<p><strong>ಬಂಟ್ವಾಳ:</strong> ನೇತ್ರಾವತಿ ನದಿಯಲ್ಲಿ ಬೆಳಿಗ್ಗೆ 8.1 ಮೀ. ಏರಿಕೆ ಕಂಡಿದ್ದ ನೀರಿನ ಮಟ್ಟ ಸಂಜೆಯಾಗುತ್ತಿದ್ದಂತೆಯೇ 8.6ಕ್ಕೆ ಏರಿಕೆಯಾಗಿದ್ದು, ಅಪಾಯದ ಹಂತ ತಲುಪಿದೆ.</p>.<p>ಇಲ್ಲಿನ ಪಾಣೆಮಂಗಳೂರು ಸಮೀಪದ ಆಲಡ್ಕ ತಗ್ಗು ಪ್ರದೇಶಗಳ 10 ಮನೆಗಳ ಸದಸ್ಯರನ್ನು ಸ್ಥಳಾಂತರಗೊಳಿಸಿದ್ದು, ಮತ್ತಷ್ಟು ಮನೆಗಳು ಜಲಾವೃತಗೊಳ್ಳುವ ಭೀತಿ ಎದುರಿಸುತ್ತಿವೆ.</p>.<p>ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶುಕ್ರವಾರ ಸಂಜೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ತಹಶೀಲ್ದಾರ್ ಅರ್ಚನಾ ಭಟ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಜತೆಗಿದ್ದರು.</p>.<p>ಇಲ್ಲಿನ ಪುರಸಭೆ ವ್ಯಾಪ್ತಿಯ ಬಡ್ಡಕಟ್ಟೆ ಬಸ್ ತಂಗುದಾಣ ಬಹುತೇಕ ಜಲಾವೃತಗೊಂಡಿದ್ದು, ಮಾರುಕಟ್ಟೆಯಲ್ಲಿ ಮೀನು ಮತ್ತು ಮಾಂಸದಂಗಡಿ ಬಳಿ ನೀರು ನುಗ್ಗುವ ಹಂತದಲ್ಲಿದೆ. ನೀರಿನ ಮಟ್ಟ ಇದೇ ರೀತಿ ಏರಿಕೆಯಾದರೆ ಬಹುತೇಕ ಅಡಿಕೆ ತೋಟಗಳು, ಮನೆ ಮತ್ತು ಅಂಗಡಿ ಜಲಾವೃತಗೊಳ್ಳಲಿದ್ದು, ಕೆಲವು ತಗ್ಗು ಪ್ರದೇಶದ ರಸ್ತೆಗಳೂ ಮುಳುಗಡೆಯಾಗುವ ಸಾಧ್ಯತೆ ಕಂಡು ಬಂದಿದೆ ಎನ್ನುತ್ತಾರೆ ಸ್ಥಳೀಯರು.</p>.<p>ಮಳೆಹಾನಿ: ಬಾಳ್ತಿಲ ಗ್ರಾಮದ ಕಂಟಿಕ ನಿವಾಸಿ ಸೋಮಪ್ಪ ನಾಯ್ಕ ಅವರ ಮನೆಗೆ ಅಡಿಕೆ ಮರ ಬಿದ್ದು, ಚಾವಣಿಗೆ ಹಾನಿಯಾಗಿದೆ. ನೀರಪಾದೆ ನಿವಾಸಿ ಸುಮತಿ ಭಾಸ್ಕರ ಅವರ ಮನೆಗೂ ಅಡಿಕೆ ಮರ ಬಿದ್ದು ಚಾವಣಿಗೆ ಹಾನಿಯಾಗಿದೆ. ಸಂಗಬೆಟ್ಟು ಗ್ರಾಮದ ಪರನೀರು ನಿವಾಸಿ ನಾಗೇಶ ಧರ್ಣಪ್ಪ ಎಂಬುರವ ರೊಟ್ಟಿ ತಯಾರಿಕಾ ಘಟಕದ ಕೊಠಡಿಗೆ ಮರ ಬಿದ್ದು ಹಾನಿಯಾಗಿದೆ. ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತರ ಎಂಬಲ್ಲಿ ಎರಡು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗೆ ಮಣ್ಣು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಆ ಬಳಿಕ ಗ್ರಾಮ ಪಂಚಾಯಿತಿ ವತಿಯಿಂದ ಮಣ್ಣು ತೆರವುಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ನೇತ್ರಾವತಿ ನದಿಯಲ್ಲಿ ಬೆಳಿಗ್ಗೆ 8.1 ಮೀ. ಏರಿಕೆ ಕಂಡಿದ್ದ ನೀರಿನ ಮಟ್ಟ ಸಂಜೆಯಾಗುತ್ತಿದ್ದಂತೆಯೇ 8.6ಕ್ಕೆ ಏರಿಕೆಯಾಗಿದ್ದು, ಅಪಾಯದ ಹಂತ ತಲುಪಿದೆ.