<p><strong>ಬದಿಯಡ್ಕ</strong>: ‘ನಾಡಿನ ಹಿರಿಯ ಕಲಾವಿದರನ್ನು ಗುರುತಿಸಿ ಗೌರವಿಸಬೇಕು. ಇದರಿಂದ ಹೊಸ ಕಲಾವಿದರಿಗೆ ಹಿರಿಯ ಕಲಾವಿದರ ಪರಿಚಯ ಹಾಗೂ ಅವರ ಆದರ್ಶಗಳನ್ನು ಅರಿಯಲು ಅವಕಾಶವಾಗುತ್ತದೆ. ಯೋಗ್ಯರನ್ನು ಅಭಿನಂದಿಸುವುದರಿಂದ ಗೌರವಿಸುವವರ ಗೌರವ ಹೆಚ್ಚುತ್ತದೆ’ ಎಂದು ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.</p>.<p>ಎಡನೀರು ಮಠದಲ್ಲಿ ಪುತ್ತೂರು ಮುರದ ಸತ್ಯಶಾಂತ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ತಲೆಂಗಳ ಶಂಭಟ್ಟ ಪಾರ್ವತಿ ಭಾಗವತ ಸ್ಮಾರಕ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆಯನ್ನು ರಾಜೇಂದ್ರ ಕಲ್ಲೂರಾಯ ವಹಿಸಿದ್ದರು.</p>.<p>ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟ್ರಮಣ ಭಟ್ಟ ಅವರಿಗೆ ಶಂಭಟ್ಟ ಭಾಗವತ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಪ್ರಶಸ್ತಿ ಪುರಸ್ಕೃತರ ಕುರಿತು ಪನೆಯಾಲ ರಾಮಚಂದ್ರ ಭಟ್ ಮಾತನಾಡಿದರು. ಉದಯಶಂಕರ ಭಟ್ ಸನ್ಮಾನ ಪತ್ರ ವಾಚಿಸಿದರು.</p>.<p>ಯಕ್ಷಗಾನ ಕಲಾವಿದರಾದ ಭಾಸ್ಕರ ಭಾರ್ಯ, ಪಿ.ಜಿ.ಜಗನ್ನಿವಾಸ ರಾವ್, ಜ್ಯೋತಿಷಿ ಕೃಷ್ಣಮೂರ್ತಿ ಪುದುಕೋಳಿ, ಡಾ.ವಿಷ್ಣುಪ್ರಸಾದ್ ಬರೆಕರೆ, ಸತ್ಯಾತ್ಮ ಕುಂಟಿನಿ ಭಾಗವಹಿಸಿದ್ದರು. ಪ್ರತಿಭಾ ಪುದುಕೋಳಿ ಪ್ರಾರ್ಥಿಸಿದರು. ಶಾಂತ ಕುಂಟಿನಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನಾಟ್ಯಗುರು ಸಬ್ಬಣಕೋಡಿ ರಾಮ ಭಟ್ ವಂದಿಸಿದರು. ಅನುಪಮಾ ರಾಘವೇಂದ್ರ ಉಡುಪುಮೂಲೆ ನಿರೂಪಿಸಿದರು. ನಂತರ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಮಕ್ಕಳಿಂದ ಯಕ್ಷಗಾನ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದಿಯಡ್ಕ</strong>: ‘ನಾಡಿನ ಹಿರಿಯ ಕಲಾವಿದರನ್ನು ಗುರುತಿಸಿ ಗೌರವಿಸಬೇಕು. ಇದರಿಂದ ಹೊಸ ಕಲಾವಿದರಿಗೆ ಹಿರಿಯ ಕಲಾವಿದರ ಪರಿಚಯ ಹಾಗೂ ಅವರ ಆದರ್ಶಗಳನ್ನು ಅರಿಯಲು ಅವಕಾಶವಾಗುತ್ತದೆ. ಯೋಗ್ಯರನ್ನು ಅಭಿನಂದಿಸುವುದರಿಂದ ಗೌರವಿಸುವವರ ಗೌರವ ಹೆಚ್ಚುತ್ತದೆ’ ಎಂದು ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.</p>.<p>ಎಡನೀರು ಮಠದಲ್ಲಿ ಪುತ್ತೂರು ಮುರದ ಸತ್ಯಶಾಂತ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ತಲೆಂಗಳ ಶಂಭಟ್ಟ ಪಾರ್ವತಿ ಭಾಗವತ ಸ್ಮಾರಕ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆಯನ್ನು ರಾಜೇಂದ್ರ ಕಲ್ಲೂರಾಯ ವಹಿಸಿದ್ದರು.</p>.<p>ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟ್ರಮಣ ಭಟ್ಟ ಅವರಿಗೆ ಶಂಭಟ್ಟ ಭಾಗವತ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಪ್ರಶಸ್ತಿ ಪುರಸ್ಕೃತರ ಕುರಿತು ಪನೆಯಾಲ ರಾಮಚಂದ್ರ ಭಟ್ ಮಾತನಾಡಿದರು. ಉದಯಶಂಕರ ಭಟ್ ಸನ್ಮಾನ ಪತ್ರ ವಾಚಿಸಿದರು.</p>.<p>ಯಕ್ಷಗಾನ ಕಲಾವಿದರಾದ ಭಾಸ್ಕರ ಭಾರ್ಯ, ಪಿ.ಜಿ.ಜಗನ್ನಿವಾಸ ರಾವ್, ಜ್ಯೋತಿಷಿ ಕೃಷ್ಣಮೂರ್ತಿ ಪುದುಕೋಳಿ, ಡಾ.ವಿಷ್ಣುಪ್ರಸಾದ್ ಬರೆಕರೆ, ಸತ್ಯಾತ್ಮ ಕುಂಟಿನಿ ಭಾಗವಹಿಸಿದ್ದರು. ಪ್ರತಿಭಾ ಪುದುಕೋಳಿ ಪ್ರಾರ್ಥಿಸಿದರು. ಶಾಂತ ಕುಂಟಿನಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನಾಟ್ಯಗುರು ಸಬ್ಬಣಕೋಡಿ ರಾಮ ಭಟ್ ವಂದಿಸಿದರು. ಅನುಪಮಾ ರಾಘವೇಂದ್ರ ಉಡುಪುಮೂಲೆ ನಿರೂಪಿಸಿದರು. ನಂತರ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಮಕ್ಕಳಿಂದ ಯಕ್ಷಗಾನ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>