<p><strong>ನಾಯಕನಹಟ್ಟಿ (ಚಿತ್ರದುರ್ಗ):</strong> ತಮ್ಮ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಯತ್ನಿಸಿದ ಕಳ್ಳರನ್ನು ಹಿಡಿಯಲು ಪೊಲೀಸರು ಸಿನಿಮೀಯ ರೀತಿಯಲ್ಲಿ ಅವರನ್ನು ಬೆನ್ನಟ್ಟಿದ್ದಲ್ಲದೇ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ಘಟನೆ ಸಮೀಪದ ಕುದಾಪುರ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. </p>.<p>7 ಜನ ಕಳ್ಳರು ಬೊಲೆರೋ ಗೂಡ್ಸ್ ವಾಹನದಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಗಸ್ತಿನಲ್ಲಿದ್ದ ನಾಯಕನಹಟ್ಟಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಶ್ರೀನಿಧಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ವಾಹನ ತಡೆದು ಪರಿಶೀಲಿಸಲು ಮುಂದಾಗಿದ್ದಾರೆ. ಆಗ ಕಳ್ಳರು ವಾಹನವನ್ನು ವೇಗವಾಗಿ ಓಡಿಸಿಕೊಂಡು ಬೋಸೆದೇವರಹಟ್ಟಿ ಕಡೆಗೆ ಸಾಗಿದ್ದಾರೆ. ಕೂಡಲೇ ಸಿಬ್ಬಂದಿ ಈ ವಿಷಯವನ್ನು ಪಿಎಸ್ಐ ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ. ಅವರು ಠಾಣೆಯಲ್ಲಿದ್ದ ಸಿಬ್ಬಂದಿಯನ್ನು ಕರೆದುಕೊಂಡು ಜೀಪಿನಲ್ಲಿ ಕಳ್ಳರನ್ನು ಬೆನ್ನಟ್ಟಿದ್ದಾರೆ. </p>.<p>ಪೊಲೀಸ್ ವಾಹನ ತಮ್ಮನ್ನು ಹಿಂಬಾಲಿಸುತ್ತಿರುವುದನ್ನು ಕಂಡ ಕಳ್ಳರು, ಮನುಮೈಲನಹಟ್ಟಿ ಕಡೆಗೆ ವಾಹನ ತಿರುಗಿಸಿದ್ದಾರೆ. ಅಲ್ಲಿಂದ ಕುದಾಪುರಕ್ಕೆ ಹೋಗಿದ್ದಾರೆ. ಅಲ್ಲಿ ಕಳ್ಳರ ವಾಹನ ಕಂಡ ಪಿಎಸ್ಐ ಶಿವಕುಮಾರ್, ಶರಣಾಗುವಂತೆ ಅವರಿಗೆ ಎಚ್ಚರಿಸಿದ್ದಾರೆ. ಅವರು ಬೊಲೆರೋ ವಾಹನದತ್ತ ಹೋಗುತ್ತಿದ್ದಾಗ ಕಳ್ಳರು ಕಲ್ಲು ತೂರಿದ್ದಾರೆ. ಆಗ ಶಿವಕುಮಾರ್ ತಮ್ಮ ಬಳಿ ಇದ್ದ ರಿವಾಲ್ವರ್ನಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. </p>.<p>ಗುಂಡಿನ ಸದ್ದು ಕೇಳಿ ಬೆದರಿದ ಕಳ್ಳರು ಬೊಲೆರೋ ವಾಹನವನ್ನು ಮತ್ತಷ್ಟು ವೇಗವಾಗಿ ಚಲಾಯಿಸಿಕೊಂಡು ಆಂಧ್ರಪ್ರದೇಶದತ್ತ ತೆರಳಿದ್ದಾರೆ. ದಾಳಿಯಿಂದ ಪೊಲೀಸ್ ವಾಹನದ ಗಾಜು ಪುಡಿಯಾಗಿದೆ. ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<p>‘ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕಳ್ಳರು ತೆಲುಗು ಮಾತನಾಡುತ್ತಿದ್ದುದು ಗಮನಕ್ಕೆ ಬಂದಿದೆ. ಅವರು ಆಂಧ್ರಪ್ರದೇಶದವರು ಇರಬಹುದೆಂದು ಅಂದಾಜಿಸಲಾಗಿದೆ. ಶೀಘ್ರವೇ ಅವರನ್ನು ಪತ್ತೆ ಹಚ್ಚುತ್ತೇವೆ’ ಎಂದು ಎಸ್ಪಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ (ಚಿತ್ರದುರ್ಗ):</strong> ತಮ್ಮ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಲು ಯತ್ನಿಸಿದ ಕಳ್ಳರನ್ನು ಹಿಡಿಯಲು ಪೊಲೀಸರು ಸಿನಿಮೀಯ ರೀತಿಯಲ್ಲಿ ಅವರನ್ನು ಬೆನ್ನಟ್ಟಿದ್ದಲ್ಲದೇ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ಘಟನೆ ಸಮೀಪದ ಕುದಾಪುರ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. </p>.<p>7 ಜನ ಕಳ್ಳರು ಬೊಲೆರೋ ಗೂಡ್ಸ್ ವಾಹನದಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಗಸ್ತಿನಲ್ಲಿದ್ದ ನಾಯಕನಹಟ್ಟಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಶ್ರೀನಿಧಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ವಾಹನ ತಡೆದು ಪರಿಶೀಲಿಸಲು ಮುಂದಾಗಿದ್ದಾರೆ. ಆಗ ಕಳ್ಳರು ವಾಹನವನ್ನು ವೇಗವಾಗಿ ಓಡಿಸಿಕೊಂಡು ಬೋಸೆದೇವರಹಟ್ಟಿ ಕಡೆಗೆ ಸಾಗಿದ್ದಾರೆ. ಕೂಡಲೇ ಸಿಬ್ಬಂದಿ ಈ ವಿಷಯವನ್ನು ಪಿಎಸ್ಐ ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ. ಅವರು ಠಾಣೆಯಲ್ಲಿದ್ದ ಸಿಬ್ಬಂದಿಯನ್ನು ಕರೆದುಕೊಂಡು ಜೀಪಿನಲ್ಲಿ ಕಳ್ಳರನ್ನು ಬೆನ್ನಟ್ಟಿದ್ದಾರೆ. </p>.<p>ಪೊಲೀಸ್ ವಾಹನ ತಮ್ಮನ್ನು ಹಿಂಬಾಲಿಸುತ್ತಿರುವುದನ್ನು ಕಂಡ ಕಳ್ಳರು, ಮನುಮೈಲನಹಟ್ಟಿ ಕಡೆಗೆ ವಾಹನ ತಿರುಗಿಸಿದ್ದಾರೆ. ಅಲ್ಲಿಂದ ಕುದಾಪುರಕ್ಕೆ ಹೋಗಿದ್ದಾರೆ. ಅಲ್ಲಿ ಕಳ್ಳರ ವಾಹನ ಕಂಡ ಪಿಎಸ್ಐ ಶಿವಕುಮಾರ್, ಶರಣಾಗುವಂತೆ ಅವರಿಗೆ ಎಚ್ಚರಿಸಿದ್ದಾರೆ. ಅವರು ಬೊಲೆರೋ ವಾಹನದತ್ತ ಹೋಗುತ್ತಿದ್ದಾಗ ಕಳ್ಳರು ಕಲ್ಲು ತೂರಿದ್ದಾರೆ. ಆಗ ಶಿವಕುಮಾರ್ ತಮ್ಮ ಬಳಿ ಇದ್ದ ರಿವಾಲ್ವರ್ನಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. </p>.<p>ಗುಂಡಿನ ಸದ್ದು ಕೇಳಿ ಬೆದರಿದ ಕಳ್ಳರು ಬೊಲೆರೋ ವಾಹನವನ್ನು ಮತ್ತಷ್ಟು ವೇಗವಾಗಿ ಚಲಾಯಿಸಿಕೊಂಡು ಆಂಧ್ರಪ್ರದೇಶದತ್ತ ತೆರಳಿದ್ದಾರೆ. ದಾಳಿಯಿಂದ ಪೊಲೀಸ್ ವಾಹನದ ಗಾಜು ಪುಡಿಯಾಗಿದೆ. ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<p>‘ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕಳ್ಳರು ತೆಲುಗು ಮಾತನಾಡುತ್ತಿದ್ದುದು ಗಮನಕ್ಕೆ ಬಂದಿದೆ. ಅವರು ಆಂಧ್ರಪ್ರದೇಶದವರು ಇರಬಹುದೆಂದು ಅಂದಾಜಿಸಲಾಗಿದೆ. ಶೀಘ್ರವೇ ಅವರನ್ನು ಪತ್ತೆ ಹಚ್ಚುತ್ತೇವೆ’ ಎಂದು ಎಸ್ಪಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>