<p><strong>ಪುತ್ತೂರು:</strong> ನ್ಯಾಯಾಲಯದಲ್ಲಿ ದಾಖಲಾಗಿರುವ ಮತ್ತು ಇತರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಪುತ್ತೂರು ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್ನಲ್ಲಿ 1,185 ಪ್ರಕರಣಗಳ ಪೈಕಿ 537 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ ₹ 2.33 ಕೋಟಿ ಪರಿಹಾರ ಮೊತ್ತ ವಿತರಿಸಲು ಆದೇಶಿಸಲಾಗಿದೆ.</p>.<p>ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಜನನ ಮರಣ ನೋಂದಣಿ, ಚೆಕ್ ಅಮಾನ್ಯ, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.</p>.<p>ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ.ಅವರ ನ್ಯಾಯಾಲಯದಲ್ಲಿ 51 ಪ್ರಕರಣಗಳಲ್ಲಿ 17 ಇತ್ಯರ್ಥಗೊಂಡಿದ್ದು, ₹ 54.68 ಲಕ್ಷ ಪರಿಹಾರ ವಿತರಣೆಗೆ ಆದೇಶವಾಗಿದೆ. ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಪ್ರಿಯಾರವಿ ಜೋಗಲೇಕರ್ ಅವರ ನ್ಯಾಯಾಲಯದಲ್ಲಿ 127 ಪ್ರಕರಣಗಳಲ್ಲಿ 57 ಇತ್ಯರ್ಥಗೊಂಡಿದ್ದು, ₹ 36.57 ಲಕ್ಷ ಪರಿಹಾರ ವಿತರಣೆಗೆ ಆದೇಶ ಮಾಡಲಾಗಿದೆ. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಮತ್ತು ಜೆಎಮ್ಎಫ್ಸಿ ಆಗಿರುವ ಪ್ರಿಯಾ ಜೋವಲೆಕರ್ ಅವರ ನ್ಯಾಯಾಲಯದಲ್ಲಿ 158 ಪ್ರಕರಣಗಳಲ್ಲಿ 63 ಪ್ರಕರಣ ಇತ್ಯರ್ಥಗೊಂಡಿದ್ದು, ₹ 72.79 ಲಕ್ಷ ಪರಿಹಾರ ವಿತರಣೆಗೆ ಆದೇಶ ಆಗಿದೆ.</p>.<p>ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಂಎಫ್ಸಿ ನ್ಯಾಯಾಧೀಶೆ ಅರ್ಚನಾ ಕೆ.ಉನ್ನಿತಾನ್ ಅವರ ನ್ಯಾಯಾಲಯದಲ್ಲಿ 300 ಪ್ರಕರಣಗಳಲ್ಲಿ 38 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹ 52.44 ಲಕ್ಷ ಪರಿಹಾರ ವಿತರಣೆಗೆ ಆದೇಶ ಆಗಿದೆ. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ, ಜೆಎಂಎಫ್ಸಿ ಶಿವಣ್ಣ ಎಚ್.ಆರ್. ಅವರ ನ್ಯಾಯಾಲಯದಲ್ಲಿ 318 ಪ್ರಕರಣಗಳಲ್ಲಿ 185 ಇತ್ಯರ್ಥಗೊಂಡಿದ್ದು, ₹ 26,850 ಪರಿಹಾರ ವಿತರಣೆಗೆ ಆದೇಶ ಆಗಿದೆ. 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ಸಿ ಯೋಗೇಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ 231 ಪ್ರಕರಣಗಳಲ್ಲಿ 180 ಪ್ರಕರಣ ಇತ್ಯರ್ಥಗೊಂಡಿದ್ದು, ₹ 16.28 ಲಕ್ಷ ಪರಿಹಾರ ವಿತರಣೆಗೆ ಆದೇಶ ಆಗಿದೆ.</p>.<p>ಸಂಧಾನಕಾರರಾಗಿ ವಕೀಲರಾದ ಅಶ್ವಿನಿ ರೈ, ಚಂದ್ರಾವತಿ ಸಿ.ಟಿ., ಮಿಥುನ್ ರೈ, ಸುಶ್ಮಿತಾ, ರಾಜೇಶ್ವರಿ ಆಚಾರ್ಯ ಸಹಕರಿಸಿದ್ದರು.</p>.