<p><strong>ಮಂಗಳೂರು:</strong> ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಂತೂರು ಹಾಗೂ ಕೆಪಿಟಿ ಜಂಕ್ಷನ್ ಗಳಲ್ಲಿ ಹೊಂಡಗಳಿಂದಾಗಿ ನಿತ್ಯವೂ ವಾಹನದಟ್ಟಣೆ ಉಂಟಾಗುತ್ತಿದೆ. ಈ ಜಂಕ್ಷನ್ ಗಳನ್ನು ಹಾಗುಹೊಗಲು ವಾಹನ ಸವಾರರು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.</p><p>ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರಿಂದ ದೂರು ಬಂದಿದ್ದರಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮಂಗಳವಾರ ಈ ಎರಡೂ ವೃತ್ತಗಳನ್ನು ಪರಿಶೀಲಿಸಿದರು. ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಕ್ರಮ ವಹಿಸುವಂತೆ ಪಾಲಿಕೆ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ನಂತೂರು ಹಾಗೂ ಕೆಪಿಟಿಯಲ್ಲಿ ಹೆದ್ದಾರಿಯನ್ನು ರಸ್ತೆಗಳು ಕೂಡುವಲ್ಲಿ ಸೃಷ್ಟಿಯಾಗಿರುವ ಹೊಂಡಗಳನ್ನು ತ್ವರಿತವಾಗಿ ಮುಚ್ಚಬೇಕು.ಇಲ್ಲಿ ಫೇವರ್ ಫಿನಿಶ್ ಡಾಂಬರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದರು.</p><p>ನಂತೂರು ಮತ್ತು ಕೆಪಿಟಿ ವೃತ್ತಗಳನ್ನು ನಿತ್ಯವೂ ಪರಿಶೀಲಿಸಿ ಪ್ರತಿ ಎರಡು ದಿನಕ್ಕೊಮ್ಮೆಯಾದರೂ ಹೊಂಡ ಮುಚ್ಚಲು ಕ್ರಮವಹಿಸಬೇಕು ಎಂದು ಎನ್ಎಚ್ಎಐ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p><p>ಪಾಲಿಕೆ ಆಯುಕ್ತ ಆನಂದ ಸಿ.ಎಲ್, ಕಂದಾಯ ವಿಭಾಗದ ಉಪಾಯುಕ್ತ ಗಿರೀಶ್ ನಂದನ್, ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ, ಎನ್ಎಚ್ಎಐ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಂತೂರು ಹಾಗೂ ಕೆಪಿಟಿ ಜಂಕ್ಷನ್ ಗಳಲ್ಲಿ ಹೊಂಡಗಳಿಂದಾಗಿ ನಿತ್ಯವೂ ವಾಹನದಟ್ಟಣೆ ಉಂಟಾಗುತ್ತಿದೆ. ಈ ಜಂಕ್ಷನ್ ಗಳನ್ನು ಹಾಗುಹೊಗಲು ವಾಹನ ಸವಾರರು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.</p><p>ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರಿಂದ ದೂರು ಬಂದಿದ್ದರಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮಂಗಳವಾರ ಈ ಎರಡೂ ವೃತ್ತಗಳನ್ನು ಪರಿಶೀಲಿಸಿದರು. ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಕ್ರಮ ವಹಿಸುವಂತೆ ಪಾಲಿಕೆ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ನಂತೂರು ಹಾಗೂ ಕೆಪಿಟಿಯಲ್ಲಿ ಹೆದ್ದಾರಿಯನ್ನು ರಸ್ತೆಗಳು ಕೂಡುವಲ್ಲಿ ಸೃಷ್ಟಿಯಾಗಿರುವ ಹೊಂಡಗಳನ್ನು ತ್ವರಿತವಾಗಿ ಮುಚ್ಚಬೇಕು.ಇಲ್ಲಿ ಫೇವರ್ ಫಿನಿಶ್ ಡಾಂಬರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದರು.</p><p>ನಂತೂರು ಮತ್ತು ಕೆಪಿಟಿ ವೃತ್ತಗಳನ್ನು ನಿತ್ಯವೂ ಪರಿಶೀಲಿಸಿ ಪ್ರತಿ ಎರಡು ದಿನಕ್ಕೊಮ್ಮೆಯಾದರೂ ಹೊಂಡ ಮುಚ್ಚಲು ಕ್ರಮವಹಿಸಬೇಕು ಎಂದು ಎನ್ಎಚ್ಎಐ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p><p>ಪಾಲಿಕೆ ಆಯುಕ್ತ ಆನಂದ ಸಿ.ಎಲ್, ಕಂದಾಯ ವಿಭಾಗದ ಉಪಾಯುಕ್ತ ಗಿರೀಶ್ ನಂದನ್, ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ, ಎನ್ಎಚ್ಎಐ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>