<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಗಾಳಿಯೂ ಜೋರಾಗಿದ್ದು, ಅಲ್ಲಲ್ಲಿ ಮರ ಮುರಿದು ಬಿದ್ದು ಹಾನಿ ಸಂಭವಿಸಿದೆ.</p>.<p>ಸರಿಪಳ್ಳ-ಕನ್ನಗುಡ್ಡೆ ಮುಖ್ಯ ರಸ್ತೆಯಲ್ಲಿ ಸೋಮವಾರ ರಾತ್ರಿ ಮರ ಮುರಿದು ಬಿದ್ದು ಸಂಚಾರ ವ್ಯತ್ಯಯವಾಗಿತ್ತು.</p><p>ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. </p><p>ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬಂಟ್ವಾಳ ತಾಲ್ಲೂಕಿನಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ನದಿ ತಟದ ಗ್ರಾಮಗಳ ಶಾಲೆಗಳಿಗೆ ರಜೆ ನೀಡಲಾಗಿದೆ.</p><p>ರಸ್ತೆಯ ಮೇಲೆ ನದಿ ನೀರು ಹರಿಯುತ್ತಿದ್ದು, ನದಿ ತಟದ ಗ್ರಾಮಾಂತರ ಪ್ರದೇಶಗಳಾದ ಬಾಳ್ತಿಲ, ಪೆರ್ನೆ, ಕಡೆಶ್ವಾಲಯ ಮತ್ತಿತರ ಕಡೆಗಳಲ್ಲಿ ಎಸ್ಡಿಎಂಸಿ ಮತ್ತು ಸಿಆರ್ಪಿಗಳು ಪರಿಸ್ಥಿತಿ ಅವಲೋಕಿಸಿ ರಜೆ ನೀಡುವಂತೆ ತಹಶೀಲ್ದಾರರು ಸೂಚಿಸಿದ್ದರು. ಅದರಂತೆ ಕೆಲವು ಶಾಲೆಗಳಿಗೆ ರಜೆ ನೀಡಲಾಗಿದೆ.</p><p>ಮೂಲ್ಕಿ ತಾಲ್ಲೂಕಿನಲ್ಲೂ ಬೆಳಗಿನಿಂದ ನಿರಂತರ ಮಳೆಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಗಾಳಿಯೂ ಜೋರಾಗಿದ್ದು, ಅಲ್ಲಲ್ಲಿ ಮರ ಮುರಿದು ಬಿದ್ದು ಹಾನಿ ಸಂಭವಿಸಿದೆ.</p>.<p>ಸರಿಪಳ್ಳ-ಕನ್ನಗುಡ್ಡೆ ಮುಖ್ಯ ರಸ್ತೆಯಲ್ಲಿ ಸೋಮವಾರ ರಾತ್ರಿ ಮರ ಮುರಿದು ಬಿದ್ದು ಸಂಚಾರ ವ್ಯತ್ಯಯವಾಗಿತ್ತು.</p><p>ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. </p><p>ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬಂಟ್ವಾಳ ತಾಲ್ಲೂಕಿನಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ನದಿ ತಟದ ಗ್ರಾಮಗಳ ಶಾಲೆಗಳಿಗೆ ರಜೆ ನೀಡಲಾಗಿದೆ.</p><p>ರಸ್ತೆಯ ಮೇಲೆ ನದಿ ನೀರು ಹರಿಯುತ್ತಿದ್ದು, ನದಿ ತಟದ ಗ್ರಾಮಾಂತರ ಪ್ರದೇಶಗಳಾದ ಬಾಳ್ತಿಲ, ಪೆರ್ನೆ, ಕಡೆಶ್ವಾಲಯ ಮತ್ತಿತರ ಕಡೆಗಳಲ್ಲಿ ಎಸ್ಡಿಎಂಸಿ ಮತ್ತು ಸಿಆರ್ಪಿಗಳು ಪರಿಸ್ಥಿತಿ ಅವಲೋಕಿಸಿ ರಜೆ ನೀಡುವಂತೆ ತಹಶೀಲ್ದಾರರು ಸೂಚಿಸಿದ್ದರು. ಅದರಂತೆ ಕೆಲವು ಶಾಲೆಗಳಿಗೆ ರಜೆ ನೀಡಲಾಗಿದೆ.</p><p>ಮೂಲ್ಕಿ ತಾಲ್ಲೂಕಿನಲ್ಲೂ ಬೆಳಗಿನಿಂದ ನಿರಂತರ ಮಳೆಯಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>