<p><strong>ಚಿತ್ರದುರ್ಗ</strong>: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಯುವ ಸಂದರ್ಭದಲ್ಲಿಯೇ ಇ.ಡಿ ಓಡೋಡಿ ಬಂದಿದ್ದು ಏಕೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಶ್ನಿಸಿದರು.</p>.<p>‘ಬಿಜೆಪಿಯವರು ನಡೆಸಿರುವ ಕೆಲವು ಹಗರಣಗಳ ತನಿಖೆಯೂ ನಡೆಯುತ್ತಿದೆ. ಅವರ ವಿರುದ್ಧ ಆರೋಪ ಬಂದಾಗ ಯಾವ ಇ.ಡಿ.ಯೂ ಬರಲಿಲ್ಲ. ಅವರು ಕೊಳ್ಳೆ ಹೊಡೆದದ್ದು ಜನರ ಹಣ ಅಲ್ಲವೇ? ಬಿಜೆಪಿಯ ಅವ್ಯವಹಾರಗಳನ್ನು ಸದನದ ಮುಂದಿಟ್ಟಿದ್ದೇನೆ. ಈ ವಿಚಾರದಲ್ಲಿ ನಾವು ಯಾರನ್ನೂ ಬೆದರಿಸುವ ಕೆಲಸ ಮಾಡುತ್ತಿಲ್ಲ’ ಎಂದು ಸುದ್ದಿಗಾರರಿಗೆ ಹೇಳಿದರು.</p>.<p>‘ಡಿ.ಎಸ್.ವೀರಯ್ಯ, ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು ಬಿಜೆಪಿಯವರು ಪ್ರಸ್ತಾಪ ಮಾಡುತ್ತಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆಸಿ ಜೈಲಿಗೆ ಹೋದವರು ಯಾರು? ನಮ್ಮ ವಿರುದ್ಧ ಮಾತ್ರ ಟೀಕೆ ಮಾಡುತ್ತಾರೆ. ಅವರು ಮಾಡಿದ ಅಕ್ರಮಗಳನ್ನು ಮುಚ್ಚಿಕೊಳ್ಳುತ್ತಾರೆ’ ಎಂದು ಆರೋಪಿಸಿದರು.</p>.<p>‘ಬಿಜೆಪಿ ಅಕ್ರಮಗಳ ಬಗ್ಗೆ ನಾನು ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರಿಂದ ಯಾವುದೇ ಉತ್ತರ ಬರಲಿಲ್ಲ. ನಾವು ಆರೋಪಗಳ ಸತ್ಯಾಸತ್ಯತೆ ಅರಿಯಲು ತನಿಖೆ ನಡೆಸುತ್ತಿದ್ದೇವೆ. ಬಿಜೆಪಿ ಮುಖಂಡರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳುವರೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಯುವ ಸಂದರ್ಭದಲ್ಲಿಯೇ ಇ.ಡಿ ಓಡೋಡಿ ಬಂದಿದ್ದು ಏಕೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಶ್ನಿಸಿದರು.</p>.<p>‘ಬಿಜೆಪಿಯವರು ನಡೆಸಿರುವ ಕೆಲವು ಹಗರಣಗಳ ತನಿಖೆಯೂ ನಡೆಯುತ್ತಿದೆ. ಅವರ ವಿರುದ್ಧ ಆರೋಪ ಬಂದಾಗ ಯಾವ ಇ.ಡಿ.ಯೂ ಬರಲಿಲ್ಲ. ಅವರು ಕೊಳ್ಳೆ ಹೊಡೆದದ್ದು ಜನರ ಹಣ ಅಲ್ಲವೇ? ಬಿಜೆಪಿಯ ಅವ್ಯವಹಾರಗಳನ್ನು ಸದನದ ಮುಂದಿಟ್ಟಿದ್ದೇನೆ. ಈ ವಿಚಾರದಲ್ಲಿ ನಾವು ಯಾರನ್ನೂ ಬೆದರಿಸುವ ಕೆಲಸ ಮಾಡುತ್ತಿಲ್ಲ’ ಎಂದು ಸುದ್ದಿಗಾರರಿಗೆ ಹೇಳಿದರು.</p>.<p>‘ಡಿ.ಎಸ್.ವೀರಯ್ಯ, ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು ಬಿಜೆಪಿಯವರು ಪ್ರಸ್ತಾಪ ಮಾಡುತ್ತಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆಸಿ ಜೈಲಿಗೆ ಹೋದವರು ಯಾರು? ನಮ್ಮ ವಿರುದ್ಧ ಮಾತ್ರ ಟೀಕೆ ಮಾಡುತ್ತಾರೆ. ಅವರು ಮಾಡಿದ ಅಕ್ರಮಗಳನ್ನು ಮುಚ್ಚಿಕೊಳ್ಳುತ್ತಾರೆ’ ಎಂದು ಆರೋಪಿಸಿದರು.</p>.<p>‘ಬಿಜೆಪಿ ಅಕ್ರಮಗಳ ಬಗ್ಗೆ ನಾನು ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರಿಂದ ಯಾವುದೇ ಉತ್ತರ ಬರಲಿಲ್ಲ. ನಾವು ಆರೋಪಗಳ ಸತ್ಯಾಸತ್ಯತೆ ಅರಿಯಲು ತನಿಖೆ ನಡೆಸುತ್ತಿದ್ದೇವೆ. ಬಿಜೆಪಿ ಮುಖಂಡರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳುವರೇ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>