<p><strong>ಶಿವಮೊಗ್ಗ</strong>: ಕರ್ನಾಟಕ ಮತ್ತು ಮುಂಬೈ ನಡುವಣ ಕೂಚ್ ಬೆಹಾರ್ ಟ್ರೋಫಿ ಫೈನಲ್ ಪಂದ್ಯ ಜ.12ರಿಂದ 15ರವರೆಗೆ ನಗರದ ಕೆಎಸ್ಸಿಎ ನವುಲೆ ಕ್ರೀಡಾಂಗಣದಲ್ಲಿ ನಡೆಯಲಿದೆ.</p>.<p>‘ಪ್ರತಿದಿನ ಬೆಳಿಗ್ಗೆ 9.30ಕ್ಕೆ ಪಂದ್ಯ ಆರಂಭವಾಗಲಿದೆ. ಸಂಜೆ 4.30ಕ್ಕೆ ದಿನದಾಟ ಕೊನೆಗೊಳ್ಳಲಿದೆ. ಪ್ರತಿದಿನ ಸರಾಸರಿ 90 ಓವರ್ಗಳ ಆಟ ನಡೆಯಲಿದೆ. ಈ ಪಂದ್ಯ ಶಿವಮೊಗ್ಗದಲ್ಲಿ ನಡೆಯುತ್ತಿರುವುದು ಅತ್ಯಂತ ಗೌರವ ತರುವ ವಿಷಯ’ ಎಂದು ಕೆಎಸ್ಸಿಎ ಶಿವಮೊಗ್ಗ ವಲಯದ ಸಂಚಾಲಕ ಎಚ್.ಎಸ್.ಸದಾನಂದ, ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. </p>.<p>‘19 ವರ್ಷದೊಳಗಿನವರ ತಂಡಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. 1945ರಿಂದಲೂ ಇದನ್ನು ಆಯೋಜಿಸುತ್ತಾ ಬರಲಾಗಿದೆ’ ಎಂದರು.</p>.<p>‘ಬಿಸಿಸಿಐ ಇದರ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದು, ಉದಯೋನ್ಮುಖ ಆಟಗಾರರಿಗೆ ವೇದಿಕೆ ಕಲ್ಪಿಸುವಲ್ಲಿ ಈ ಟೂರ್ನಿ ಪ್ರಮುಖ ಪಾತ್ರ ವಹಿಸುತ್ತದೆ. ಪಂದ್ಯದ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇದೆ’ ಎಂದು ತಿಳಿಸಿದರು.</p>.<p>ಪ್ರಮುಖರಾದ ರಾಜೇಂದ್ರ ಕುಮಾರ್, ಕೆ.ಎಸ್. ಸುಬ್ರಹ್ಮಣ್ಯ, ಐಡಿಯಲ್ ಗೋಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಕರ್ನಾಟಕ ಮತ್ತು ಮುಂಬೈ ನಡುವಣ ಕೂಚ್ ಬೆಹಾರ್ ಟ್ರೋಫಿ ಫೈನಲ್ ಪಂದ್ಯ ಜ.12ರಿಂದ 15ರವರೆಗೆ ನಗರದ ಕೆಎಸ್ಸಿಎ ನವುಲೆ ಕ್ರೀಡಾಂಗಣದಲ್ಲಿ ನಡೆಯಲಿದೆ.</p>.<p>‘ಪ್ರತಿದಿನ ಬೆಳಿಗ್ಗೆ 9.30ಕ್ಕೆ ಪಂದ್ಯ ಆರಂಭವಾಗಲಿದೆ. ಸಂಜೆ 4.30ಕ್ಕೆ ದಿನದಾಟ ಕೊನೆಗೊಳ್ಳಲಿದೆ. ಪ್ರತಿದಿನ ಸರಾಸರಿ 90 ಓವರ್ಗಳ ಆಟ ನಡೆಯಲಿದೆ. ಈ ಪಂದ್ಯ ಶಿವಮೊಗ್ಗದಲ್ಲಿ ನಡೆಯುತ್ತಿರುವುದು ಅತ್ಯಂತ ಗೌರವ ತರುವ ವಿಷಯ’ ಎಂದು ಕೆಎಸ್ಸಿಎ ಶಿವಮೊಗ್ಗ ವಲಯದ ಸಂಚಾಲಕ ಎಚ್.ಎಸ್.ಸದಾನಂದ, ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. </p>.<p>‘19 ವರ್ಷದೊಳಗಿನವರ ತಂಡಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. 1945ರಿಂದಲೂ ಇದನ್ನು ಆಯೋಜಿಸುತ್ತಾ ಬರಲಾಗಿದೆ’ ಎಂದರು.</p>.<p>‘ಬಿಸಿಸಿಐ ಇದರ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದು, ಉದಯೋನ್ಮುಖ ಆಟಗಾರರಿಗೆ ವೇದಿಕೆ ಕಲ್ಪಿಸುವಲ್ಲಿ ಈ ಟೂರ್ನಿ ಪ್ರಮುಖ ಪಾತ್ರ ವಹಿಸುತ್ತದೆ. ಪಂದ್ಯದ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇದೆ’ ಎಂದು ತಿಳಿಸಿದರು.</p>.<p>ಪ್ರಮುಖರಾದ ರಾಜೇಂದ್ರ ಕುಮಾರ್, ಕೆ.ಎಸ್. ಸುಬ್ರಹ್ಮಣ್ಯ, ಐಡಿಯಲ್ ಗೋಪಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>