ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನಸೇವೆಗೆ ಅಧಿಕಾರ ಬೇಕೇ ಹೊರತು ಕೋಮುವಾದಿಗಳ ಜತೆ ಕೈಜೋಡಿಸುವುದಕ್ಕಲ್ಲ:ಡಿ.ಸುಧಾಕರ್

Published : 9 ಮಾರ್ಚ್ 2024, 14:14 IST
Last Updated : 9 ಮಾರ್ಚ್ 2024, 14:14 IST
ಫಾಲೋ ಮಾಡಿ
Comments
ಸಿಲಿಂಡರ್ ದರ ₹465 ರಿಂದ ₹1150ಕ್ಕೆ ಏರಿಸಿದವರು ಯಾರು?
‘ಸತತ 9 ವರ್ಷ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸುತ್ತ ಬಂದವರು ಈಗ ನೂರು ರೂಪಾಯಿ ಇಳಿಸಿದ್ದಾರೆ. ಇಷ್ಟು ದಿನ ಬೆಲೆ ಏರಿಕೆಯ ಅರಿವು ನಿಮಗೆ ಬಂದಿರಲಿಲ್ಲವೇ? ಎಂದು ಯುವಕರು ಬಿಜೆಪಿಯವರನ್ನು ಕೇಳಬೇಕಿದೆ’ ಎಂದು ರಾಜ್ಯ ಕಾರ್ಮಿಕ ನಿಗಮ ಮಂಡಳಿಯ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ಹೇಳಿದರು.  ‘ಸಿಲಿಂಡರ್ ಬೆಲೆಯನ್ನು ₹465 ರಿಂದ ₹1150ಕ್ಕೆ ಏರಿಸಿದವರು ಯಾರು ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಚುನಾವಣೆ ಬಂದಿದೆ ಎಂದು ನೂರು ರೂಪಾಯಿ ಕಡಿಮೆ ಮಾಡಿರುವವರು ಹೇಗೆ ಸಾವಿರಾರು ರೂಪಾಯಿ ದೋಚಿದ್ದಾರೆ ಎಂಬುದನ್ನು ಜನತೆ ಮರೆಯಬಾರದು. 21 ಮಂದಿ ಕಾರ್ಪೋರೇಟ್ ಕುಳಗಳ ₹11.50 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಮೋದಿಯವರಿಗೆ ರೈತರ ಬಡವರ ಸಾಲ ಮನ್ನಾ ಮಾಡಿ ಎಂದರೆ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ. ಇವರಿಗೆ ಬಡವರ ಕಲ್ಯಾಣದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ’ ಎಂದು ಆರೋಪಿಸಿದರು. ‘ದೇಶದ ಚಿತ್ರಣವನ್ನೇ ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಸುಳ್ಳನ್ನೇ ಆಸ್ತಿಯನ್ನಾಗಿಸಿಕೊಂಡಿರುವ ಬಿಜೆಪಿಯವರು ಬೀದಿಯಲ್ಲಿ ನಿಂತು ಸುಳ್ಳು ಹೇಳಿದಾಕ್ಷಣ ಕಾಂಗ್ರೆಸ್ ಪಕ್ಷದ ಸಾಧನೆಗಳಿಗೆ ಧಕ್ಕೆಯಾಗದು’ ಎಂದು ಅವರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT