<p><strong>ಬೆಳ್ತಂಗಡಿ</strong>: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ಮನೆಯಿಂದ ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ.</p>.<p>ಬೆದ್ರಬೆಟ್ಟು ನಿವಾಸಿ ಬಾಬು ಮಡಿವಾಳ ಎಂಬುವರ ಪತ್ನಿ ಮೋಹಿನಿ (60) ತೋಡಿಗೆ ಬಿದ್ದು ನೀರಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು.</p>.<p>ಭಾನುವಾರ ಸಂಜೆ ಕೂಲಿ ಕೆಲಸ ಮುಗಿಸಿ ಅಂಗಡಿಗೆ ಹೋದವರು ಮನೆಗೆ ಹಿಂತಿರುಗಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದ್ದು ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸೋಮವಾರ ಬಂಗಾಡಿ ಸಹಸ್ರ ನಾಗಬನ ದೇವಸ್ಥಾನ ಬಳಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.</p>.<p>ಮೋಹಿನಿ ಅವರು ಅಂಗಡಿಗೆ ಹೋಗುವ ದಾರಿ ಮಧ್ಯೆ ಬೆದ್ರಬೆಟ್ಟು ಬಳಿ ತೋಡು ದಾಟಿ ಹೋಗಬೇಕಾಗಿದ್ದು, ತೋಡು ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿಕೊಂಡು ಹೋಗಿರಬಹುದೆಂದು ಶಂಕಿಸಲಾಗಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಕಾರದೊಂದಿಗೆ ಮೃತದೇಹವನ್ನು ನದಿಯಿಂದ ಮೇಲೆತ್ತಲಾಯಿತು. ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ</strong>: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ಮನೆಯಿಂದ ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ.</p>.<p>ಬೆದ್ರಬೆಟ್ಟು ನಿವಾಸಿ ಬಾಬು ಮಡಿವಾಳ ಎಂಬುವರ ಪತ್ನಿ ಮೋಹಿನಿ (60) ತೋಡಿಗೆ ಬಿದ್ದು ನೀರಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು.</p>.<p>ಭಾನುವಾರ ಸಂಜೆ ಕೂಲಿ ಕೆಲಸ ಮುಗಿಸಿ ಅಂಗಡಿಗೆ ಹೋದವರು ಮನೆಗೆ ಹಿಂತಿರುಗಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದ್ದು ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸೋಮವಾರ ಬಂಗಾಡಿ ಸಹಸ್ರ ನಾಗಬನ ದೇವಸ್ಥಾನ ಬಳಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.</p>.<p>ಮೋಹಿನಿ ಅವರು ಅಂಗಡಿಗೆ ಹೋಗುವ ದಾರಿ ಮಧ್ಯೆ ಬೆದ್ರಬೆಟ್ಟು ಬಳಿ ತೋಡು ದಾಟಿ ಹೋಗಬೇಕಾಗಿದ್ದು, ತೋಡು ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿಕೊಂಡು ಹೋಗಿರಬಹುದೆಂದು ಶಂಕಿಸಲಾಗಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಕಾರದೊಂದಿಗೆ ಮೃತದೇಹವನ್ನು ನದಿಯಿಂದ ಮೇಲೆತ್ತಲಾಯಿತು. ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>