<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ದೇವಸಮುದ್ರ ಬಳಿ ಕೆಲ ದಿನಗಳಿಂದ 2 ಚಿರತೆಗಳು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಪರಮೇಶ್ವರಪ್ಪ ತಾತಾ ಮಠದ ಮುಂಭಾಗದಲ್ಲಿರುವ ಬೆಟ್ಟದಲ್ಲಿ ಈ ಚಿರತೆ ಕಾಣಿಸಿಕೊಂಡಿವೆ. 15 ಕ್ಕೂ ಹೆಚ್ಚು ದಿನಗಳಿಂದ ಆಗಾಗ ಬೆಟ್ಟದ ತುದಿಯಲ್ಲಿ ಕಾಣಿಕೊಳ್ಳುತ್ತಿವೆ. ಇದರಿಂದ ಕುರಿಗಾಹಿಗಳು, ಜಾನುವಾರುಗಳನ್ನು ಮೇಯಿಸುವವರು ಆತಂಕಗೊಂಡಿದ್ದಾರೆ.</p>.<p>ಕುರಿಗಾಹಿಗಳಾದ ಲಕ್ಷ್ಮಣ, ಭೈರಪ್ಪ ಅವರಿಗೆ ಸೇರಿದ ತಲಾ ಒಂದು ಮೇಕೆ, ಬಸಣ್ಣ ಅವರಿಗೆ ಸೇರಿದ ಒಂದು ಕುರಿ, ಇವರ ಕುರಿಹಟ್ಟಿಗಳ 2 ನಾಯಿಗಳು ಈಚೆಗೆ ಚಿರತೆ ದಾಳಿಗೆ ಬಲಿಯಾಗಿವೆ. ಆಗಾಗ ಚಿರೆತೆಗಳು ಬೆಟ್ಟದಿಂದ ಆಹಾರ ಹುಡುಕಿಕೊಂಡು ಬಂದು ಹೋಗುತ್ತಿವೆ. ಇದರಿಂದ ಕೃಷಿ ಕಾರ್ಮಿಕರು, ಜಾನುವಾರು ಪೋಷಕರು ಹೆಚ್ಚು ತೊಂದರೆಗೀಡಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರಸ್ವಾಮಿ ಹೇಳಿದರು. </p>.<p>ತಾಲ್ಲೂಕು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಡಿ.ಎಲ್. ಶ್ರೀಹರ್ಷ ಮಾತನಾಡಿ, ಚಿರತೆಗಳು ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ ಸಿಬ್ಬಂದಿಯನ್ನು ಕಳಿಸಿ ಕೊಡಲಾಗಿತ್ತು. ಚಿರತೆ ಚಲನವಲನಗಳ ಬಗ್ಗೆ ಸಳೀಯರಿಂದ ಮಾಹಿತಿ ಸಂಗ್ರಹಿಸಲಾಗಿದ್ದು, 2 ದಿನಗಳಲ್ಲಿ ಬೋನ್ ಇಟ್ಟು ಚಿರತೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು. ಚಿರತೆಗಳು ಕಾಣಿಸಿಕೊಂಡಿರುವ ಪ್ರದೇಶವು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ದೇವಸಮುದ್ರ ಬಳಿ ಕೆಲ ದಿನಗಳಿಂದ 2 ಚಿರತೆಗಳು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಪರಮೇಶ್ವರಪ್ಪ ತಾತಾ ಮಠದ ಮುಂಭಾಗದಲ್ಲಿರುವ ಬೆಟ್ಟದಲ್ಲಿ ಈ ಚಿರತೆ ಕಾಣಿಸಿಕೊಂಡಿವೆ. 15 ಕ್ಕೂ ಹೆಚ್ಚು ದಿನಗಳಿಂದ ಆಗಾಗ ಬೆಟ್ಟದ ತುದಿಯಲ್ಲಿ ಕಾಣಿಕೊಳ್ಳುತ್ತಿವೆ. ಇದರಿಂದ ಕುರಿಗಾಹಿಗಳು, ಜಾನುವಾರುಗಳನ್ನು ಮೇಯಿಸುವವರು ಆತಂಕಗೊಂಡಿದ್ದಾರೆ.</p>.<p>ಕುರಿಗಾಹಿಗಳಾದ ಲಕ್ಷ್ಮಣ, ಭೈರಪ್ಪ ಅವರಿಗೆ ಸೇರಿದ ತಲಾ ಒಂದು ಮೇಕೆ, ಬಸಣ್ಣ ಅವರಿಗೆ ಸೇರಿದ ಒಂದು ಕುರಿ, ಇವರ ಕುರಿಹಟ್ಟಿಗಳ 2 ನಾಯಿಗಳು ಈಚೆಗೆ ಚಿರತೆ ದಾಳಿಗೆ ಬಲಿಯಾಗಿವೆ. ಆಗಾಗ ಚಿರೆತೆಗಳು ಬೆಟ್ಟದಿಂದ ಆಹಾರ ಹುಡುಕಿಕೊಂಡು ಬಂದು ಹೋಗುತ್ತಿವೆ. ಇದರಿಂದ ಕೃಷಿ ಕಾರ್ಮಿಕರು, ಜಾನುವಾರು ಪೋಷಕರು ಹೆಚ್ಚು ತೊಂದರೆಗೀಡಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರಸ್ವಾಮಿ ಹೇಳಿದರು. </p>.<p>ತಾಲ್ಲೂಕು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಡಿ.ಎಲ್. ಶ್ರೀಹರ್ಷ ಮಾತನಾಡಿ, ಚಿರತೆಗಳು ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ ಸಿಬ್ಬಂದಿಯನ್ನು ಕಳಿಸಿ ಕೊಡಲಾಗಿತ್ತು. ಚಿರತೆ ಚಲನವಲನಗಳ ಬಗ್ಗೆ ಸಳೀಯರಿಂದ ಮಾಹಿತಿ ಸಂಗ್ರಹಿಸಲಾಗಿದ್ದು, 2 ದಿನಗಳಲ್ಲಿ ಬೋನ್ ಇಟ್ಟು ಚಿರತೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು. ಚಿರತೆಗಳು ಕಾಣಿಸಿಕೊಂಡಿರುವ ಪ್ರದೇಶವು ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>