು ಮಠ ಬೇರೆಯಲ್ಲ. ಸರ್ಕಾರ ಮಾಡಲಾಗದ ಕಾರ್ಯಗಳನ್ನು ಮಠಗಳು ಮಾಡುತ್ತಿವೆ. ಸಮಾಜ ಕಟ್ಟುವ, ಶಿಕ್ಷಣ ನೀಡುವ ಹಾಗೂ ಸದ್ಭಾವನೆಯ ಸಮಾಜ ನಿರ್ಮಾಣ ಕಾರ್ಯವನ್ನು ಮಠಗಳು ಮಾಡುತ್ತಿವೆ. ಈ ವಿಶಾಲ ಜಾಗಕ್ಕೆ ಬೇಲಿ ಹಾಕಿಕೊಳ್ಳಿ ಎಂದು ಹೇಳಿದ್ದೆ ಅಲ್ಲವೇ’ ಎಂದು ವೇದಿಕೆಯಲ್ಲಿದ್ದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರಿಗೆ ನೆನಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>