<p><strong>ಉಪ್ಪಿನಂಗಡಿ:</strong> ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಅಂಗಡಿಯೊಂದರಲ್ಲಿ ಒಂಟಿ ವೃದ್ಧೆಯ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ಎಗರಿಸಲು ಕಳ್ಳರಿಬ್ಬರು ಯತ್ನಿಸಿದ್ದು, ಅವರನ್ನು ಆ ವೃದ್ಧೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ಬೆಂಗಳೂರಿನ ಯಶವಂತಪುರ ನಿವಾಸಿಗಳಾದ ರೋಹಿತ್ (25) ಮತ್ತು ಅಶೋಕ್ (25) ಬಂಧಿತ ಆರೋಪಿಗಳು. ಅಡ್ಡಹೊಳೆಯಲ್ಲಿ ಡ್ರೈಫ್ರೂಟ್ಸ್ ಸೇರಿದಂತೆ ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ನಡೆಸುತ್ತಿರುವ ತ್ರೇಸ್ಯಾಮಾ (60) ಅವರಿಬ್ಬರನ್ನು ಹಿಡಿದುಕೊಟ್ಟ ದಿಟ್ಟ ಮಹಿಳೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು ಅಡ್ಡಹೊಳೆಗೆ ಸ್ಕೂಟರ್ನಲ್ಲಿ ಬಂದಿದ್ದರು. ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದರು. ಆದರೆ ಮಹಿಳೆ ಅದಕ್ಕೆ ಅವಕಾಶ ನೀಡಲಿಲ್ಲ’ ಎಂದರು.</p>.<p>‘ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಅನ್ನೂ ಮಂಗಳೂರಿನ ಮಳಿಗೆಯೊಂದರಿಂದ ಕದ್ದಿದ್ದರು. ಟೆಸ್ಟ್ ಡ್ರೈವ್ ನೆಪದಲ್ಲಿ ಸ್ಕೂಟರನ್ನು ಪಡೆದುಕೊಂಡು ಅದನ್ನು ಮರಳಿಸದೇ ಪರಾರಿಯಾಗಿದ್ದರು’ ಎಂದೂ ಅವರು ಮಾಹಿತಿ ನೀಡಿದರು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ಅಂಗಡಿಯೊಂದರಲ್ಲಿ ಒಂಟಿ ವೃದ್ಧೆಯ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ಎಗರಿಸಲು ಕಳ್ಳರಿಬ್ಬರು ಯತ್ನಿಸಿದ್ದು, ಅವರನ್ನು ಆ ವೃದ್ಧೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ಬೆಂಗಳೂರಿನ ಯಶವಂತಪುರ ನಿವಾಸಿಗಳಾದ ರೋಹಿತ್ (25) ಮತ್ತು ಅಶೋಕ್ (25) ಬಂಧಿತ ಆರೋಪಿಗಳು. ಅಡ್ಡಹೊಳೆಯಲ್ಲಿ ಡ್ರೈಫ್ರೂಟ್ಸ್ ಸೇರಿದಂತೆ ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ನಡೆಸುತ್ತಿರುವ ತ್ರೇಸ್ಯಾಮಾ (60) ಅವರಿಬ್ಬರನ್ನು ಹಿಡಿದುಕೊಟ್ಟ ದಿಟ್ಟ ಮಹಿಳೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು ಅಡ್ಡಹೊಳೆಗೆ ಸ್ಕೂಟರ್ನಲ್ಲಿ ಬಂದಿದ್ದರು. ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದರು. ಆದರೆ ಮಹಿಳೆ ಅದಕ್ಕೆ ಅವಕಾಶ ನೀಡಲಿಲ್ಲ’ ಎಂದರು.</p>.<p>‘ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಅನ್ನೂ ಮಂಗಳೂರಿನ ಮಳಿಗೆಯೊಂದರಿಂದ ಕದ್ದಿದ್ದರು. ಟೆಸ್ಟ್ ಡ್ರೈವ್ ನೆಪದಲ್ಲಿ ಸ್ಕೂಟರನ್ನು ಪಡೆದುಕೊಂಡು ಅದನ್ನು ಮರಳಿಸದೇ ಪರಾರಿಯಾಗಿದ್ದರು’ ಎಂದೂ ಅವರು ಮಾಹಿತಿ ನೀಡಿದರು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>