ಚಿತ್ರದುರ್ಗ: ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಅಹವಾಲು ಆಲಿಸಿದ ಶಾಸಕ ಕೆ.ಸಿ.ವೀರೇಂದ್ರ, ‘ಕೊಠಡಿಯಲ್ಲಿ ಕೂಡಿಹಾಕಿ ವಾರ್ಡ್ನ್ಗೆ ಬಾರಿಸಿ’ ಎಂದು ಪ್ರಚೋದನೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಾನೂನು ಮತ್ತು ಬಿ.ಇಡಿ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ಗೆ ಭೇಟಿ ನೀಡಿದ್ದ ಶಾಸಕ, ವಾರ್ಡನ್ ವಿರುದ್ಧ ಅಸಮಾಧಾನ ಹೊರಹಾಕುವ ವೇಳೆ ಹೀಗೆ ಮಾತನಾಡಿದ್ದಾರೆ. ಕೊಳೆತ ತರಕಾರಿ ಬಳಸಿ ಮಾಡಿದ ಅಡುಗೆಯಲ್ಲಿ ಹುಳುಗಳಿರುತ್ತವೆ ಎಂದು ವಿದ್ಯಾರ್ಥಿಗಳು ಆ.3ರಂದು ಪ್ರತಿಭಟನೆ ನಡೆಸಿದ್ದರು.