<p><strong>ಮಂಗಳೂರು:</strong> ತಲಪಾಡಿ ದೇವಿನಗರದ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಜ.20ರಂದು ಜೀವನಾಡಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಡಿ ಪರೀಕ್ಷೆ ಮತ್ತು ಪಂಚಕರ್ಮದಲ್ಲಿ ಪರಿಣತಿ ಹೊಂದಿರುವ, ನಾಡಿ ಪರೀಕ್ಷೆಯಲ್ಲಿ 500ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರಗಳನ್ನು ನಡೆಸಿರುವ ಸಂಜಯ್ ಕುಮಾರ್ ಪಿ. ಚಾನೆಡ್ ಅವರು ಬೆಳಿಗ್ಗೆ 9ರಿಂದ 5 ಗಂಟೆವರೆಗೆ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಜ.21 ರಂದು ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದರು.</p>.<p>‘ನಾಡಿ ಪರೀಕ್ಷೆಯು ಸಾಂಪ್ರದಾಯಿಕ ರೋಗನಿರ್ಣಯ ತಂತ್ರವಾಗಿದ್ದು, ಅದು ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮದ ಸಮಗ್ರ ಮೌಲ್ಯಮಾಪನ ಮಾಡುತ್ತದೆ’ ಎಂದು ಕಾಲೇಜಿನ ಪ್ರಾಂಶುಪಾಲ ಸಂದೇಶ್ ಬೇಕಲ್ ತಿಳಿಸಿದರು.</p>.<p>ಪ್ರಮುಖರಾದ ಸಮೀರ್ ಪುರಾಣಿಕ್, ಡಾ. ಶಶಾಂಕ್, ದಯಾನಂದ ಕಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ತಲಪಾಡಿ ದೇವಿನಗರದ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಜ.20ರಂದು ಜೀವನಾಡಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಡಿ ಪರೀಕ್ಷೆ ಮತ್ತು ಪಂಚಕರ್ಮದಲ್ಲಿ ಪರಿಣತಿ ಹೊಂದಿರುವ, ನಾಡಿ ಪರೀಕ್ಷೆಯಲ್ಲಿ 500ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರಗಳನ್ನು ನಡೆಸಿರುವ ಸಂಜಯ್ ಕುಮಾರ್ ಪಿ. ಚಾನೆಡ್ ಅವರು ಬೆಳಿಗ್ಗೆ 9ರಿಂದ 5 ಗಂಟೆವರೆಗೆ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಜ.21 ರಂದು ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದರು.</p>.<p>‘ನಾಡಿ ಪರೀಕ್ಷೆಯು ಸಾಂಪ್ರದಾಯಿಕ ರೋಗನಿರ್ಣಯ ತಂತ್ರವಾಗಿದ್ದು, ಅದು ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮದ ಸಮಗ್ರ ಮೌಲ್ಯಮಾಪನ ಮಾಡುತ್ತದೆ’ ಎಂದು ಕಾಲೇಜಿನ ಪ್ರಾಂಶುಪಾಲ ಸಂದೇಶ್ ಬೇಕಲ್ ತಿಳಿಸಿದರು.</p>.<p>ಪ್ರಮುಖರಾದ ಸಮೀರ್ ಪುರಾಣಿಕ್, ಡಾ. ಶಶಾಂಕ್, ದಯಾನಂದ ಕಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>