ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಚ್ಛತೆಯಿಂದ ಸ್ವಸ್ಥ ಸಮಾಜ: ಒಡಿಯೂರು ಶ್ರೀ 

Published 7 ಜುಲೈ 2024, 16:22 IST
Last Updated 7 ಜುಲೈ 2024, 16:22 IST
ಅಕ್ಷರ ಗಾತ್ರ

ವಿಟ್ಲ: ‘ಪ್ರಕೃತಿಯನ್ನು ಸ್ವಚ್ಛವಾಗಿಡುವುದರಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆಧ್ಯಾತ್ಮದ ಚಿಂತನೆ ಮೂಲಕ ಜೀವನ ಪಾವನವಾಗಬೇಕು’ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಒಡಿಯೂರು ಶ್ರೀಗಳ ಜನ್ಮದಿನೋತ್ಸವ - ಗ್ರಾಮೋತ್ಸವದ ಅಂಗವಾಗಿ ಭಾನುವಾರ ಕನ್ಯಾನ ಗ್ರಾಮದ ಬನಾರಿಯಲ್ಲಿರುವ ಸಂಸ್ಥಾನದ ಸಾಗುವಳಿ ಭೂಮಿಯಲ್ಲಿ  ‘ಕೆಸರ್ದ ಕಂಡೊಡೊಂಜಿ ದಿನ’ ಆಟೋಟ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಕೃತಿಯೇ ವಿಶ್ವವಿದ್ಯಾನಿಲಯ. ಮರ, ನದಿ ಕೂಡಾ ಪರೋಪಕಾರ ಮನೋಭಾವವನ್ನು ಬೆಳೆಸುತ್ತದೆ. ಪ್ರಕೃತಿ ನಾಶವಾಗಬಾರದು. ಅದರ ಜತೆಗೆ ಬದುಕು ಸಾಗಬೇಕು. ಪ್ರಕೃತಿ ಸಮತೋಲನ ಕಾಪಾಡುತ್ತದೆ’ ಎಂದರು.

ಸಾಧ್ವೀಮಾತಾನಂದಮಯಿ ಸಾನ್ನಿಧ್ಯ ವಹಿಸಿದ್ದರು. ಮಲಾರು ಜಯರಾಮ ರೈ, ಜನ್ಮದಿನೋತ್ಸವ ಸಮಿತಿ ಕೋಶಾಧಿಕಾರಿ ಲೋಕನಾಥ್ ಜಿ.ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಎ.ಸುರೇಶ್ ರೈ, ಸಿಇಒ ದಯಾನಂದ ಶೆಟ್ಟಿ ಬಾಕ್ರಬಲು, ಒಡಿಯೂರು ಗುರುದೇವ ಸೇವಾ ಬಳಗದ ಅಧ್ಯಕ್ಷ ಅಶೋಕ್ ಕುಮಾರ್ ಬಿಜೈ, ಗುರುದೇವ ವಿದ್ಯಾ ಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಒಡಿಯೂರು ಐಟಿಐ ಪ್ರಾಂಶುಪಾಲ ಪ್ರವೀಣ್ ಕುಮಾರ್, ಗುರುದೇವ ವಿದ್ಯಾ ಪೀಠದ ಮುಖ್ಯ ಶಿಕ್ಷಕಿ ರೇಣುಕಾ ಎಸ್.ರೈ, ತೀರ್ಪುಗಾರರಾದ ಚಂದ್ರಹಾಸ ಶೆಟ್ಟಿ ಅಳಿಕೆ, ರವೀಂದ್ರ ಅಳಿಕೆ, ಕ್ರೀಡೋತ್ಸವ ಸಮಿತಿ ಸಂಚಾಲಕ ಶಶಿಧರ ಶೆಟ್ಟಿ, ಹರಿಣಾಕ್ಷಿ ಜೆ.ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ಯಶವಂತ ವಿಟ್ಲ ಸ್ವಾಗತಿಸಿದು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ ವಂದಿಸಿದರು. ಗ್ರಾಮವಿಕಾಸ ಯೋಜನೆಯ ಪಿ.ಆರ್.ಓ. ಮಾತೇಶ್ ಭಂಡಾರಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT