<p><strong>ಮಂಗಳೂರು:</strong> ನಗರದ ಹೊರ ವಲಯದ ಜೋಕಟ್ಟೆ ಅಂಗರಗುಂಡಿ ಬಳಿ ಸರಕು ಸಾಗಣೆ ರೈಲು ಡಿಕ್ಕಿಹೊಡೆದು 17 ಎಮ್ಮೆಗಳು ಸೇರಿ 20 ಜಾನುವಾರುಗಳು ಸೋಮವಾರ ನಸುಕಿನಲ್ಲಿ ಮೃತಪಟ್ಟಿವೆ. </p><p>'ಬೆಳಿಗ್ಗೆ 5 ಗಂಟೆ ಸುಮಾರಿಗೆ ಗೂಡ್ಸ್ ರೈಲು ನಿಧಾನವಾಗಿ ಚಲಿಸುತ್ತಿತ್ತು. ಸ್ಥಳಕ್ಕೆ ಹೋಗಿ ನೋಡಿದಾಗ ಎಮ್ಮೆಗಳು ಸತ್ತಿರುವುದು ಕಂಡು ಬಂತು' ಎಂದು ಪ್ರತ್ಯಕ್ಷದರ್ಶಿಯೊಬ್ಬರು 'ಪ್ರಜಾವಾಣಿ'ಗೆ ಮಾಹಿತಿ ನೀಡಿದರು. </p>.<p>ತೋಕೂರಿನಿಂದ ಪಣಂಬೂರಿಗೆ ಸರಕು ಸಾಗಣೆ ರೈಲು ಸಾಗುವ ಹಳಿ ಇದೆ. ಇದರಲ್ಲಿ ಗೂಡ್ಸ್ ರೈಲು ಸಾಗುವಾಗ ಹಾರ್ನ್ ಹಾಕುತ್ತಾರೆ. ಬಹುಶಃ ಎಮ್ಮೆಗಳು ಹಳಿಯ ಮೇಲೆ ಮಲಗಿದ್ದಾಗ ರೈಲು ಹಾದುಹೋಗಿರಬಹುದು' ಎಂದು ಸ್ಥಳೀಯರು ಸಂಶಯ ವ್ಯಕ್ತ ಪಡಿಸಿದ್ದಾರೆ.</p><p>2021ರಲ್ಲೂ ತೋಕೂರಿನಲ್ಲಿ ಇದೇ ರೀತಿ ಅವಘಡ ಸಂಭವಿಸಿತ್ತು. 13 ಎಮ್ಮೆಗಳು ಸತ್ತಿದ್ದವು. ಶನಿವಾರ ಈ ಪ್ರದೇಶದಲ್ಲಿ ಭಾರೀ ಮಳೆಯಾದ ಕಾರಣ ರೈಲು ಹಳಿ ಬಳಿ ಕೆಸರು ನೀರು ನಿಂತಿತ್ತು. ಎಮ್ಮೆಗಳು ಕೆಸರಿನ ಬಳಿ ಮಲಗುತ್ತವೆ. ಆಗ ರೈಲು ಹಾರ್ನ್ ಹಾಕುತ್ತಾ ಸಾಗಿಬಂದರೂ ಎಮ್ಮೆಗಳು ಮೇಲೇಳುವುದಿಲ್ಲ' ಎಂದು ಅವರು ವಿವರಿಸಿದರು.</p><p>ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರಿನ ಕದ್ರಿ ಅಗ್ನಿಶಾಮಕದಳದ ಸಿಬ್ಬಂದಿ ಹಳಿಗಳ ಬಳಿ ಬಿದ್ದಿದ್ದ ಎಮ್ಮೆಗಳ ಮೃತದೇಹಗಳನ್ನು ತೆರವು ಮಾಡಿದ್ದಾರೆ. ನಾಲ್ಕು ಎಮ್ಮೆಗಳನ್ನು ರಕ್ಷಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. </p><p>'ಬೀಡಾಡಿ ಜಾನುವಾರುಗಳ ಸುರಕ್ಷತೆಗೆ ಪಾಲಿಕೆ ಕ್ರಮ ಕೈಗೊಳ್ಳಬೇಕು' ಎಂದು ಡಿವೈಎಫ್ಐ ಮುಖಂಡ ಇಮ್ತಿಯಾಜ್ ಒತ್ತಾಯಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದ ಹೊರ ವಲಯದ ಜೋಕಟ್ಟೆ ಅಂಗರಗುಂಡಿ ಬಳಿ ಸರಕು ಸಾಗಣೆ ರೈಲು ಡಿಕ್ಕಿಹೊಡೆದು 17 ಎಮ್ಮೆಗಳು ಸೇರಿ 20 ಜಾನುವಾರುಗಳು ಸೋಮವಾರ ನಸುಕಿನಲ್ಲಿ ಮೃತಪಟ್ಟಿವೆ. </p><p>'ಬೆಳಿಗ್ಗೆ 5 ಗಂಟೆ ಸುಮಾರಿಗೆ ಗೂಡ್ಸ್ ರೈಲು ನಿಧಾನವಾಗಿ ಚಲಿಸುತ್ತಿತ್ತು. ಸ್ಥಳಕ್ಕೆ ಹೋಗಿ ನೋಡಿದಾಗ ಎಮ್ಮೆಗಳು ಸತ್ತಿರುವುದು ಕಂಡು ಬಂತು' ಎಂದು ಪ್ರತ್ಯಕ್ಷದರ್ಶಿಯೊಬ್ಬರು 'ಪ್ರಜಾವಾಣಿ'ಗೆ ಮಾಹಿತಿ ನೀಡಿದರು. </p>.<p>ತೋಕೂರಿನಿಂದ ಪಣಂಬೂರಿಗೆ ಸರಕು ಸಾಗಣೆ ರೈಲು ಸಾಗುವ ಹಳಿ ಇದೆ. ಇದರಲ್ಲಿ ಗೂಡ್ಸ್ ರೈಲು ಸಾಗುವಾಗ ಹಾರ್ನ್ ಹಾಕುತ್ತಾರೆ. ಬಹುಶಃ ಎಮ್ಮೆಗಳು ಹಳಿಯ ಮೇಲೆ ಮಲಗಿದ್ದಾಗ ರೈಲು ಹಾದುಹೋಗಿರಬಹುದು' ಎಂದು ಸ್ಥಳೀಯರು ಸಂಶಯ ವ್ಯಕ್ತ ಪಡಿಸಿದ್ದಾರೆ.</p><p>2021ರಲ್ಲೂ ತೋಕೂರಿನಲ್ಲಿ ಇದೇ ರೀತಿ ಅವಘಡ ಸಂಭವಿಸಿತ್ತು. 13 ಎಮ್ಮೆಗಳು ಸತ್ತಿದ್ದವು. ಶನಿವಾರ ಈ ಪ್ರದೇಶದಲ್ಲಿ ಭಾರೀ ಮಳೆಯಾದ ಕಾರಣ ರೈಲು ಹಳಿ ಬಳಿ ಕೆಸರು ನೀರು ನಿಂತಿತ್ತು. ಎಮ್ಮೆಗಳು ಕೆಸರಿನ ಬಳಿ ಮಲಗುತ್ತವೆ. ಆಗ ರೈಲು ಹಾರ್ನ್ ಹಾಕುತ್ತಾ ಸಾಗಿಬಂದರೂ ಎಮ್ಮೆಗಳು ಮೇಲೇಳುವುದಿಲ್ಲ' ಎಂದು ಅವರು ವಿವರಿಸಿದರು.</p><p>ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರಿನ ಕದ್ರಿ ಅಗ್ನಿಶಾಮಕದಳದ ಸಿಬ್ಬಂದಿ ಹಳಿಗಳ ಬಳಿ ಬಿದ್ದಿದ್ದ ಎಮ್ಮೆಗಳ ಮೃತದೇಹಗಳನ್ನು ತೆರವು ಮಾಡಿದ್ದಾರೆ. ನಾಲ್ಕು ಎಮ್ಮೆಗಳನ್ನು ರಕ್ಷಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. </p><p>'ಬೀಡಾಡಿ ಜಾನುವಾರುಗಳ ಸುರಕ್ಷತೆಗೆ ಪಾಲಿಕೆ ಕ್ರಮ ಕೈಗೊಳ್ಳಬೇಕು' ಎಂದು ಡಿವೈಎಫ್ಐ ಮುಖಂಡ ಇಮ್ತಿಯಾಜ್ ಒತ್ತಾಯಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>