<p><strong>ಮುಡಿಪು</strong>: ಇಲ್ಲಿಗೆ ಸಮೀಪದ ನರಿಂಗಾನ ಗ್ರಾಮದ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕೆಂಬೂತ ಪಕ್ಷಿ ಸಾವಿಗೀಡಾಗಿದೆ.</p>.<p>ಸಾವಿಗೀಡಾಗಿರುವ ಸ್ಥಳದಲ್ಲಿ ಮೊಬೈಲ್ ಟವರ್ ಇದ್ದು, ಅದನ್ನು ಇತ್ತೀಚೆಗೆ ನಿರ್ಮಿಸಲಾಗಿತ್ತು. ಟವರ್ ನಿರ್ಮಾಣಕ್ಕೆ ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು, ಹಕ್ಕಿಗಳು ಹಾಗೂ ತೆಂಗಿನಮರಕ್ಕೆ ಟವರ್ನಿಂದ ಹಾನಿಯಾಗದು ಎಂದು ತಿಳಿಸಿದ್ದರಿಂದ ನಿರ್ಮಿಸಲು ಪಂಚಾಯಿತಿ ಅವಕಾಶ ನೀಡಿತ್ತು.</p>.<p>ತೌಡುಗೋಳಿಯಲ್ಲಿ ಇತ್ತೀಚೆಗೆ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ಮಾಡಲು ಮುಂದಾಗಿತ್ತು. ನಾಯಿಗಳನ್ನು ಕೊಲ್ಲಲು ಯಾರಾದರೂ ವಿಷ ಪದಾರ್ಥ ಬಳಸಿದ್ದು, ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂದೇಹವೂ ವ್ಯಕ್ರವಾಗಿದೆ.</p>.<p>ಟವರ್ ಬಳಿಯ ಟ್ರಾನ್ಸ್ಫಾರ್ಮರ್ನ ಬಳಿಯಲ್ಲೂ ಕಾಗೆ ಸತ್ತು ಬಿದ್ದಿದೆ. ಸುಮಾರು 20 ಮೀಟರ್ ವ್ಯಾಪ್ತಿಯಲ್ಲಿ ಪಕ್ಷಿಗಳು ಸತ್ತು ಬಿದ್ದಿವೆ.</p>.<p>ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಪಿಡಿಒ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯಿತಿ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರ ನೀಡಿದ್ದಾರೆ.</p>.<p>ಹಕ್ಕಿಯ ಕಳೇಬರವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದ್ದು, ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯಿತಿ ಅಧ್ಯಕ್ಷ ನವಾಜ್ ನರಿಂಗಾನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು</strong>: ಇಲ್ಲಿಗೆ ಸಮೀಪದ ನರಿಂಗಾನ ಗ್ರಾಮದ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕೆಂಬೂತ ಪಕ್ಷಿ ಸಾವಿಗೀಡಾಗಿದೆ.</p>.<p>ಸಾವಿಗೀಡಾಗಿರುವ ಸ್ಥಳದಲ್ಲಿ ಮೊಬೈಲ್ ಟವರ್ ಇದ್ದು, ಅದನ್ನು ಇತ್ತೀಚೆಗೆ ನಿರ್ಮಿಸಲಾಗಿತ್ತು. ಟವರ್ ನಿರ್ಮಾಣಕ್ಕೆ ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು, ಹಕ್ಕಿಗಳು ಹಾಗೂ ತೆಂಗಿನಮರಕ್ಕೆ ಟವರ್ನಿಂದ ಹಾನಿಯಾಗದು ಎಂದು ತಿಳಿಸಿದ್ದರಿಂದ ನಿರ್ಮಿಸಲು ಪಂಚಾಯಿತಿ ಅವಕಾಶ ನೀಡಿತ್ತು.</p>.<p>ತೌಡುಗೋಳಿಯಲ್ಲಿ ಇತ್ತೀಚೆಗೆ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ಮಾಡಲು ಮುಂದಾಗಿತ್ತು. ನಾಯಿಗಳನ್ನು ಕೊಲ್ಲಲು ಯಾರಾದರೂ ವಿಷ ಪದಾರ್ಥ ಬಳಸಿದ್ದು, ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂದೇಹವೂ ವ್ಯಕ್ರವಾಗಿದೆ.</p>.<p>ಟವರ್ ಬಳಿಯ ಟ್ರಾನ್ಸ್ಫಾರ್ಮರ್ನ ಬಳಿಯಲ್ಲೂ ಕಾಗೆ ಸತ್ತು ಬಿದ್ದಿದೆ. ಸುಮಾರು 20 ಮೀಟರ್ ವ್ಯಾಪ್ತಿಯಲ್ಲಿ ಪಕ್ಷಿಗಳು ಸತ್ತು ಬಿದ್ದಿವೆ.</p>.<p>ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಪಿಡಿಒ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯಿತಿ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರ ನೀಡಿದ್ದಾರೆ.</p>.<p>ಹಕ್ಕಿಯ ಕಳೇಬರವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದ್ದು, ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯಿತಿ ಅಧ್ಯಕ್ಷ ನವಾಜ್ ನರಿಂಗಾನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>