<p><strong>ಚಿತ್ರದುರ್ಗ</strong>: ‘ಶತಮಾನಗಳಿಂದಲೂ ದಾಸ್ಯ, ಗುಲಾಮಗಿರಿ ವ್ಯವಸ್ಥೆ ಇದ್ದ ಕಾರಣ ಅದರಿಂದ ಇಂದಿಗೂ ಹೊರಬರಲು ಸಾಧ್ಯವಾಗಿಲ್ಲ. ಗುಲಾಮಗಿರಿ ಮನಃಸ್ಥಿತಿ ಈಗಲೂ ಜೀವಂತವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ನಗರದ ಹೊರವಲಯದ ಭೋವಿ ಗುರುಪೀಠದ ಆವರಣದಲ್ಲಿ ಶನಿವಾರ ನಡೆದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಮೇಲ್ಜಾತಿಯವರು ಎಷ್ಟೇ ಬಡವರಾಗಿದ್ದರೂ ಅವರು ಸಿಕ್ಕಾಗ ಬುದ್ದಿ, ಸ್ವಾಮಿ ಎಂದು ಮಾತನಾಡಿಸುತ್ತಾರೆ. ಆದರೆ ಕೆಳಜಾತಿಯವರು ಶ್ರೀಮಂತರಾಗಿದ್ದರೂ ಅವರನ್ನು ಕಂಡಾಗ ಏಕವಚನದಲ್ಲಿ ಮಾತನಾಡುತ್ತಾರೆ. ಇದೇ ಗುಲಾಮಗಿರಿ ಮನಃಸ್ಥಿತಿ’ ಎಂದರು.</p>.<p>‘ಗುಲಾಮಗಿರಿ ಮನಸ್ಥಿತಿಯಿಂದ ಹೊರಬಂದು ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಮನುಷ್ಯರು ಸಮಾನತೆಯಿಂದ ಬದುಕುವುದನ್ನು ಕಲಿಯಬೇಕು. ಸ್ವಾರ್ಥಿಗಳು, ಪಟ್ಟಭದ್ರ ಹಿತಾಸಕ್ತಿಗಳಿಂದ ಜಾತಿ ವ್ಯವಸ್ಥೆ ನಿರ್ಮಾಣವಾಯಿತು. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಸಮ ಸಮಾಜ ನಿರ್ಮಾಣ ಮಾಡಬೇಕು’ ಎಂದು ತಿಳಿಸಿದರು.</p>.<p>‘ಭೋವಿ ಅಭಿವೃದ್ಧಿ ನಿಗಮದ ಸೌಲಭ್ಯಗಳು ಅನ್ಯರ ಪಾಲಾಗುವುದನ್ನು ತಪ್ಪಿಸಲು ನಿಗಮವನ್ನು ಭೋವಿ–ವಡ್ಡರ ಅಭಿವೃದ್ಧಿ ನಿಗಮವೆಂದು ಪುನರ್ ನಾಮಕರಣ ಮಾಡಬೇಕು. ಪ್ರತಿ ವರ್ಷ ನಿಗಮಕ್ಕೆ ₹ 500 ಕೋಟಿ ಅನುದಾನ ನೀಡಬೇಕು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದರು.</p>.<p>‘ವಿಧಾನ ಪರಿಷತ್ಗೆ ಭೋವಿ ಸಮಾಜದ ಮುಖಂಡರೊಬ್ಬರನ್ನು ನಾಮ ನಿರ್ದೇಶನ ಮಾಡಬೇಕು. ಗಣಿ ಗುತ್ತಿಗೆ, ಕ್ರಷರ್ ಸ್ಥಾಪನೆಯಲ್ಲಿ ಭೋವಿ ಸಮಾಜದ ಸದಸ್ಯರಿಗೆ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ಮೇಲೆ ವಿವಿಧ ಹೂಗಳ ಪಕಳೆಯನ್ನು ಸುರಿಸುವ ಮೂಲಕ ಅಭಿನಂದಿಸಲಾಯಿತು. ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು, ಅಧಿಕಾರಿಗಳನ್ನು ಸನ್ಮಾನಿಸಲಾಯಿತು.</p>.