<p><strong>ಹೊಸದುರ್ಗ</strong>: ‘ನಮ್ಮ ಪದವಿ ಕಾಲೇಜು ಜಿಲ್ಲೆಯಲ್ಲಿಯೇ ಉತ್ತಮ ಕಾಲೇಜು ಎಂಬ ಹಿರಿಮೆ ಪಡೆಯಬೇಕೆಂಬ ಅಭಿಲಾಷೆ ಇದೆ. ಉನ್ನತ ಶಿಕ್ಷಣ ಸಚಿವರಿಂದ ಕಾಲೇಜು ಅಭಿವೃದ್ಧಿಗೆ ₹ 2 ಕೋಟಿ ಅನುದಾನ ಕೇಳಲಾಗಿತ್ತು. ಸಚಿವರು ಮನವಿಗೆ ಸ್ಪಂದಿಸಿದ್ದಾರೆ. ಶೀಘ್ರವೇ ಕಾಲೇಜು ಅಭಿವೃದ್ಧಿಗೆ ಹಣ ಬಿಡುಗಡೆಯಾಗಲಿದೆ’ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಭರವಸೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಳೆದ ಬಾರಿ ಶಾಸಕನಾಗಿದ್ದ ಅವಧಿಯಲ್ಲೂ ಪಟ್ಟಣದಲ್ಲಿ ಹಲವು ಹಾಸ್ಟೆಲ್ಗಳನ್ನು ನಿರ್ಮಿಸಲಾಗಿದೆ. ಮತ್ತೆ 100 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು. ಶೀಘ್ರ ಆಡಿಟೋರಿಯಂ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ, ನಿಮ್ಮ ಮುಂದಿನ ಕಾರ್ಯಕ್ರಮ ಅಲ್ಲಿಯೇ ನಡೆಯುವಂತೆ ಮಾಡುತ್ತೇವೆ’ ಎಂದ ಹೇಳಿದರು.</p>.<p>‘ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲು ಸಿದ್ಧರಿದ್ದೇವೆ. ನೀವು ಕೂಡ ಪಠ್ಯ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಕಲಿತು, ತಂದೆ ತಾಯಿಗಳಿಗೆ, ಕುಟುಂಬಕ್ಕೆ, ಪಾಠ ಹೇಳಿಕೊಟ್ಟ ಗುರುಗಳಿಗೆ ಮತ್ತು ನಿಮ್ಮೂರಿಗೆ ಒಳ್ಳೆಯ ಹೆಸರು ತನ್ನಿ. ಬಡ ಕುಟುಂಬದ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತಬೇಕು ಎನ್ನುವ ಸದುದ್ದೇಶದಿಂದ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>‘ಪದವಿ ದೊಡ್ಡದಲ್ಲ, ಸಂಸ್ಕಾರ ದೊಡ್ಡದು. ಯಾವುದೇ ಪದವಿ ಇದ್ದರೂ, ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯ. ನೀವೇ ಈ ದೇಶದ ಆಸ್ತಿ. ನಿಮಗೆ ಸವಾಲುಗಳ ಜೊತೆಗೆ ಜವಾಬ್ದಾರಿಗಳಿದ್ದು, ಎಲ್ಲವನ್ನೂ ಎದುರಿಸುವ ಸ್ಥಿರತೆ ನಿಮ್ಮಲ್ಲಿರಬೇಕು. ಬಡ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದರೆ, ಆ ಕುಟುಂಬದ ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ’ ಎಂದು ಹೇಳಿದರು.</p>.<p>ವಿವಿಧ ಚಟುವಟಿಕೆಗಳಲ್ಲಿ ಜಯಶೀಲರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು. ಈ ವೇಳೆ ಕಾಲೇಜು ಪ್ರಾಂಶುಪಾಲರಾದ ಬ್ರಹ್ಮರಾಂಬ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಲಹಾ ಸಮಿತಿಯ ಸದಸ್ಯರಾದ ಆಗ್ರೋ ಶಿವಣ್ಣ, ಕೆ.ಸಿ.