<p><strong>ಮೊಳಕಾಲ್ಮುರು</strong>: ₹ 1 ಕೋಟಿ ವೆಚ್ಚದಲ್ಲಿ ವಿಧಾನಸಭಾ ಕ್ಷೇತ್ರದ ಗೌರಸಮುದ್ರ– ಕೋನಸಾಗರ ಸಂಕರ್ಪ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ಸೋಮವಾರ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.</p>.<p>ಗೌರಸಮುದ್ರವು ಐತಿಹಾಸಿಕ ಮಾರಮ್ಮದೇವಿ ಮೂಲ ಸ್ಥಳವಾಗಿದ್ದು, ನಿತ್ಯ ಸಾವಿರಾರು ಭಕ್ತರು ಬಂದು ಹೋಗುತ್ತಾರೆ. ಬಳ್ಳಾರಿ, ಆಂಧ್ರಪ್ರದೇಶ, ಮೊಳಕಾಲ್ಮುರು ಭಾಗದಿಂದ ಗೌರಸಮುದ್ರವನ್ನು ಸಂಪರ್ಕಿಸಲು ಈ ರಸ್ತೆ ಮುಖ್ಯ ಸಂಪರ್ಕವಾಗಿದೆ. ಸೆಪ್ಟಂಬರ್ನಲ್ಲಿ ಮಾರಮ್ಮದೇವಿ ಜಾತ್ರೆ ಇರುವ ಕಾರಣ ಅದರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಇದರಿಂದ ಗೌರಸಮುದ್ರವನ್ನು ಸಂಪರ್ಕಿಸುವ ಬಹುತೇಕ ಎಲ್ಲ ರಸ್ತೆಗಳು ನವೀಕರಣ ಆದಂತಾಗುತ್ತದೆ ಎಂದರು.</p>.<p>ತಹಶೀಲ್ದಾರ್ ಟಿ.ಜಗದೀಶ್, ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀನಾರಾಯಣ, ಗ್ರಾಮ ಪಂಚಾಯಿತಿ ಅಧ್ಕ್ಷಕ್ಷ ರಾಮಮೂರ್ತಿ, ಗೌರಸಮುದ್ರದ ಓಬಣ್ಣ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್.ಖಾದರ್, ಜಿಲ್ಲಾ ಘಟಕದ ಉಪಾಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ಕುರುಬ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ₹ 1 ಕೋಟಿ ವೆಚ್ಚದಲ್ಲಿ ವಿಧಾನಸಭಾ ಕ್ಷೇತ್ರದ ಗೌರಸಮುದ್ರ– ಕೋನಸಾಗರ ಸಂಕರ್ಪ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ಸೋಮವಾರ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.</p>.<p>ಗೌರಸಮುದ್ರವು ಐತಿಹಾಸಿಕ ಮಾರಮ್ಮದೇವಿ ಮೂಲ ಸ್ಥಳವಾಗಿದ್ದು, ನಿತ್ಯ ಸಾವಿರಾರು ಭಕ್ತರು ಬಂದು ಹೋಗುತ್ತಾರೆ. ಬಳ್ಳಾರಿ, ಆಂಧ್ರಪ್ರದೇಶ, ಮೊಳಕಾಲ್ಮುರು ಭಾಗದಿಂದ ಗೌರಸಮುದ್ರವನ್ನು ಸಂಪರ್ಕಿಸಲು ಈ ರಸ್ತೆ ಮುಖ್ಯ ಸಂಪರ್ಕವಾಗಿದೆ. ಸೆಪ್ಟಂಬರ್ನಲ್ಲಿ ಮಾರಮ್ಮದೇವಿ ಜಾತ್ರೆ ಇರುವ ಕಾರಣ ಅದರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಇದರಿಂದ ಗೌರಸಮುದ್ರವನ್ನು ಸಂಪರ್ಕಿಸುವ ಬಹುತೇಕ ಎಲ್ಲ ರಸ್ತೆಗಳು ನವೀಕರಣ ಆದಂತಾಗುತ್ತದೆ ಎಂದರು.</p>.<p>ತಹಶೀಲ್ದಾರ್ ಟಿ.ಜಗದೀಶ್, ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀನಾರಾಯಣ, ಗ್ರಾಮ ಪಂಚಾಯಿತಿ ಅಧ್ಕ್ಷಕ್ಷ ರಾಮಮೂರ್ತಿ, ಗೌರಸಮುದ್ರದ ಓಬಣ್ಣ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್.ಖಾದರ್, ಜಿಲ್ಲಾ ಘಟಕದ ಉಪಾಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ಕುರುಬ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>