<p><strong>ಮೊಳಕಾಲ್ಮುರು:</strong> ‘ನಮ್ಮ ದನಗಳು ಭತ್ತದ ಹೊಟ್ಟು (ಹುಲ್ಲು) ತಿನ್ನುವುದಿಲ್ಲ. ಬದಲಾಗಿ ಮೆಕ್ಕೆಜೋಳದ ಸಪ್ಪೆ ನೀಡುವ ಮೂಲಕ ನೆರವಿಗೆ ಬರಬೇಕು’ ಎಂದು ಜಾನುವಾರು ಮಾಲೀಕರು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಮನವಿ ಮಾಡಿದರು.</p>.<p>ಗುರುವಾರ ತಾಲ್ಲೂಕಿನ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿ ಗೋಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗೆ ಗ್ರಾಮಸ್ಥರು ಈ ಮನವಿ ಸಲ್ಲಿಸಿದರು.</p>.<p>ಒಂದು ದಿನ ಸಪ್ಪೆ ಮತ್ತು ಮತ್ತೊಂದು ದಿನ ಭತ್ತದ ಹುಲ್ಲು ನೀಡುವಂತೆ ಹುಲ್ಲು ಸರಬರಾಜು ಗುತ್ತಿಗೆದಾರರಿಗೆ ಸೂಚಿಸಬೇಕು. ನಾಳೆಯಿಂದಲೇ ಇದು ಜಾರಿಗೆ ತರಬೇಕು ಎಂದು ಸ್ಥಳದಲ್ಲಿದ್ದ ತಹಶೀಲ್ದಾರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಹೆಚ್ಚು ಬಿಸಿಲು ಇರುವ ಕಾರಣ ತಕ್ಷಣವೇ ಶೆಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ನಂತರ ಬಿ.ಜಿ. ಕೆರೆಯ ಮತಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು. ನಂತರ ಆಂಧ್ರಪ್ರದೇಶದ ಗಡಿಭಾಗದ ಎದ್ದಲಬೊಮ್ಮಯ್ಯನ ಹಟ್ಟಿ ಬಳಿ ಸ್ಥಾಪಿಸಿರುವ ಚೆಕ್ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಸಭೆ ನಡೆಸಿ, ಕುಡಿಯುವ ನೀರು, ಚುನಾವಣಾ ಸಿದ್ಧತೆ, ಇ-ಸ್ವತ್ತು ಬಾಕಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ತಹಶೀಲ್ದಾರ್ ಶಂಕರಪ್ಪ, ತಾಲ್ಲೂಕು ಪಂಚಾಯಿತಿ ಇಒ ಕೆ.ಆರ್. ಪ್ರಕಾಶ್, ಪಶು ಇಲಾಖೆಯ ಡಾ. ರಂಗಪ್ಪ, ಜಿಲ್ಲಾ ಪಂಚಾಯಿತಿಯ ನಾಗನಗೌಡ, ಕುಡಿಯುವ ನೀರು ವಿಭಾಗದ ಹರೀಶ್, ಪಿಡಿಒ ಮಲ್ಲಿಕಾರ್ಜುನ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ‘ನಮ್ಮ ದನಗಳು ಭತ್ತದ ಹೊಟ್ಟು (ಹುಲ್ಲು) ತಿನ್ನುವುದಿಲ್ಲ. ಬದಲಾಗಿ ಮೆಕ್ಕೆಜೋಳದ ಸಪ್ಪೆ ನೀಡುವ ಮೂಲಕ ನೆರವಿಗೆ ಬರಬೇಕು’ ಎಂದು ಜಾನುವಾರು ಮಾಲೀಕರು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಮನವಿ ಮಾಡಿದರು.</p>.<p>ಗುರುವಾರ ತಾಲ್ಲೂಕಿನ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿ ಗೋಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗೆ ಗ್ರಾಮಸ್ಥರು ಈ ಮನವಿ ಸಲ್ಲಿಸಿದರು.</p>.<p>ಒಂದು ದಿನ ಸಪ್ಪೆ ಮತ್ತು ಮತ್ತೊಂದು ದಿನ ಭತ್ತದ ಹುಲ್ಲು ನೀಡುವಂತೆ ಹುಲ್ಲು ಸರಬರಾಜು ಗುತ್ತಿಗೆದಾರರಿಗೆ ಸೂಚಿಸಬೇಕು. ನಾಳೆಯಿಂದಲೇ ಇದು ಜಾರಿಗೆ ತರಬೇಕು ಎಂದು ಸ್ಥಳದಲ್ಲಿದ್ದ ತಹಶೀಲ್ದಾರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಹೆಚ್ಚು ಬಿಸಿಲು ಇರುವ ಕಾರಣ ತಕ್ಷಣವೇ ಶೆಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ನಂತರ ಬಿ.ಜಿ. ಕೆರೆಯ ಮತಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು. ನಂತರ ಆಂಧ್ರಪ್ರದೇಶದ ಗಡಿಭಾಗದ ಎದ್ದಲಬೊಮ್ಮಯ್ಯನ ಹಟ್ಟಿ ಬಳಿ ಸ್ಥಾಪಿಸಿರುವ ಚೆಕ್ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಸಭೆ ನಡೆಸಿ, ಕುಡಿಯುವ ನೀರು, ಚುನಾವಣಾ ಸಿದ್ಧತೆ, ಇ-ಸ್ವತ್ತು ಬಾಕಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ತಹಶೀಲ್ದಾರ್ ಶಂಕರಪ್ಪ, ತಾಲ್ಲೂಕು ಪಂಚಾಯಿತಿ ಇಒ ಕೆ.ಆರ್. ಪ್ರಕಾಶ್, ಪಶು ಇಲಾಖೆಯ ಡಾ. ರಂಗಪ್ಪ, ಜಿಲ್ಲಾ ಪಂಚಾಯಿತಿಯ ನಾಗನಗೌಡ, ಕುಡಿಯುವ ನೀರು ವಿಭಾಗದ ಹರೀಶ್, ಪಿಡಿಒ ಮಲ್ಲಿಕಾರ್ಜುನ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>