ನಿಂಗಪ್ಪ, ಇಲ್ಕಲ್ ವಿಜಯಕುಮಾರ್, ಅಶ್ರಫ್ ಮತ್ತು ದೀಪಿಕಾ ಸತೀಶ್ ಸೇರಿ ಇನ್ನಿತರ ಮುಖಂಡರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ‘ನಮ್ಮ ಪದವಿ ಕಾಲೇಜು ಜಿಲ್ಲೆಯಲ್ಲಿಯೇ ಉತ್ತಮ ಕಾಲೇಜು ಎಂಬ ಹಿರಿಮೆ ಪಡೆಯಬೇಕೆಂಬ ಅಭಿಲಾಷೆ ಇದೆ. ಉನ್ನತ ಶಿಕ್ಷಣ ಸಚಿವರಿಂದ ಕಾಲೇಜು ಅಭಿವೃದ್ಧಿಗೆ ₹ 2 ಕೋಟಿ ಅನುದಾನ ಕೇಳಲಾಗಿತ್ತು. ಸಚಿವರು ಮನವಿಗೆ ಸ್ಪಂದಿಸಿದ್ದಾರೆ. ಶೀಘ್ರವೇ ಕಾಲೇಜು ಅಭಿವೃದ್ಧಿಗೆ ಹಣ ಬಿಡುಗಡೆಯಾಗಲಿದೆ’ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಭರವಸೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಳೆದ ಬಾರಿ ಶಾಸಕನಾಗಿದ್ದ ಅವಧಿಯಲ್ಲೂ ಪಟ್ಟಣದಲ್ಲಿ ಹಲವು ಹಾಸ್ಟೆಲ್ಗಳನ್ನು ನಿರ್ಮಿಸಲಾಗಿದೆ. ಮತ್ತೆ 100 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು. ಶೀಘ್ರ ಆಡಿಟೋರಿಯಂ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ, ನಿಮ್ಮ ಮುಂದಿನ ಕಾರ್ಯಕ್ರಮ ಅಲ್ಲಿಯೇ ನಡೆಯುವಂತೆ ಮಾಡುತ್ತೇವೆ’ ಎಂದ ಹೇಳಿದರು.</p>.<p>‘ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲು ಸಿದ್ಧರಿದ್ದೇವೆ. ನೀವು ಕೂಡ ಪಠ್ಯ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಕಲಿತು, ತಂದೆ ತಾಯಿಗಳಿಗೆ, ಕುಟುಂಬಕ್ಕೆ, ಪಾಠ ಹೇಳಿಕೊಟ್ಟ ಗುರುಗಳಿಗೆ ಮತ್ತು ನಿಮ್ಮೂರಿಗೆ ಒಳ್ಳೆಯ ಹೆಸರು ತನ್ನಿ. ಬಡ ಕುಟುಂಬದ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತಬೇಕು ಎನ್ನುವ ಸದುದ್ದೇಶದಿಂದ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>‘ಪದವಿ ದೊಡ್ಡದಲ್ಲ, ಸಂಸ್ಕಾರ ದೊಡ್ಡದು. ಯಾವುದೇ ಪದವಿ ಇದ್ದರೂ, ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯ. ನೀವೇ ಈ ದೇಶದ ಆಸ್ತಿ. ನಿಮಗೆ ಸವಾಲುಗಳ ಜೊತೆಗೆ ಜವಾಬ್ದಾರಿಗಳಿದ್ದು, ಎಲ್ಲವನ್ನೂ ಎದುರಿಸುವ ಸ್ಥಿರತೆ ನಿಮ್ಮಲ್ಲಿರಬೇಕು. ಬಡ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದರೆ, ಆ ಕುಟುಂಬದ ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ’ ಎಂದು ಹೇಳಿದರು.</p>.<p>ವಿವಿಧ ಚಟುವಟಿಕೆಗಳಲ್ಲಿ ಜಯಶೀಲರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು. ಈ ವೇಳೆ ಕಾಲೇಜು ಪ್ರಾಂಶುಪಾಲರಾದ ಬ್ರಹ್ಮರಾಂಬ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಲಹಾ ಸಮಿತಿಯ ಸದಸ್ಯರಾದ ಆಗ್ರೋ ಶಿವಣ್ಣ, ಕೆ.ಸಿ.ನಿಂಗಪ್ಪ, ಇಲ್ಕಲ್ ವಿಜಯಕುಮಾರ್, ಅಶ್ರಫ್ ಮತ್ತು ದೀಪಿಕಾ ಸತೀಶ್ ಸೇರಿ ಇನ್ನಿತರ ಮುಖಂಡರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>