<p>ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಅವರು ನೇಮಕ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ನ್ಯಾಯಾಲಯದಲ್ಲಿ ದಾಖಲಾಗಿರುವ ಮತ್ತು ಇತರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಪುತ್ತೂರು ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್ನಲ್ಲಿ 1,185 ಪ್ರಕರಣಗಳ ಪೈಕಿ 537 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ ₹ 2.33 ಕೋಟಿ ಪರಿಹಾರ ಮೊತ್ತ ವಿತರಿಸಲು ಆದೇಶಿಸಲಾಗಿದೆ.</p>.<p>ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಜನನ ಮರಣ ನೋಂದಣಿ, ಚೆಕ್ ಅಮಾನ್ಯ, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.</p>.<p>ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ.ಅವರ ನ್ಯಾಯಾಲಯದಲ್ಲಿ 51 ಪ್ರಕರಣಗಳಲ್ಲಿ 17 ಇತ್ಯರ್ಥಗೊಂಡಿದ್ದು, ₹ 54.68 ಲಕ್ಷ ಪರಿಹಾರ ವಿತರಣೆಗೆ ಆದೇಶವಾಗಿದೆ. ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಪ್ರಿಯಾರವಿ ಜೋಗಲೇಕರ್ ಅವರ ನ್ಯಾಯಾಲಯದಲ್ಲಿ 127 ಪ್ರಕರಣಗಳಲ್ಲಿ 57 ಇತ್ಯರ್ಥಗೊಂಡಿದ್ದು, ₹ 36.57 ಲಕ್ಷ ಪರಿಹಾರ ವಿತರಣೆಗೆ ಆದೇಶ ಮಾಡಲಾಗಿದೆ. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಮತ್ತು ಜೆಎಮ್ಎಫ್ಸಿ ಆಗಿರುವ ಪ್ರಿಯಾ ಜೋವಲೆಕರ್ ಅವರ ನ್ಯಾಯಾಲಯದಲ್ಲಿ 158 ಪ್ರಕರಣಗಳಲ್ಲಿ 63 ಪ್ರಕರಣ ಇತ್ಯರ್ಥಗೊಂಡಿದ್ದು, ₹ 72.79 ಲಕ್ಷ ಪರಿಹಾರ ವಿತರಣೆಗೆ ಆದೇಶ ಆಗಿದೆ.</p>.<p>ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಂಎಫ್ಸಿ ನ್ಯಾಯಾಧೀಶೆ ಅರ್ಚನಾ ಕೆ.ಉನ್ನಿತಾನ್ ಅವರ ನ್ಯಾಯಾಲಯದಲ್ಲಿ 300 ಪ್ರಕರಣಗಳಲ್ಲಿ 38 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹ 52.44 ಲಕ್ಷ ಪರಿಹಾರ ವಿತರಣೆಗೆ ಆದೇಶ ಆಗಿದೆ. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ, ಜೆಎಂಎಫ್ಸಿ ಶಿವಣ್ಣ ಎಚ್.ಆರ್. ಅವರ ನ್ಯಾಯಾಲಯದಲ್ಲಿ 318 ಪ್ರಕರಣಗಳಲ್ಲಿ 185 ಇತ್ಯರ್ಥಗೊಂಡಿದ್ದು, ₹ 26,850 ಪರಿಹಾರ ವಿತರಣೆಗೆ ಆದೇಶ ಆಗಿದೆ. 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ಸಿ ಯೋಗೇಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ 231 ಪ್ರಕರಣಗಳಲ್ಲಿ 180 ಪ್ರಕರಣ ಇತ್ಯರ್ಥಗೊಂಡಿದ್ದು, ₹ 16.28 ಲಕ್ಷ ಪರಿಹಾರ ವಿತರಣೆಗೆ ಆದೇಶ ಆಗಿದೆ.</p>.<p>ಸಂಧಾನಕಾರರಾಗಿ ವಕೀಲರಾದ ಅಶ್ವಿನಿ ರೈ, ಚಂದ್ರಾವತಿ ಸಿ.ಟಿ., ಮಿಥುನ್ ರೈ, ಸುಶ್ಮಿತಾ, ರಾಜೇಶ್ವರಿ ಆಚಾರ್ಯ ಸಹಕರಿಸಿದ್ದರು.</p>.<p>ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಅವರು ನೇಮಕ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>