ಮಂಗಳೂರು: ನಾಪತ್ತೆಯಾಗಿದ್ದ ಮುಸ್ಲಿಂ ಮುಖಂಡ ಮುಮ್ತಾಜ್ ಅಲಿ ಅವರ ಮೃತದೇಹವು ಕೂಳೂರು ಸೇತುವೆ ಬಳಿ ಸೋಮವಾರ ಪತ್ತೆಯಾಗಿದೆ.
ಅವರು ಭಾನುವಾರ ಮುಂಜಾನೆ ಮನೆಯಿಂದ ಹೊರಟಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು ಸೇತುವೆಯ ಬಳಿ ಅವರು ಕಾರು ಭಾನುವಾರ ಬೆಳಿಗ್ಗೆ ಪತ್ತೆಯಾಗಿತ್ತು. ಅವರು ನದಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ಕರಾವಳಿ ರಕ್ಷಣಾ ಪಡೆ ಯ ತಂಡಗಳ ಸಹಾಯದಿಂದ ಶೋಧಕಾರ್ಯ ನಡೆದಿತ್ತು.