<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮಳೆ ಬಿರುಸುಗೊಂಡಿದೆ. ಮಂಗಳೂರು ನಗರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, 9 ಗಂಟೆ ಕಳೆದರೂ ಬೆಳಗಿನ 6 ಗಂಟೆಯ ವಾತಾವರಣದ ಅನುಭವವಾಗುತ್ತಿದೆ. ವಾಹನ ಸವಾರರು ಲೈಟ್ ಹಾಕಿಕೊಂಡು ವಾಹನ ಚಲಾಯಿಸುತ್ತಿದ್ದಾರೆ.</p>.<p>ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲ್ಲೂಕುಗಳಲ್ಲಿ ಶಾಲೆ- ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಂಗಳೂರು, ಉಳ್ಳಾಲ, ಮೂಲ್ಕಿ, ಮೂಡುಬಿದಿರೆ ತಾಲ್ಲೂಕುಗಳಿಗೆ ರಜೆ ನೀಡಲಾಗಿಲ್ಲ. ಆದರೆ, ಈ ಎಲ್ಲ ತಾಲ್ಲೂಕುಗಳಲ್ಲೂ ಧಾರಾಕಾರ ಮಳೆಯಾಗುತ್ತಿದೆ. </p><p>'ವಿಪರೀತ ಮಳೆಯ ಸಂದರ್ಭದಲ್ಲಿ ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಪರಿಸ್ಥಿತಿ ನೋಡಿಕೊಂಡು ಅನುಕೂಲ ಇದ್ದರೆ ಮಾತ್ರ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಬಹುದು . ಎಲ್ಲ ಶಾಲೆಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಮಂಗಳೂರು ಉತ್ತರದ ಕ್ಷೇತ್ರಶಿಕ್ಷಣಾಧಿಕಾರಿ ತಿಳಿಸಿದ್ದಾರೆ.</p>.<h2>ಧರೆ ಕುಸಿತ: ಸಂಚಾರ ಸ್ಥಗಿತ</h2>.<p><strong>ಬಂಟ್ವಾಳ</strong>: ಇಲ್ಲಿನ ರಾಯಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುರಾಲು ಎಂಬಲ್ಲಿ ಶುಕ್ರವಾರ ಧರೆ ಕುಸಿದು ಗ್ರಾಮೀಣ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.</p><p>ಇಲ್ಲಿನ ರಾಯಿ, ಕೊಯಿಲ ಮತ್ತು ಪಂಜಿಕಲ್ಲು ಗ್ರಾಮಗಳನ್ನು ಬೆಸೆಯುವ ಸಂಪರ್ಕ ಕೊಂಡಿ ರಸ್ತೆ 10 ವರ್ಷಗಳ ಹಿಂದೆ ನಿರ್ಮಾಣಗೊಂಡಿತ್ತು. ಈ ರಸ್ತೆಯ ಒಂದು ಭಾಗ ಮಾತ್ರ ಉದ್ಯೋಗ ಖಾತರಿ ಯೋಜನೆಯಡಿ ಕಾಂಕ್ರಿಟೀಕರಣಗೊಂಡಿದೆ. ರಸ್ತೆಯಲ್ಲೇ ಮಳೆನೀರು ಹರಿದು ಹೊಂಡಮಯ ಮಣ್ಣಿನ ರಸ್ತೆಯಾಗಿದೆ. ಈಚೆಗಷ್ಟೇ ಇದೇ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಡೈರಿಗೆ ಹಾಲು ಕೊಂಡೊಯ್ಯುತ್ತಿದ್ದ ಹೈನುಗಾರರೊಬ್ಬರು ಬಿದ್ದು, ಕೈ ಮೂಳೆ ಮುರಿದುಕೊಂಡಿದ್ದರು. </p><p>ಪ್ರತಿ ಚುನಾವಣೆ ವೇಳೆ ರಸ್ತೆ ಕಾಂಕ್ರಿಟೀಕರಣಗೊಳಿಸುವುದಾಗಿ ಭರವಸೆ ನೀಡುವ ರಾಜಕಾರಣಿಗಳು ಬಳಿಕ ಈ ಕಡೆಗೆ ತಿರುಗಿಯೂ ನೋಡುತ್ತಿಲ್ಲ. ಈ ಬಗ್ಗೆ ಗ್ರಾಮ ಪಂಚಾಯತಿ ಮತ್ತು ಶಾಸಕರು ಸಹಿತ ಜನಪ್ರತಿನಿಧಿಗಳಿಗೆ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ . </p><p>ಈಗ ಮಳೆಗೆ ಪ್ರತಿದಿನ ಗುಡ್ಡದ ಮಣ್ಣು ಕುಸಿದು ಬೀಳುತ್ತಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದಾಗಿ ಕೆಳಭಾಗದ ಕೆರೆ ಮತ್ತು ಮನೆಗಳಿಗೂ ಮಣ್ಣು ಕುಸಿಯುವ ಆತಂಕ ಉಂಟಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕು ಎಂದು ಸ್ಥಳೀಯ ಕೃಷಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮಳೆ ಬಿರುಸುಗೊಂಡಿದೆ. ಮಂಗಳೂರು ನಗರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, 9 ಗಂಟೆ ಕಳೆದರೂ ಬೆಳಗಿನ 6 ಗಂಟೆಯ ವಾತಾವರಣದ ಅನುಭವವಾಗುತ್ತಿದೆ. ವಾಹನ ಸವಾರರು ಲೈಟ್ ಹಾಕಿಕೊಂಡು ವಾಹನ ಚಲಾಯಿಸುತ್ತಿದ್ದಾರೆ.