<p>ಮೊಳಕಾಲ್ಮುರು: ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಬುಧವಾರ ಆಗಮಿಸಿದ ಯೋಧ ಎಸ್.ಕೆ. ಬಸವರಾಜ್ ಅವರನ್ನು ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಗ್ರಾಮಸ್ಥರು ಆತ್ಮೀಯವಾಗಿ ಸ್ವಾಗತಿಸಿದರು.</p>.<p>ಗ್ರಾಮದ ಮೊಗಲಹಳ್ಳಿ ರಸ್ತೆಯಲ್ಲಿನ ಬೀರಲಿಂಗೇಶ್ವರ ದೇವಸ್ಥಾನ ಮುಂಭಾಗದಿಂದ ಆರಂಭವಾದ ತೆರೆದ ಜೀಪಿನ ಮೆರವಣಿಗೆ ಗ್ರಾಮದ ಮುಖ್ಯಬೀದಿಗಳಲ್ಲಿ ಸಂಚರಿಸಿತು. ಡೊಳ್ಳು ಕುಣಿತ ಮೆರುಗು ನೀಡಿತು. ವಿವಿಧ ವೇಷಧಾರಿಗಳು ಗಮನ ಸೆಳೆದರು.</p>.<p>ಗ್ರಾಮದ ಕುರುಬ ಜನಾಂಗದ ಎಸ್. ಕೋಟೆಪ್ಪ ಹಾಗೂ ಲಕ್ಕಮ್ಮ ದಂಪತಿಯ ಪುತ್ರ ಬಸವರಾಜ್ 2003ರಲ್ಲಿ ಗಡಿ ಭದ್ರತಾ ಪಡೆಯನ್ನು ಸೇರಿದರು. ಬಾಂಗ್ಲಾ ಗಡಿ, ಎಲ್ಒಸಿ, ರಾಜಭವನ್, ಜೈಸಲ್ಮೇರ್, ಮೇಘಾಲಯ, ಜಮ್ಮು- ಕಾಶ್ಮೀರ್ ಗಡಿಯಲ್ಲಿ ಒಟ್ಟು 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.</p>.<p>‘ಇದು ಗ್ರಾಮದ ಹೆಮ್ಮೆ ವಿಷಯವಾಗಿದ್ದು, ನಿವೃತ್ತಿಯಾಗಿ ಗ್ರಾಮಕ್ಕೆ ಬರುತ್ತಿರುವ ಕಾರಣ ಗೌರವ ಸಲ್ಲಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಆಯೋಜಕರು ಮಾಹಿತಿ ನೀಡಿದರು.</p>.<p>ʼಗ್ರಾಮಸ್ಥರು ನೀಡಿರುವ ಸ್ವಾಗತವು ನನ್ನ ಜೀವಮಾನದ ಮುಖ್ಯಘಟ್ಟವಾಗಿದೆ. ಜನರು ತೋರಿಸಿದ ಪ್ರೀತಿಯಿಂದ ಇಷ್ಟು ವರ್ಷ ದೇಶ ಕಾಯುವ ಕಾರ್ಯವನ್ನು ಮಾಡಿದ್ದು ಸಾರ್ಥಕ ಭಾವ ಮೂಡಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಜನಪರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ’ ಎಂದು ಯೋದ ಬಸವರಾಜ್ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಬುಧವಾರ ಆಗಮಿಸಿದ ಯೋಧ ಎಸ್.ಕೆ. ಬಸವರಾಜ್ ಅವರನ್ನು ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಗ್ರಾಮಸ್ಥರು ಆತ್ಮೀಯವಾಗಿ ಸ್ವಾಗತಿಸಿದರು.</p>.<p>ಗ್ರಾಮದ ಮೊಗಲಹಳ್ಳಿ ರಸ್ತೆಯಲ್ಲಿನ ಬೀರಲಿಂಗೇಶ್ವರ ದೇವಸ್ಥಾನ ಮುಂಭಾಗದಿಂದ ಆರಂಭವಾದ ತೆರೆದ ಜೀಪಿನ ಮೆರವಣಿಗೆ ಗ್ರಾಮದ ಮುಖ್ಯಬೀದಿಗಳಲ್ಲಿ ಸಂಚರಿಸಿತು. ಡೊಳ್ಳು ಕುಣಿತ ಮೆರುಗು ನೀಡಿತು. ವಿವಿಧ ವೇಷಧಾರಿಗಳು ಗಮನ ಸೆಳೆದರು.</p>.<p>ಗ್ರಾಮದ ಕುರುಬ ಜನಾಂಗದ ಎಸ್. ಕೋಟೆಪ್ಪ ಹಾಗೂ ಲಕ್ಕಮ್ಮ ದಂಪತಿಯ ಪುತ್ರ ಬಸವರಾಜ್ 2003ರಲ್ಲಿ ಗಡಿ ಭದ್ರತಾ ಪಡೆಯನ್ನು ಸೇರಿದರು. ಬಾಂಗ್ಲಾ ಗಡಿ, ಎಲ್ಒಸಿ, ರಾಜಭವನ್, ಜೈಸಲ್ಮೇರ್, ಮೇಘಾಲಯ, ಜಮ್ಮು- ಕಾಶ್ಮೀರ್ ಗಡಿಯಲ್ಲಿ ಒಟ್ಟು 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.</p>.<p>‘ಇದು ಗ್ರಾಮದ ಹೆಮ್ಮೆ ವಿಷಯವಾಗಿದ್ದು, ನಿವೃತ್ತಿಯಾಗಿ ಗ್ರಾಮಕ್ಕೆ ಬರುತ್ತಿರುವ ಕಾರಣ ಗೌರವ ಸಲ್ಲಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಆಯೋಜಕರು ಮಾಹಿತಿ ನೀಡಿದರು.</p>.<p>ʼಗ್ರಾಮಸ್ಥರು ನೀಡಿರುವ ಸ್ವಾಗತವು ನನ್ನ ಜೀವಮಾನದ ಮುಖ್ಯಘಟ್ಟವಾಗಿದೆ. ಜನರು ತೋರಿಸಿದ ಪ್ರೀತಿಯಿಂದ ಇಷ್ಟು ವರ್ಷ ದೇಶ ಕಾಯುವ ಕಾರ್ಯವನ್ನು ಮಾಡಿದ್ದು ಸಾರ್ಥಕ ಭಾವ ಮೂಡಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಜನಪರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ’ ಎಂದು ಯೋದ ಬಸವರಾಜ್ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>