<p><strong>ಉಳ್ಳಾಲ</strong>: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಕ್ರಿಕೆಟಿಗ ಕೆ.ಎಲ್ ರಾಹುಲ್, ಬಾಲಿವುಡ್ ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ, ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ ಭಾಗವಹಿಸಿದ್ದರು.</p><p>ಮ್ಯಾಟ್ರಿಕ್ಸ್ ಎಂಟರ್ಟೈನ್ಮೆಂಟ್ನ ರೇಷ್ಮಾ ಶೆಟ್ಟಿ, ವಿ.ಎಂ ಕಾಮತ್ ಅವರೂ ಜೊತೆಯಲ್ಲಿದ್ದರು. </p><p>ಕೋಲ ಕಟ್ಟೆಯಲ್ಲಿ ಹರಕೆಯನ್ನು ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಹೆಸರು ಬರೆಸಿದ್ದ ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾನುವಾರ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿದ್ದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾದರು.</p><p>ಬಾಲಿವುಡ್ ಕುಟುಂಬ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಬಂದಿತ್ತು. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿಯವರಲ್ಲಿ ಅವರು ಮನವಿ ಮಾಡಿದ್ದರು. </p><p>ಸ್ಥಳದಲ್ಲಿ ಫೋಟೊ ತೆಗೆಯಲು ಬಿಡಲಿಲ್ಲ. ಫೋಟೊ ತೆಗೆದವರಲ್ಲಿ, ‘ಅದನ್ನು ಅಳಿಸಿ’ ಎಂದು ವಿನಂತಿಸಿದ್ದರು. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಕೈಫ್ ಸೇರಿದಂತೆ ಉಳಿದವರು ವೀಕ್ಷಿಸಿದರು. ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಕ್ರಿಕೆಟಿಗ ಕೆ.ಎಲ್ ರಾಹುಲ್, ಬಾಲಿವುಡ್ ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ, ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ ಭಾಗವಹಿಸಿದ್ದರು.</p><p>ಮ್ಯಾಟ್ರಿಕ್ಸ್ ಎಂಟರ್ಟೈನ್ಮೆಂಟ್ನ ರೇಷ್ಮಾ ಶೆಟ್ಟಿ, ವಿ.ಎಂ ಕಾಮತ್ ಅವರೂ ಜೊತೆಯಲ್ಲಿದ್ದರು. </p><p>ಕೋಲ ಕಟ್ಟೆಯಲ್ಲಿ ಹರಕೆಯನ್ನು ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಹೆಸರು ಬರೆಸಿದ್ದ ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾನುವಾರ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿದ್ದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾದರು.</p><p>ಬಾಲಿವುಡ್ ಕುಟುಂಬ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಬಂದಿತ್ತು. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿಯವರಲ್ಲಿ ಅವರು ಮನವಿ ಮಾಡಿದ್ದರು. </p><p>ಸ್ಥಳದಲ್ಲಿ ಫೋಟೊ ತೆಗೆಯಲು ಬಿಡಲಿಲ್ಲ. ಫೋಟೊ ತೆಗೆದವರಲ್ಲಿ, ‘ಅದನ್ನು ಅಳಿಸಿ’ ಎಂದು ವಿನಂತಿಸಿದ್ದರು. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಕೈಫ್ ಸೇರಿದಂತೆ ಉಳಿದವರು ವೀಕ್ಷಿಸಿದರು. ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>