<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಸಕ್ತ ಸಾಲಿನಲ್ಲಿ ಅನ್ನದಾತರ ಜ್ಞಾನವರ್ಧನೆ ಮತ್ತು ಆರ್ಥಿಕ ಬಲವರ್ಧನೆಗಾಗಿ ಕೃಷಿ ಮತ್ತು ಹೈನುಗಾರಿಕೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ₹20 ಕೋಟಿ ಅನುದಾನ ನಿಗದಿಗೊಳಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.</p>.<p>ರಾಜ್ಯದ 96 ತಾಲ್ಲೂಕುಗಳ 38,050 ಎಕರೆಯಲ್ಲಿ ಯಾಂತ್ರೀಕೃತ ಭತ್ತ ಬೇಸಾಯ, 91 ತಾಲ್ಲೂಕುಗಳ 5 ಸಾವಿರ ಎಕರೆಯಲ್ಲಿ ಸಿರಿಧಾನ್ಯ ಬೇಸಾಯ, 33 ತಾಲ್ಲೂಕುಗಳ 1,650 ಎಕರೆಯಲ್ಲಿ ಕಬ್ಬಿನ ಸುಸ್ಥಿರ ಬೇಸಾಯ ಮತ್ತು ಕಲ್ಯಾಣ ಕರ್ನಾಟಕ ವ್ಯಾಪ್ತಿಯ 24 ತಾಲ್ಲೂಕುಗಳ 2,400 ಹೈನುಗಾರರಲ್ಲಿ ಲಾಭದಾಯಕ ಹೈನುಗಾರಿಕಾಭಿವೃದ್ಧಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. </p>.<p>ಈ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ 4 ಸಾವಿರ ಕೃಷಿ ತಾಂತ್ರಿಕ ತರಬೇತಿಗಳು ಮತ್ತು 1,700 ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಂಡಿದ್ದು ಒಟ್ಟು 10 ಲಕ್ಷಕ್ಕೂ ಅಧಿಕ ರೈತರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಇದುವರೆಗೆ ರಾಜ್ಯದಲ್ಲಿ ಒಟ್ಟು 30 ಸಾವಿರ ಹೆಕ್ಟೇರ್ನಲ್ಲಿ ಯಾಂತ್ರೀಕೃತ ಭತ್ತ ಬೇಸಾಯ, 4ಸಾವಿರ ಹೆಕ್ಟೇರ್ನಲ್ಲಿ ಕಬ್ಬಿನ ಸುಸ್ಥಿರ ಬೇಸಾಯ ಮತ್ತು 3ಸಾವಿರ ಹೆಕ್ಟೇರ್ನಲ್ಲಿ ಸಿರಿಧಾನ್ಯ ಬೇಸಾಯವನ್ನು ಅನುಷ್ಠಾನಿಸಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ 4,963 ಹೈನುಗಾರರಿಗೆ ಪ್ರೇರಣೆ ನೀಡಿ ಹೈನುಗಾರಿಕೆಗೆ ಉತ್ತೇಜನ ನೀಡಲಾಗಿದೆ. ಈ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಒಟ್ಟು 5,264 ಕೃಷಿ ತಾಂತ್ರಿಕ ತರಬೇತಿ ಮತ್ತು ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು ₹75 ಕೋಟಿ ಅನುದಾನ ವಿನಿಯೋಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ವಿ. ಹೇಮಾವತಿ ಹೆಗ್ಗಡೆ ಅವರ ಮಾರ್ಗದರ್ಶನದಂತೆ ನಾಲ್ಕು ದಶಕಗಳಿಂದ ವಿವಿಧ ಕೃಷಿ ಅಭಿವೃದ್ಧಿ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಿಸಲಾಗುತ್ತಿದ್ದು, ರೈತ ಬಾಂಧವರಿಗೆ ಬಹಳಷ್ಟು ಉಪಯೋಗವಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಸಕ್ತ ಸಾಲಿನಲ್ಲಿ ಅನ್ನದಾತರ ಜ್ಞಾನವರ್ಧನೆ ಮತ್ತು ಆರ್ಥಿಕ ಬಲವರ್ಧನೆಗಾಗಿ ಕೃಷಿ ಮತ್ತು ಹೈನುಗಾರಿಕೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ₹20 ಕೋಟಿ ಅನುದಾನ ನಿಗದಿಗೊಳಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.</p>.<p>ರಾಜ್ಯದ 96 ತಾಲ್ಲೂಕುಗಳ 38,050 ಎಕರೆಯಲ್ಲಿ ಯಾಂತ್ರೀಕೃತ ಭತ್ತ ಬೇಸಾಯ, 91 ತಾಲ್ಲೂಕುಗಳ 5 ಸಾವಿರ ಎಕರೆಯಲ್ಲಿ ಸಿರಿಧಾನ್ಯ ಬೇಸಾಯ, 33 ತಾಲ್ಲೂಕುಗಳ 1,650 ಎಕರೆಯಲ್ಲಿ ಕಬ್ಬಿನ ಸುಸ್ಥಿರ ಬೇಸಾಯ ಮತ್ತು ಕಲ್ಯಾಣ ಕರ್ನಾಟಕ ವ್ಯಾಪ್ತಿಯ 24 ತಾಲ್ಲೂಕುಗಳ 2,400 ಹೈನುಗಾರರಲ್ಲಿ ಲಾಭದಾಯಕ ಹೈನುಗಾರಿಕಾಭಿವೃದ್ಧಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. </p>.<p>ಈ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ 4 ಸಾವಿರ ಕೃಷಿ ತಾಂತ್ರಿಕ ತರಬೇತಿಗಳು ಮತ್ತು 1,700 ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಂಡಿದ್ದು ಒಟ್ಟು 10 ಲಕ್ಷಕ್ಕೂ ಅಧಿಕ ರೈತರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಇದುವರೆಗೆ ರಾಜ್ಯದಲ್ಲಿ ಒಟ್ಟು 30 ಸಾವಿರ ಹೆಕ್ಟೇರ್ನಲ್ಲಿ ಯಾಂತ್ರೀಕೃತ ಭತ್ತ ಬೇಸಾಯ, 4ಸಾವಿರ ಹೆಕ್ಟೇರ್ನಲ್ಲಿ ಕಬ್ಬಿನ ಸುಸ್ಥಿರ ಬೇಸಾಯ ಮತ್ತು 3ಸಾವಿರ ಹೆಕ್ಟೇರ್ನಲ್ಲಿ ಸಿರಿಧಾನ್ಯ ಬೇಸಾಯವನ್ನು ಅನುಷ್ಠಾನಿಸಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ 4,963 ಹೈನುಗಾರರಿಗೆ ಪ್ರೇರಣೆ ನೀಡಿ ಹೈನುಗಾರಿಕೆಗೆ ಉತ್ತೇಜನ ನೀಡಲಾಗಿದೆ. ಈ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಒಟ್ಟು 5,264 ಕೃಷಿ ತಾಂತ್ರಿಕ ತರಬೇತಿ ಮತ್ತು ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು ₹75 ಕೋಟಿ ಅನುದಾನ ವಿನಿಯೋಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ವಿ. ಹೇಮಾವತಿ ಹೆಗ್ಗಡೆ ಅವರ ಮಾರ್ಗದರ್ಶನದಂತೆ ನಾಲ್ಕು ದಶಕಗಳಿಂದ ವಿವಿಧ ಕೃಷಿ ಅಭಿವೃದ್ಧಿ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಿಸಲಾಗುತ್ತಿದ್ದು, ರೈತ ಬಾಂಧವರಿಗೆ ಬಹಳಷ್ಟು ಉಪಯೋಗವಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>