<p><strong>ಚಳ್ಳಕೆರೆ:</strong> ನಗರದ ಪಾವಗಡ, ಚಿತ್ರದುರ್ಗ, ಬೆಂಗಳೂರು ಹಾಗೂ ಬಳ್ಳಾರಿ ಮಾರ್ಗದ ಮುಖ್ಯರಸ್ತೆಯ ಫುಟ್ಪಾತ್ ಮೇಲಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಸಾಮಾಜಿಕ ಹೋರಾಟಗಾರ ಎಚ್.ಎಸ್.ಸೈಯದ್, ಪ್ರಭಾವಿಗಳೇ ಫುಟ್ಪಾತ್ ಮೇಲೆ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟು ವ್ಯಾಪಾರಸ್ಥರಿಗೆ ಬಾಡಿಗೆ ನೀಡಿದ್ದಾರೆ. ಬೆಳಿಗ್ಗೆ 5.30ರಿಂದ ತರಕಾರಿ, ಸೊಪ್ಪು ಮಾರಾಟದ ಜತೆಗೆ ಸಂಚಾರಿ ತಿಂಡಿ ಹೋಟೆಲ್ ಮತ್ತು ಸಂಜೆ 3 ಗಂಟೆಯಿಂದಲೇ ರಸ್ತೆ ಮೇಲೆ ಎಲ್ಲೆಂದರಲ್ಲಿ ಸಂಚಾರಿ ತಿಂಡಿ ಹೋಟೆಲ್, ಪಾನಿಪೂರಿ, ಗೋಬಿ ಮುಂತಾದ ಅಂಗಡಿಗಳು ತಲೆ ಎತ್ತುತ್ತವೆ. ಇದರಿಂದ ಪಾದಚಾರಿಗಳು ಹಾಗೂ ಶಾಲಾ– ಕಾಲೇಜು ವಿದ್ಯಾರ್ಥಿಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಹೀಗಾಗಿ, ಅಂಗಡಿಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ನಗರದ ಮುಖ್ಯರಸ್ತೆ ಬದಿ ಸದಾ ಲಾರಿ ನಿಂತಿರುತ್ತವೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವುದಲ್ಲದೆ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ರಾತ್ರಿ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆಗಳು ನಡೆದಿವೆ.<br> ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಎಲ್ಲೆಂದರಲ್ಲಿ ದ್ವಿಚಕ್ರವಾಹನ ನಿಲ್ಲಿಸಿ ಅನ್ಯ ಕಾರ್ಯಗಳಿಗೆ ತೆರಳುತ್ತಾರೆ. ಇದರಿಂದ ತುರ್ತು ಚಿಕಿತ್ಸಾ ವಾಹನ ಓಡಾಟಕ್ಕೆ ತುಂಬಾ ತೊಂದರೆಯಾಗುತ್ತದೆ. ಇದರ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ’ ಎಂದು ಸ್ಥಳೀಯ ನಿವಾಸಿ ರಂಗನಾಥ್ ದೂರಿದರು.</p>.<p>‘ರೋಗಿಗಳ ಚಿಕಿತ್ಸೆಗೆ ತೊಂದರೆ ಆಗುವ ಕಾರಣ ಆಸ್ಪತ್ರೆ ಆವರಣದಲ್ಲಿ ದ್ವಿಚಕ್ರ ಸೇರಿ ಯಾವುದೇ ಖಾಸಗಿ ವಾಹನ ನಿಲ್ಲಿಸದಂತೆ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>‘ಬಳ್ಳಾರಿ ಮಾರ್ಗ ರಸ್ತೆಯ ಪೆಟ್ರೊಲ್ ಬಂಕ್ ಬಳಿ ವಿವಿಧ ವಾರ್ಡ್ನಿಂದ ಘನತ್ಯಾಜ್ಯ ತಂದು ಸುರಿಯುವುದರಿಂದ ಮಳೆ ನೀರು ನಿಂತು ಮಲಿನಗೊಳ್ಳುತ್ತದೆ. ಇದರಿಂದ ಡೆಂಗಿ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹಾಗಾಗಿ, ಘನ ತ್ಯಾಜ್ಯ ವಿಲೇವಾರಿ ಮತ್ತು ಮಳೆ ನೀರು ಕಾಲುವೆ ಮೂಲಕ ಮುಂದಕ್ಕೆ ಹರಿಯಲು ಕಾಮಗಾರಿಯ ಕ್ರಿಯಾ ಯೋಜನೆ ರೂಪಿಸಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ತಹಶೀಲ್ದಾರ್ ರೇಹಾನ್ಪಾಷ, ಡಿವೈಎಸ್ಪಿ ಟಿ.ಬಿ.ರಾಜಣ್ಣ, ಪೌರಾಯುಕ್ತ ಚಂದ್ರಪ್ಪ ಮಾತನಾಡಿದರು. ಎಂಜಿನಿಯರ್ ವಿನಯ್, ಕಂದಾಯ ಅಧಿಕಾರಿ ಪಿ.ಎಲ್.ಲಿಂಗೇಗೌಡ, ನಾಮ ನಿರ್ದೇಶನ ಸದಸ್ಯ ಭದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ನಗರದ ಪಾವಗಡ, ಚಿತ್ರದುರ್ಗ, ಬೆಂಗಳೂರು ಹಾಗೂ ಬಳ್ಳಾರಿ ಮಾರ್ಗದ ಮುಖ್ಯರಸ್ತೆಯ ಫುಟ್ಪಾತ್ ಮೇಲಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಸಾಮಾಜಿಕ ಹೋರಾಟಗಾರ ಎಚ್.ಎಸ್.ಸೈಯದ್, ಪ್ರಭಾವಿಗಳೇ ಫುಟ್ಪಾತ್ ಮೇಲೆ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟು ವ್ಯಾಪಾರಸ್ಥರಿಗೆ ಬಾಡಿಗೆ ನೀಡಿದ್ದಾರೆ. ಬೆಳಿಗ್ಗೆ 5.30ರಿಂದ ತರಕಾರಿ, ಸೊಪ್ಪು ಮಾರಾಟದ ಜತೆಗೆ ಸಂಚಾರಿ ತಿಂಡಿ ಹೋಟೆಲ್ ಮತ್ತು ಸಂಜೆ 3 ಗಂಟೆಯಿಂದಲೇ ರಸ್ತೆ ಮೇಲೆ ಎಲ್ಲೆಂದರಲ್ಲಿ ಸಂಚಾರಿ ತಿಂಡಿ ಹೋಟೆಲ್, ಪಾನಿಪೂರಿ, ಗೋಬಿ ಮುಂತಾದ ಅಂಗಡಿಗಳು ತಲೆ ಎತ್ತುತ್ತವೆ. ಇದರಿಂದ ಪಾದಚಾರಿಗಳು ಹಾಗೂ ಶಾಲಾ– ಕಾಲೇಜು ವಿದ್ಯಾರ್ಥಿಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಹೀಗಾಗಿ, ಅಂಗಡಿಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ನಗರದ ಮುಖ್ಯರಸ್ತೆ ಬದಿ ಸದಾ ಲಾರಿ ನಿಂತಿರುತ್ತವೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವುದಲ್ಲದೆ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ರಾತ್ರಿ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆಗಳು ನಡೆದಿವೆ.<br> ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಎಲ್ಲೆಂದರಲ್ಲಿ ದ್ವಿಚಕ್ರವಾಹನ ನಿಲ್ಲಿಸಿ ಅನ್ಯ ಕಾರ್ಯಗಳಿಗೆ ತೆರಳುತ್ತಾರೆ. ಇದರಿಂದ ತುರ್ತು ಚಿಕಿತ್ಸಾ ವಾಹನ ಓಡಾಟಕ್ಕೆ ತುಂಬಾ ತೊಂದರೆಯಾಗುತ್ತದೆ. ಇದರ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ’ ಎಂದು ಸ್ಥಳೀಯ ನಿವಾಸಿ ರಂಗನಾಥ್ ದೂರಿದರು.</p>.<p>‘ರೋಗಿಗಳ ಚಿಕಿತ್ಸೆಗೆ ತೊಂದರೆ ಆಗುವ ಕಾರಣ ಆಸ್ಪತ್ರೆ ಆವರಣದಲ್ಲಿ ದ್ವಿಚಕ್ರ ಸೇರಿ ಯಾವುದೇ ಖಾಸಗಿ ವಾಹನ ನಿಲ್ಲಿಸದಂತೆ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>‘ಬಳ್ಳಾರಿ ಮಾರ್ಗ ರಸ್ತೆಯ ಪೆಟ್ರೊಲ್ ಬಂಕ್ ಬಳಿ ವಿವಿಧ ವಾರ್ಡ್ನಿಂದ ಘನತ್ಯಾಜ್ಯ ತಂದು ಸುರಿಯುವುದರಿಂದ ಮಳೆ ನೀರು ನಿಂತು ಮಲಿನಗೊಳ್ಳುತ್ತದೆ. ಇದರಿಂದ ಡೆಂಗಿ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹಾಗಾಗಿ, ಘನ ತ್ಯಾಜ್ಯ ವಿಲೇವಾರಿ ಮತ್ತು ಮಳೆ ನೀರು ಕಾಲುವೆ ಮೂಲಕ ಮುಂದಕ್ಕೆ ಹರಿಯಲು ಕಾಮಗಾರಿಯ ಕ್ರಿಯಾ ಯೋಜನೆ ರೂಪಿಸಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ತಹಶೀಲ್ದಾರ್ ರೇಹಾನ್ಪಾಷ, ಡಿವೈಎಸ್ಪಿ ಟಿ.ಬಿ.ರಾಜಣ್ಣ, ಪೌರಾಯುಕ್ತ ಚಂದ್ರಪ್ಪ ಮಾತನಾಡಿದರು. ಎಂಜಿನಿಯರ್ ವಿನಯ್, ಕಂದಾಯ ಅಧಿಕಾರಿ ಪಿ.ಎಲ್.ಲಿಂಗೇಗೌಡ, ನಾಮ ನಿರ್ದೇಶನ ಸದಸ್ಯ ಭದ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>