<p><strong>ಮಂಗಳೂರು:</strong> ನಗರದಲ್ಲಿ ಇತ್ತೀಚೆಗೆ ಎರಡು ಕಡೆಗಳಲ್ಲಿ ಕಂಡುಬಂದ ವಿವಾದಿತ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.</p>.<p>ತೀರ್ಥಹಳ್ಳಿ ಮುಹಮ್ಮದ್ ಶಾಹೀಕ್ ಹಾಗೂ ಮಾಝ್ ಮುನೀರ್ ಬಂಧಿತ ಆರೋಪಿಗಳು.</p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆಯು ಕೇಂದ್ರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಿತ್ತು.</p>.<p>ಗೋಡೆ ಬರಹಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ (ಕದ್ರಿ), ಮಂಗಳೂರು ಪೂರ್ವ (ಬಂದರ್) ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.</p>.<p>ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ವಿಕಾಸ್ಕುಮಾರ್, ಬಂಧಿತ ಇಬ್ಬರು ಆರೋಪಿಗಳು ಸೇರಿ ಈ ಕೃತ್ಯ ನಡೆಸಿದ್ದಾರೆ. ಎಲ್ಲರಿಗೂ ಕಾಣುವ ಪ್ರದೇಶದಲ್ಲಿ ಬರಹ ಬರೆದಿದ್ದಾರೆ. ಪ್ರಚಾರಕ್ಕಾಗಿ ಕೃತ್ಯ ನಡೆಸಿದ್ದಾರೆ ಎಂದು ಹೇಳಿದರು.</p>.<p>ಬಂಧಿತ ಆರೋಪಿಗಳಾದ ಶಾಹೀಕ್ ಮತ್ತು ಮುನೀರ್ ಮೊದಲಿನಿಂದಲೂ ಸ್ನೇಹಿತರು. ಶಾಹೀರ್ ಸೇಲ್ಸ್ಮನ್ ಆಗಿದ್ದ. ಮುನೀರ್ ನಗರದಲ್ಲೇ ಬಿ.ಟೆಕ್ ವಿದ್ಯಾರ್ಥಿ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದಲ್ಲಿ ಇತ್ತೀಚೆಗೆ ಎರಡು ಕಡೆಗಳಲ್ಲಿ ಕಂಡುಬಂದ ವಿವಾದಿತ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.</p>.<p>ತೀರ್ಥಹಳ್ಳಿ ಮುಹಮ್ಮದ್ ಶಾಹೀಕ್ ಹಾಗೂ ಮಾಝ್ ಮುನೀರ್ ಬಂಧಿತ ಆರೋಪಿಗಳು.</p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆಯು ಕೇಂದ್ರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಿತ್ತು.</p>.<p>ಗೋಡೆ ಬರಹಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ (ಕದ್ರಿ), ಮಂಗಳೂರು ಪೂರ್ವ (ಬಂದರ್) ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.</p>.<p>ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ವಿಕಾಸ್ಕುಮಾರ್, ಬಂಧಿತ ಇಬ್ಬರು ಆರೋಪಿಗಳು ಸೇರಿ ಈ ಕೃತ್ಯ ನಡೆಸಿದ್ದಾರೆ. ಎಲ್ಲರಿಗೂ ಕಾಣುವ ಪ್ರದೇಶದಲ್ಲಿ ಬರಹ ಬರೆದಿದ್ದಾರೆ. ಪ್ರಚಾರಕ್ಕಾಗಿ ಕೃತ್ಯ ನಡೆಸಿದ್ದಾರೆ ಎಂದು ಹೇಳಿದರು.</p>.<p>ಬಂಧಿತ ಆರೋಪಿಗಳಾದ ಶಾಹೀಕ್ ಮತ್ತು ಮುನೀರ್ ಮೊದಲಿನಿಂದಲೂ ಸ್ನೇಹಿತರು. ಶಾಹೀರ್ ಸೇಲ್ಸ್ಮನ್ ಆಗಿದ್ದ. ಮುನೀರ್ ನಗರದಲ್ಲೇ ಬಿ.ಟೆಕ್ ವಿದ್ಯಾರ್ಥಿ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>