<p><strong>ಮಂಗಳೂರು</strong>: ಗುಂಡಿ ಬಿದ್ದಿರುವ ರಸ್ತೆಗಳು, ಜಲಸಿರಿ ಕಾಮಗಾರಿಗೆ ರಸ್ತೆ ಅಗೆತ, ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಂಚಾರವೇ ದೊಡ್ಡ ಸಂಕಟವಾಗಿದೆ.</p>.<p>ನಗರದ ಜ್ಯೋತಿ ಸರ್ಕಲ್ ಸಮೀಪ ಜಲಸಿರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆಯನ್ನು ಅಗೆದು ಹಾಕಲಾಗಿದೆ. ಒಂದು ವಾಹನ ಸಾಗುವಷ್ಟು ಚಿಕ್ಕ ರಸ್ತೆ ಬಿಟ್ಟಿರುವುದರಿಂದ ಪ್ರತಿದಿನ ಇಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ಮಣ್ಣು ರಾಶಿ ಹಾಕಿದ್ದು, ನಡೆದುಕೊಂಡು ಹೋಗುವವರಿಗೆ ದಾರಿಯೇ ಇಲ್ಲದಂತಾಗಿದೆ.</p>.<p>ಆಡಂ ಕುದ್ರುವಿನಲ್ಲಿ ರಸ್ತೆಯ ಮೇಲೆ ನೇತ್ರಾವತಿ ನದಿ ನೀರು ಹರಿಯುತ್ತಿದ್ದು, ಲಂಗರು ಹಾಕಿರುವ ದೋಣಿ ತಲುಪಲು ಇನ್ನೊಂದು ದೋಣಿಯಲ್ಲಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಂಗಳವಾರ ಬೆಳಗಿನ ಜಾವ ಬೀಸಿದ ಗಾಳಿಗೆ ಕೊಟ್ಟಾರ ಚೌಕಿಯಲ್ಲಿ ಕಟ್ಟಡವೊಂದರ ಚಾವಣಿಗೆ ಹಾಕಿದ್ದ ತಗಡಿನ ಶೀಟ್ಗಳು ಹಾರಿ ಹೆದ್ದಾರಿಯ ಮೇಲೆ ಬಿದ್ದಿದ್ದವು.</p>.<p>ಸಣ್ಣ ಪ್ರಮಾಣದ ಗುಡ್ಡ ಕುಸಿತ ಆಗಿರುವ ತಾಲ್ಲೂಕಿನ ಕೆತ್ತಿಕಲ್ನಲ್ಲಿ ಮತ್ತೆ ಗುಡ್ಡ ಕುಸಿಯುತ್ತಿದ್ದು, ಮೇಲ್ಭಾಗದಿಂದ ಕೆಸರು ನೀರು ರಸ್ತೆಗೆ ಹರಿದು ಬರುತ್ತಿದೆ. ಸಾರ್ವಜನಿಕರು ಎಚ್ಚರದಿಂದ ಈ ರಸ್ತೆಯಲ್ಲಿ ಪ್ರಯಾಣಿಸಬೇಕು ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತಂಕ ಸೃಷ್ಟಿಸಿತು. ‘ಕೆತ್ತಿಕಲ್ನಲ್ಲಿ ಆ ರೀತಿಯ ಯಾವುದೇ ಆತಂಕ ಇಲ್ಲ. ನಿರಂತರ ನಿಗಾವಹಿಸಲು ತಂಡ ನಿಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು.</p>.<p>ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಗುಂಡಿ ಬಿದ್ದಿರುವ ರಸ್ತೆಗಳು, ಜಲಸಿರಿ ಕಾಮಗಾರಿಗೆ ರಸ್ತೆ ಅಗೆತ, ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಂಚಾರವೇ ದೊಡ್ಡ ಸಂಕಟವಾಗಿದೆ.</p>.<p>ನಗರದ ಜ್ಯೋತಿ ಸರ್ಕಲ್ ಸಮೀಪ ಜಲಸಿರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆಯನ್ನು ಅಗೆದು ಹಾಕಲಾಗಿದೆ. ಒಂದು ವಾಹನ ಸಾಗುವಷ್ಟು ಚಿಕ್ಕ ರಸ್ತೆ ಬಿಟ್ಟಿರುವುದರಿಂದ ಪ್ರತಿದಿನ ಇಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ಮಣ್ಣು ರಾಶಿ ಹಾಕಿದ್ದು, ನಡೆದುಕೊಂಡು ಹೋಗುವವರಿಗೆ ದಾರಿಯೇ ಇಲ್ಲದಂತಾಗಿದೆ.</p>.<p>ಆಡಂ ಕುದ್ರುವಿನಲ್ಲಿ ರಸ್ತೆಯ ಮೇಲೆ ನೇತ್ರಾವತಿ ನದಿ ನೀರು ಹರಿಯುತ್ತಿದ್ದು, ಲಂಗರು ಹಾಕಿರುವ ದೋಣಿ ತಲುಪಲು ಇನ್ನೊಂದು ದೋಣಿಯಲ್ಲಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಂಗಳವಾರ ಬೆಳಗಿನ ಜಾವ ಬೀಸಿದ ಗಾಳಿಗೆ ಕೊಟ್ಟಾರ ಚೌಕಿಯಲ್ಲಿ ಕಟ್ಟಡವೊಂದರ ಚಾವಣಿಗೆ ಹಾಕಿದ್ದ ತಗಡಿನ ಶೀಟ್ಗಳು ಹಾರಿ ಹೆದ್ದಾರಿಯ ಮೇಲೆ ಬಿದ್ದಿದ್ದವು.</p>.<p>ಸಣ್ಣ ಪ್ರಮಾಣದ ಗುಡ್ಡ ಕುಸಿತ ಆಗಿರುವ ತಾಲ್ಲೂಕಿನ ಕೆತ್ತಿಕಲ್ನಲ್ಲಿ ಮತ್ತೆ ಗುಡ್ಡ ಕುಸಿಯುತ್ತಿದ್ದು, ಮೇಲ್ಭಾಗದಿಂದ ಕೆಸರು ನೀರು ರಸ್ತೆಗೆ ಹರಿದು ಬರುತ್ತಿದೆ. ಸಾರ್ವಜನಿಕರು ಎಚ್ಚರದಿಂದ ಈ ರಸ್ತೆಯಲ್ಲಿ ಪ್ರಯಾಣಿಸಬೇಕು ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತಂಕ ಸೃಷ್ಟಿಸಿತು. ‘ಕೆತ್ತಿಕಲ್ನಲ್ಲಿ ಆ ರೀತಿಯ ಯಾವುದೇ ಆತಂಕ ಇಲ್ಲ. ನಿರಂತರ ನಿಗಾವಹಿಸಲು ತಂಡ ನಿಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು.</p>.<p>ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>