<p><strong>ಮಂಗಳೂರು</strong>: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗೆ ನೋಟಿಸ್ ನೀಡಿರುವ ರಾಜ್ಯಪಾಲರು, ಕೇಂದ್ರ ಸರ್ಕಾರದ ಕೈ ಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಗುಂಡೂರಾವ್ ಆರೋಪಿಸಿದರು.</p><p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರರು ಹೇಗಾದರೂ ಮಾಡಿ</p><p>ಸಿದ್ದರಾಮಯ್ಯ ಅವರನ್ನು ಹಗರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಹೀಗಾಗಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ದೂರು ಪಡೆದು ಕೆಲವೇ ಗಂಟೆಗಳಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗೆ ನೊಟೀಸ್ ಜಾರಿ ಮಾಡಿದ್ದಾರೆ.</p><p>ಯಾವುದೇ ಕಾನೂನು ತಜ್ಞರ ಜೊತೆಗೆ ಚರ್ಚಿಸದೆ, ನೂರಾರು ಪುಟಗಳ ದೂರು ಪಡೆದು ಕೆಲವೇ ಗಂಟೆಗಳಲ್ಲಿ ನೊಟೀಸ್ ನೀಡಿದ್ದಾರೆ ಎಂದು ಆರೋಪಿಸಿದರು. </p><p>ಕಾನೂನು ಪ್ರಕಾರ ಸಿದ್ದರಾಮಯ್ಯ ಏನು ತಪ್ಲು ಮಾಡಿದ್ದಾರೆ ತೋರಿಸಲಿ.</p><p>ಸಿದ್ದರಾಮಯ್ಯ ಪತ್ನಿ ಕಳೆದುಕೊಂಡ ಭೂಮಿ ವಾಪಾಸ್ ಪಡೆದಿದ್ದಾರೆ.</p><p>ಮುಡಾದಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಇದ್ದ ಬೋರ್ಡ್ ಇತ್ತು. ಆಗಲೂ ಅನೇಕರಿಗೆ ಭೂಮಿ ನೀಡಲಾಗಿದೆ. ಈಗ ಬಿಜೆಪಿಯವರ ಪಾದಯಾತ್ರೆಗೆ ಏನು ನೈತಿಕತೆ ಇದೆ ಎಂದು ಪ್ರಶ್ನಿಸಿದರು. </p><p>ಪಾದಯಾತ್ರೆಗೆ ಅಧಿಕೃತ ವಾಗಿ ಅನುಮತಿ ನೀಡಲಾಗದು. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಅವರಿಗೆ ಅವಕಾಶ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>ಕೇಂದ್ರ ಸರ್ಕಾರ ಐಟಿ, ಇಡಿ ಎಲ್ಲವನ್ನೂ ದುರುಪಯೋಗ ಮಾಡಿಕೊಳ್ಳುತ್ತಿದೆ.</p><p>ದೇಶದ ಅನೇಕ ರಾಜ್ಯಗಳಲ್ಲಿ ಇಂತಹುದೇ ಸ್ಥಿತಿ ಇದೆ. ಶೇ</p><p>95ರಷ್ಟು ಇಡಿ, ಐಟಿ ದಾಳಿಗಳು ವಿರೋಧ ಪಕ್ಷಗಳ ಮೇಲೆ ಆಗಿವೆ ಎಂದು ಅವರು ಆರೋಪಿಸಿದರು.</p>.MUDA Scam | ಮುಖ್ಯಮಂತ್ರಿಗೆ ರಾಜ್ಯಪಾಲರ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗೆ ನೋಟಿಸ್ ನೀಡಿರುವ ರಾಜ್ಯಪಾಲರು, ಕೇಂದ್ರ ಸರ್ಕಾರದ ಕೈ ಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಗುಂಡೂರಾವ್ ಆರೋಪಿಸಿದರು.</p><p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರರು ಹೇಗಾದರೂ ಮಾಡಿ</p><p>ಸಿದ್ದರಾಮಯ್ಯ ಅವರನ್ನು ಹಗರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಹೀಗಾಗಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ದೂರು ಪಡೆದು ಕೆಲವೇ ಗಂಟೆಗಳಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗೆ ನೊಟೀಸ್ ಜಾರಿ ಮಾಡಿದ್ದಾರೆ.</p><p>ಯಾವುದೇ ಕಾನೂನು ತಜ್ಞರ ಜೊತೆಗೆ ಚರ್ಚಿಸದೆ, ನೂರಾರು ಪುಟಗಳ ದೂರು ಪಡೆದು ಕೆಲವೇ ಗಂಟೆಗಳಲ್ಲಿ ನೊಟೀಸ್ ನೀಡಿದ್ದಾರೆ ಎಂದು ಆರೋಪಿಸಿದರು. </p><p>ಕಾನೂನು ಪ್ರಕಾರ ಸಿದ್ದರಾಮಯ್ಯ ಏನು ತಪ್ಲು ಮಾಡಿದ್ದಾರೆ ತೋರಿಸಲಿ.</p><p>ಸಿದ್ದರಾಮಯ್ಯ ಪತ್ನಿ ಕಳೆದುಕೊಂಡ ಭೂಮಿ ವಾಪಾಸ್ ಪಡೆದಿದ್ದಾರೆ.</p><p>ಮುಡಾದಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಇದ್ದ ಬೋರ್ಡ್ ಇತ್ತು. ಆಗಲೂ ಅನೇಕರಿಗೆ ಭೂಮಿ ನೀಡಲಾಗಿದೆ. ಈಗ ಬಿಜೆಪಿಯವರ ಪಾದಯಾತ್ರೆಗೆ ಏನು ನೈತಿಕತೆ ಇದೆ ಎಂದು ಪ್ರಶ್ನಿಸಿದರು. </p><p>ಪಾದಯಾತ್ರೆಗೆ ಅಧಿಕೃತ ವಾಗಿ ಅನುಮತಿ ನೀಡಲಾಗದು. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಅವರಿಗೆ ಅವಕಾಶ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>ಕೇಂದ್ರ ಸರ್ಕಾರ ಐಟಿ, ಇಡಿ ಎಲ್ಲವನ್ನೂ ದುರುಪಯೋಗ ಮಾಡಿಕೊಳ್ಳುತ್ತಿದೆ.</p><p>ದೇಶದ ಅನೇಕ ರಾಜ್ಯಗಳಲ್ಲಿ ಇಂತಹುದೇ ಸ್ಥಿತಿ ಇದೆ. ಶೇ</p><p>95ರಷ್ಟು ಇಡಿ, ಐಟಿ ದಾಳಿಗಳು ವಿರೋಧ ಪಕ್ಷಗಳ ಮೇಲೆ ಆಗಿವೆ ಎಂದು ಅವರು ಆರೋಪಿಸಿದರು.</p>.MUDA Scam | ಮುಖ್ಯಮಂತ್ರಿಗೆ ರಾಜ್ಯಪಾಲರ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>