<p>ಇದಕ್ಕೂ ಮೊದಲು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಅವರು ಸ್ವಾಮೀಜಿಯನ್ನು ಅಭಿನಂದಿಸಿದರು. ವಿವಿಧ ಕ್ಷೇತ್ರಗಳ ಮಠಾಧೀಶರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಶತಮಾನಗಳಿಂದಲೂ ದಾಸ್ಯ, ಗುಲಾಮಗಿರಿ ವ್ಯವಸ್ಥೆ ಇದ್ದ ಕಾರಣ ಅದರಿಂದ ಇಂದಿಗೂ ಹೊರಬರಲು ಸಾಧ್ಯವಾಗಿಲ್ಲ. ಗುಲಾಮಗಿರಿ ಮನಃಸ್ಥಿತಿ ಈಗಲೂ ಜೀವಂತವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ನಗರದ ಹೊರವಲಯದ ಭೋವಿ ಗುರುಪೀಠದ ಆವರಣದಲ್ಲಿ ಶನಿವಾರ ನಡೆದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಮೇಲ್ಜಾತಿಯವರು ಎಷ್ಟೇ ಬಡವರಾಗಿದ್ದರೂ ಅವರು ಸಿಕ್ಕಾಗ ಬುದ್ದಿ, ಸ್ವಾಮಿ ಎಂದು ಮಾತನಾಡಿಸುತ್ತಾರೆ. ಆದರೆ ಕೆಳಜಾತಿಯವರು ಶ್ರೀಮಂತರಾಗಿದ್ದರೂ ಅವರನ್ನು ಕಂಡಾಗ ಏಕವಚನದಲ್ಲಿ ಮಾತನಾಡುತ್ತಾರೆ. ಇದೇ ಗುಲಾಮಗಿರಿ ಮನಃಸ್ಥಿತಿ’ ಎಂದರು.</p>.<p>‘ಗುಲಾಮಗಿರಿ ಮನಸ್ಥಿತಿಯಿಂದ ಹೊರಬಂದು ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಮನುಷ್ಯರು ಸಮಾನತೆಯಿಂದ ಬದುಕುವುದನ್ನು ಕಲಿಯಬೇಕು. ಸ್ವಾರ್ಥಿಗಳು, ಪಟ್ಟಭದ್ರ ಹಿತಾಸಕ್ತಿಗಳಿಂದ ಜಾತಿ ವ್ಯವಸ್ಥೆ ನಿರ್ಮಾಣವಾಯಿತು. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಸಮ ಸಮಾಜ ನಿರ್ಮಾಣ ಮಾಡಬೇಕು’ ಎಂದು ತಿಳಿಸಿದರು.</p>.<p>‘ಭೋವಿ ಅಭಿವೃದ್ಧಿ ನಿಗಮದ ಸೌಲಭ್ಯಗಳು ಅನ್ಯರ ಪಾಲಾಗುವುದನ್ನು ತಪ್ಪಿಸಲು ನಿಗಮವನ್ನು ಭೋವಿ–ವಡ್ಡರ ಅಭಿವೃದ್ಧಿ ನಿಗಮವೆಂದು ಪುನರ್ ನಾಮಕರಣ ಮಾಡಬೇಕು. ಪ್ರತಿ ವರ್ಷ ನಿಗಮಕ್ಕೆ ₹ 500 ಕೋಟಿ ಅನುದಾನ ನೀಡಬೇಕು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದರು.</p>.<p>‘ವಿಧಾನ ಪರಿಷತ್ಗೆ ಭೋವಿ ಸಮಾಜದ ಮುಖಂಡರೊಬ್ಬರನ್ನು ನಾಮ ನಿರ್ದೇಶನ ಮಾಡಬೇಕು. ಗಣಿ ಗುತ್ತಿಗೆ, ಕ್ರಷರ್ ಸ್ಥಾಪನೆಯಲ್ಲಿ ಭೋವಿ ಸಮಾಜದ ಸದಸ್ಯರಿಗೆ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ಮೇಲೆ ವಿವಿಧ ಹೂಗಳ ಪಕಳೆಯನ್ನು ಸುರಿಸುವ ಮೂಲಕ ಅಭಿನಂದಿಸಲಾಯಿತು. ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು, ಅಧಿಕಾರಿಗಳನ್ನು ಸನ್ಮಾನಿಸಲಾಯಿತು.</p>.<p>ಇದಕ್ಕೂ ಮೊದಲು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಅವರು ಸ್ವಾಮೀಜಿಯನ್ನು ಅಭಿನಂದಿಸಿದರು. ವಿವಿಧ ಕ್ಷೇತ್ರಗಳ ಮಠಾಧೀಶರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>