<p><strong>ಮಂಗಳೂರು:</strong> ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶನಿವಾರ ಇಬ್ಬರು ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಇದುವರಗೆ ಒಟ್ಟು ನಾಲ್ವರು ನಾಮಪತ್ರ ಸಲ್ಲಿಸಿದಂತಾಗಿದೆ.</p>.<p>‘ದೀಪಕ್ ರಾಜೇಶ್ ಕುವೆಲ್ಲೊ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಎಂ. ಅವರು ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>12,839 ಲೀಟರ್ ಮದ್ಯ ವಶ: </p>.<p>ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದಂದಿನಿಂದ ಶನಿವಾರದವರೆಗೆ ಜಿಲ್ಲೆಯಲ್ಲಿ ₹ 41.88 ಲಕ್ಷ ಮೌಲ್ಯದ 12,839 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 15.5 ಕೆ.ಜಿ ನಿಷೇಧಿತ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ₹ 8.70 ಲಕ್ಷ ಎಂದು ಅಂದಾಜಿಸಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಪ್ರಕರಣಗಳು ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಒಟ್ಟು 227 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶನಿವಾರ ಇಬ್ಬರು ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಇದುವರಗೆ ಒಟ್ಟು ನಾಲ್ವರು ನಾಮಪತ್ರ ಸಲ್ಲಿಸಿದಂತಾಗಿದೆ.</p>.<p>‘ದೀಪಕ್ ರಾಜೇಶ್ ಕುವೆಲ್ಲೊ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಎಂ. ಅವರು ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>12,839 ಲೀಟರ್ ಮದ್ಯ ವಶ: </p>.<p>ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದಂದಿನಿಂದ ಶನಿವಾರದವರೆಗೆ ಜಿಲ್ಲೆಯಲ್ಲಿ ₹ 41.88 ಲಕ್ಷ ಮೌಲ್ಯದ 12,839 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 15.5 ಕೆ.ಜಿ ನಿಷೇಧಿತ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ₹ 8.70 ಲಕ್ಷ ಎಂದು ಅಂದಾಜಿಸಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಪ್ರಕರಣಗಳು ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಒಟ್ಟು 227 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>