ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | ಅಪರಿಚಿತ ವಾಹನ ಡಿಕ್ಕಿ: ಕರಡಿ ಸಾವು

Published 20 ಜುಲೈ 2024, 5:30 IST
Last Updated 20 ಜುಲೈ 2024, 5:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ನಗರದ ಹೊರವಲಯದ ತಮಟಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ– 4ರಲ್ಲಿ ಕರಡಿಯೊಂದು ಶನಿವಾರ ಮೃತಪಟ್ಟಿದೆ.

ಜೋಗಿಮಟ್ಟಿ ವನ್ಯಧಾಮ, ನಗರದ ಹೊರವಲಯದ ಗುಡ್ಡಗಳಲ್ಲಿ ಕರಡಿಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಶನಿವಾರ ನಸುಕಿನಲ್ಲಿ ವಾಹನ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಡಿಕ್ಕಿಯ ನಂತರ ವಾಹನ ಹರಿದಿರುವ ಕರಡಿ ಅಪ್ಪಚ್ಚಿಯಾಗಿದೆ. ಸ್ಥಳೀಯ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಕರಡಿಯ ಮೃತದೇಹ ತೆರವುಗೊಳಿಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT