‘ನಾವು ಒಂದು ಬದ್ಧತೆ ಇಟ್ಟುಕೊಳ್ಳಬೇಕು. ನಾವು ಅಥವಾ ನಮ್ಮ ಮನೆಯವರ ಮದುವೆ ಸಮಾರಂಭವನ್ನು ಹಿಂದೂ ಸಮುದಾಯದವರ ಸಭಾಂಗಣದಲ್ಲೇ ಏರ್ಪಡಿಸಬೇಕು. ಅನ್ಯ ಸಮುದಾಯದವರು ಕಟ್ಟಿದ ಸಭಾಂಗಣದಲ್ಲಿ ಅವರ ಸಮುದಾಯದವರು ಮದುವೆಯ ಆಗುವುದೇ ಕಡಿಮೆ. ನಮ್ಮದೇ ಆದಾಯ ಅವರಿಗೆ. ನಾವು ಖರೀದಿಸುವ ವಸ್ತುಗಳ ಒಂದಷ್ಟು ಮೊತ್ತ ವಿದೇಶಕ್ಕೆ ಹೋಗುತ್ತದೆ. ಆದು ಯಾರಿಗೋ ಸಲ್ಲುತ್ತದೆ’ ಎಂದು ಅರುಣ್ ಉಳ್ಳಾಲ್ ಹೇಳಿರುವುದು ಆ ವಿಡಿಯೊ ತುಣುಕಿನಲ್ಲಿದೆ.