<p><strong>ಮಂಗಳೂರು</strong>: ‘ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೊಳಿಸಿರುವ ಹೊಸ ಕ್ರಿಮಿನಲ್ ಕಾನೂನುಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಅಲ್ಪಸಂಖ್ಯಾತರು, ಪರಿಶಿಷ್ಟರು, ಆದಿವಾಸಿಗಳು, ಹಿಂದುಳಿದ ವರ್ಗದವರು ಈ ಕಾನೂನು ವ್ಯವಸ್ಥೆಯಿಂದ ಸಮಸ್ಯೆ ಎದುರಿಸಬೇಕಾಗಬಹುದು’ ಎಂದು ಹೈಕೋರ್ಟ್ ವಕೀಲ ಕ್ಲಿಫ್ಟನ್ ಡಿ. ರೊಸೇರಿಯೊ ಹೇಳಿದರು.</p>.<p>ಸಿಟಿಜನ್ ಫೋರಂ ಫಾರ್ ಮಂಗಳೂರು ಡೆವಲಪ್ಮೆಂಟ್ ವತಿಯಿಂದ ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಭಾಗಿತ್ವದಲ್ಲಿ ನಗರದ ಸಹೋದಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಹೊಸ ಕ್ರಿಮಿನಲ್ ಕಾನೂನುಗಳು’ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹೊಸ ಕಾನೂನು ಅನುಷ್ಠಾನವು ಸಂಘ ಪರಿವಾರಕ್ಕೆ ಮಾತ್ರ ಖುಷಿ ನೀಡಿದೆ. ಆಯಾ ರಾಜ್ಯ ಸರ್ಕಾರಕ್ಕೆ ಈ ಕಾನೂನಿನಲ್ಲಿ ತಿದ್ದುಪಡಿ ತರಲು ಅವಕಾಶ ಇದ್ದು, ಕರ್ನಾಟಕ ಸರ್ಕಾರದ ಗಮನ ಸೆಳೆಯಲಾಗಿದೆ ಮತ್ತು ಗೃಹ ಸಚಿವರ ಜೊತೆ ಚರ್ಚಿಸಲಾಗಿದೆ ಎಂದರು. </p>.<p>ಹೊಸ ಕಾನೂನಿನಡಿ ಪೊಲೀಸರಿಗೆ ಹೆಚ್ಚು ಅಧಿಕಾರ ದೊರೆತಿದೆ. ಇದರಿಂದ ಕಾನೂನು ದುರ್ಬಳಕೆ ಆಗುವ ಸಾಧ್ಯತೆಯೂ ಇದೆ. ಆದೇಶ ಪಾಲನೆ ಮಾಡಿಲ್ಲ ಎಂಬ ಕಾರಣವೊಡ್ಡಿ ಪೊಲೀಸರು ಯಾವುದೇ ಕ್ಷಣದಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದು, ಠಾಣೆಯಲ್ಲಿ ಇಟ್ಟುಕೊಳ್ಳಬಹುದು. ಆರೋಪಿಯ ಚಿತ್ರವನ್ನು ಠಾಣೆಗಳಲ್ಲಿ ಪ್ರಕಟಿಸಬಹುದು. ಆರೋಪ ಸಾಬೀತಾಗುವ ಮುನ್ನವೇ ಈ ರೀತಿ ಮಾಡಲು ಅವಕಾಶ ಇರುವುದರಿಂದ ಆ ವ್ಯಕ್ತಿ ಮತ್ತು ಅವರ ಕುಟುಂಬಕ್ಕೆ ಆಗುವ ಅವಮಾನಕ್ಕೆ ಯಾರನ್ನು ಹೊಣೆ ಮಾಡಬೇಕು. ಬೆಂಗಳೂರಿನಲ್ಲಿ ಈ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾಗಿದ್ದು, ಮಂಗಳೂರಿನ ಜನರು ಕೂಡ ಎಚ್ಚೆತ್ತುಕೊಳ್ಳಬೇಕು ಎಂದರು.</p>.<p>ಸರ್ಕಾರದ ವಿರುದ್ಧ ಪ್ರತಿಭಟಿಸುವ ಅಧಿಕಾರವನ್ನೂ ಜನರು ಕಳೆದುಕೊಳ್ಳಬೇಕಾಗಿ ಬರಬಹುದು. ಹೊಸ ಕಾನೂನಿನ ಪ್ರಕಾರ ಇದು ಅಪರಾಧವಾಗುತ್ತದೆ. ಎನ್ಡಿಎ ಸರ್ಕಾರವು ದೇಶದ ಜನರಿಗೆ ಸರಿಯಾದ ಮಾಹಿತಿ ನೀಡದೆ, ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ಸಂಸತ್ನಲ್ಲಿ ಹೊಸ ಕಾನೂನನ್ನು ಮಂಡಿಸಿದೆ. ಚರ್ಚೆಗೂ ಅವಕಾಶ ನೀಡಿಲ್ಲ. ಜನರ ಪ್ರತಿಭಟಿಸುವ ಹಕ್ಕನ್ನು ಕೇಂದ್ರ ಸರ್ಕಾರ ಕಸಿಯಲು ಮುಂದಾಗಿರುವುದು ದುರಂತ ಎಂದು ಹೇಳಿದರು.</p>.