‘ನಿಷೇಧಿತ ಮಾದಕ ವಸ್ತುವನ್ನು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಪ್ರಸ್ತುತ ಶಿವಮೊಗ್ಗದ ಟಿಪ್ಪು ನಗರದಲ್ಲಿ ವಾಸವಿರುವ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬೆಂಗ್ರೆಯ ಅಬ್ದುಲ್ ಶಾಕೀರ್ (24), ಮಂಜೇಶ್ವರ ಕುಂಜತ್ತೂರಿನ ಹಸನ್ ಆಶೀರ್ (34), ಯಾಸೀನ್ ಇಮ್ರಾಜ್ ಅಲಿಯಾಸ್ ಇಂಬು(35), ಕಣ್ಣೂರು ಜಿಲ್ಲೆಯ ಪಯ್ಯನೂರಿನ ರಿಯಾಜ್ ಎ.ಕೆ. (31), ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಮೊಹಮ್ಮದ್ ನೌಷಾದ್ (22) ಬಂಧಿತರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.