</p>.<p>ಇಲ್ಲಿನ ಪಾಣೆಮಂಗಳೂರು ಸಮೀಪದ ಆಲಡ್ಕ ತಗ್ಗು ಪ್ರದೇಶಗಳ 10 ಮನೆಗಳ ಸದಸ್ಯರನ್ನು ಸ್ಥಳಾಂತರಗೊಳಿಸಿದ್ದು, ಮತ್ತಷ್ಟು ಮನೆಗಳು ಜಲಾವೃತಗೊಳ್ಳುವ ಭೀತಿ ಎದುರಿಸುತ್ತಿವೆ.</p>.<p>ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶುಕ್ರವಾರ ಸಂಜೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ತಹಶೀಲ್ದಾರ್ ಅರ್ಚನಾ ಭಟ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಜತೆಗಿದ್ದರು.</p>.<p>ಇಲ್ಲಿನ ಪುರಸಭೆ ವ್ಯಾಪ್ತಿಯ ಬಡ್ಡಕಟ್ಟೆ ಬಸ್ ತಂಗುದಾಣ ಬಹುತೇಕ ಜಲಾವೃತಗೊಂಡಿದ್ದು, ಮಾರುಕಟ್ಟೆಯಲ್ಲಿ ಮೀನು ಮತ್ತು ಮಾಂಸದಂಗಡಿ ಬಳಿ ನೀರು ನುಗ್ಗುವ ಹಂತದಲ್ಲಿದೆ. ನೀರಿನ ಮಟ್ಟ ಇದೇ ರೀತಿ ಏರಿಕೆಯಾದರೆ ಬಹುತೇಕ ಅಡಿಕೆ ತೋಟಗಳು, ಮನೆ ಮತ್ತು ಅಂಗಡಿ ಜಲಾವೃತಗೊಳ್ಳಲಿದ್ದು, ಕೆಲವು ತಗ್ಗು ಪ್ರದೇಶದ ರಸ್ತೆಗಳೂ ಮುಳುಗಡೆಯಾಗುವ ಸಾಧ್ಯತೆ ಕಂಡು ಬಂದಿದೆ ಎನ್ನುತ್ತಾರೆ ಸ್ಥಳೀಯರು.</p>.<p>ಮಳೆಹಾನಿ: ಬಾಳ್ತಿಲ ಗ್ರಾಮದ ಕಂಟಿಕ ನಿವಾಸಿ ಸೋಮಪ್ಪ ನಾಯ್ಕ ಅವರ ಮನೆಗೆ ಅಡಿಕೆ ಮರ ಬಿದ್ದು, ಚಾವಣಿಗೆ ಹಾನಿಯಾಗಿದೆ. ನೀರಪಾದೆ ನಿವಾಸಿ ಸುಮತಿ ಭಾಸ್ಕರ ಅವರ ಮನೆಗೂ ಅಡಿಕೆ ಮರ ಬಿದ್ದು ಚಾವಣಿಗೆ ಹಾನಿಯಾಗಿದೆ. ಸಂಗಬೆಟ್ಟು ಗ್ರಾಮದ ಪರನೀರು ನಿವಾಸಿ ನಾಗೇಶ ಧರ್ಣಪ್ಪ ಎಂಬುರವ ರೊಟ್ಟಿ ತಯಾರಿಕಾ ಘಟಕದ ಕೊಠಡಿಗೆ ಮರ ಬಿದ್ದು ಹಾನಿಯಾಗಿದೆ. ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತರ ಎಂಬಲ್ಲಿ ಎರಡು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗೆ ಮಣ್ಣು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಆ ಬಳಿಕ ಗ್ರಾಮ ಪಂಚಾಯಿತಿ ವತಿಯಿಂದ ಮಣ್ಣು ತೆರವುಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>