<p>ಸಾಮಾಜಿಕ ಹೋರಾಟಗಾರ್ತಿ ವಿದ್ಯಾ ದಿನಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೊಳಿಸಿರುವ ಹೊಸ ಕ್ರಿಮಿನಲ್ ಕಾನೂನುಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಅಲ್ಪಸಂಖ್ಯಾತರು, ಪರಿಶಿಷ್ಟರು, ಆದಿವಾಸಿಗಳು, ಹಿಂದುಳಿದ ವರ್ಗದವರು ಈ ಕಾನೂನು ವ್ಯವಸ್ಥೆಯಿಂದ ಸಮಸ್ಯೆ ಎದುರಿಸಬೇಕಾಗಬಹುದು’ ಎಂದು ಹೈಕೋರ್ಟ್ ವಕೀಲ ಕ್ಲಿಫ್ಟನ್ ಡಿ. ರೊಸೇರಿಯೊ ಹೇಳಿದರು.</p>.<p>ಸಿಟಿಜನ್ ಫೋರಂ ಫಾರ್ ಮಂಗಳೂರು ಡೆವಲಪ್ಮೆಂಟ್ ವತಿಯಿಂದ ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಭಾಗಿತ್ವದಲ್ಲಿ ನಗರದ ಸಹೋದಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಹೊಸ ಕ್ರಿಮಿನಲ್ ಕಾನೂನುಗಳು’ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹೊಸ ಕಾನೂನು ಅನುಷ್ಠಾನವು ಸಂಘ ಪರಿವಾರಕ್ಕೆ ಮಾತ್ರ ಖುಷಿ ನೀಡಿದೆ. ಆಯಾ ರಾಜ್ಯ ಸರ್ಕಾರಕ್ಕೆ ಈ ಕಾನೂನಿನಲ್ಲಿ ತಿದ್ದುಪಡಿ ತರಲು ಅವಕಾಶ ಇದ್ದು, ಕರ್ನಾಟಕ ಸರ್ಕಾರದ ಗಮನ ಸೆಳೆಯಲಾಗಿದೆ ಮತ್ತು ಗೃಹ ಸಚಿವರ ಜೊತೆ ಚರ್ಚಿಸಲಾಗಿದೆ ಎಂದರು. </p>.<p>ಹೊಸ ಕಾನೂನಿನಡಿ ಪೊಲೀಸರಿಗೆ ಹೆಚ್ಚು ಅಧಿಕಾರ ದೊರೆತಿದೆ. ಇದರಿಂದ ಕಾನೂನು ದುರ್ಬಳಕೆ ಆಗುವ ಸಾಧ್ಯತೆಯೂ ಇದೆ. ಆದೇಶ ಪಾಲನೆ ಮಾಡಿಲ್ಲ ಎಂಬ ಕಾರಣವೊಡ್ಡಿ ಪೊಲೀಸರು ಯಾವುದೇ ಕ್ಷಣದಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದು, ಠಾಣೆಯಲ್ಲಿ ಇಟ್ಟುಕೊಳ್ಳಬಹುದು. ಆರೋಪಿಯ ಚಿತ್ರವನ್ನು ಠಾಣೆಗಳಲ್ಲಿ ಪ್ರಕಟಿಸಬಹುದು. ಆರೋಪ ಸಾಬೀತಾಗುವ ಮುನ್ನವೇ ಈ ರೀತಿ ಮಾಡಲು ಅವಕಾಶ ಇರುವುದರಿಂದ ಆ ವ್ಯಕ್ತಿ ಮತ್ತು ಅವರ ಕುಟುಂಬಕ್ಕೆ ಆಗುವ ಅವಮಾನಕ್ಕೆ ಯಾರನ್ನು ಹೊಣೆ ಮಾಡಬೇಕು. ಬೆಂಗಳೂರಿನಲ್ಲಿ ಈ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾಗಿದ್ದು, ಮಂಗಳೂರಿನ ಜನರು ಕೂಡ ಎಚ್ಚೆತ್ತುಕೊಳ್ಳಬೇಕು ಎಂದರು.</p>.<p>ಸರ್ಕಾರದ ವಿರುದ್ಧ ಪ್ರತಿಭಟಿಸುವ ಅಧಿಕಾರವನ್ನೂ ಜನರು ಕಳೆದುಕೊಳ್ಳಬೇಕಾಗಿ ಬರಬಹುದು. ಹೊಸ ಕಾನೂನಿನ ಪ್ರಕಾರ ಇದು ಅಪರಾಧವಾಗುತ್ತದೆ. ಎನ್ಡಿಎ ಸರ್ಕಾರವು ದೇಶದ ಜನರಿಗೆ ಸರಿಯಾದ ಮಾಹಿತಿ ನೀಡದೆ, ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ಸಂಸತ್ನಲ್ಲಿ ಹೊಸ ಕಾನೂನನ್ನು ಮಂಡಿಸಿದೆ. ಚರ್ಚೆಗೂ ಅವಕಾಶ ನೀಡಿಲ್ಲ. ಜನರ ಪ್ರತಿಭಟಿಸುವ ಹಕ್ಕನ್ನು ಕೇಂದ್ರ ಸರ್ಕಾರ ಕಸಿಯಲು ಮುಂದಾಗಿರುವುದು ದುರಂತ ಎಂದು ಹೇಳಿದರು.</p>.<p>ಸಾಮಾಜಿಕ ಹೋರಾಟಗಾರ್ತಿ ವಿದ್ಯಾ ದಿನಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>