</p>.<p>ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲ್ಲೂಕುಗಳಲ್ಲಿ ಶಾಲೆ- ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಂಗಳೂರು, ಉಳ್ಳಾಲ, ಮೂಲ್ಕಿ, ಮೂಡುಬಿದಿರೆ ತಾಲ್ಲೂಕುಗಳಿಗೆ ರಜೆ ನೀಡಲಾಗಿಲ್ಲ. ಆದರೆ, ಈ ಎಲ್ಲ ತಾಲ್ಲೂಕುಗಳಲ್ಲೂ ಧಾರಾಕಾರ ಮಳೆಯಾಗುತ್ತಿದೆ. </p><p>'ವಿಪರೀತ ಮಳೆಯ ಸಂದರ್ಭದಲ್ಲಿ ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಪರಿಸ್ಥಿತಿ ನೋಡಿಕೊಂಡು ಅನುಕೂಲ ಇದ್ದರೆ ಮಾತ್ರ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಬಹುದು . ಎಲ್ಲ ಶಾಲೆಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಮಂಗಳೂರು ಉತ್ತರದ ಕ್ಷೇತ್ರಶಿಕ್ಷಣಾಧಿಕಾರಿ ತಿಳಿಸಿದ್ದಾರೆ.</p>.<h2>ಧರೆ ಕುಸಿತ: ಸಂಚಾರ ಸ್ಥಗಿತ</h2>.<p><strong>ಬಂಟ್ವಾಳ</strong>: ಇಲ್ಲಿನ ರಾಯಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುರಾಲು ಎಂಬಲ್ಲಿ ಶುಕ್ರವಾರ ಧರೆ ಕುಸಿದು ಗ್ರಾಮೀಣ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.</p><p>ಇಲ್ಲಿನ ರಾಯಿ, ಕೊಯಿಲ ಮತ್ತು ಪಂಜಿಕಲ್ಲು ಗ್ರಾಮಗಳನ್ನು ಬೆಸೆಯುವ ಸಂಪರ್ಕ ಕೊಂಡಿ ರಸ್ತೆ 10 ವರ್ಷಗಳ ಹಿಂದೆ ನಿರ್ಮಾಣಗೊಂಡಿತ್ತು. ಈ ರಸ್ತೆಯ ಒಂದು ಭಾಗ ಮಾತ್ರ ಉದ್ಯೋಗ ಖಾತರಿ ಯೋಜನೆಯಡಿ ಕಾಂಕ್ರಿಟೀಕರಣಗೊಂಡಿದೆ. ರಸ್ತೆಯಲ್ಲೇ ಮಳೆನೀರು ಹರಿದು ಹೊಂಡಮಯ ಮಣ್ಣಿನ ರಸ್ತೆಯಾಗಿದೆ. ಈಚೆಗಷ್ಟೇ ಇದೇ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಡೈರಿಗೆ ಹಾಲು ಕೊಂಡೊಯ್ಯುತ್ತಿದ್ದ ಹೈನುಗಾರರೊಬ್ಬರು ಬಿದ್ದು, ಕೈ ಮೂಳೆ ಮುರಿದುಕೊಂಡಿದ್ದರು. </p><p>ಪ್ರತಿ ಚುನಾವಣೆ ವೇಳೆ ರಸ್ತೆ ಕಾಂಕ್ರಿಟೀಕರಣಗೊಳಿಸುವುದಾಗಿ ಭರವಸೆ ನೀಡುವ ರಾಜಕಾರಣಿಗಳು ಬಳಿಕ ಈ ಕಡೆಗೆ ತಿರುಗಿಯೂ ನೋಡುತ್ತಿಲ್ಲ. ಈ ಬಗ್ಗೆ ಗ್ರಾಮ ಪಂಚಾಯತಿ ಮತ್ತು ಶಾಸಕರು ಸಹಿತ ಜನಪ್ರತಿನಿಧಿಗಳಿಗೆ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ . </p><p>ಈಗ ಮಳೆಗೆ ಪ್ರತಿದಿನ ಗುಡ್ಡದ ಮಣ್ಣು ಕುಸಿದು ಬೀಳುತ್ತಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದಾಗಿ ಕೆಳಭಾಗದ ಕೆರೆ ಮತ್ತು ಮನೆಗಳಿಗೂ ಮಣ್ಣು ಕುಸಿಯುವ ಆತಂಕ ಉಂಟಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕು ಎಂದು ಸ್ಥಳೀಯ ಕೃಷಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>